ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಗಾಲ್ಯಾಂಡ್ ಮಾಜಿ ರಾಜ್ಯಪಾಲ ಉಡುಪಿ ಮೂಲದ ಪಿ.ಬಿ.ಆಚಾರ್ಯ ನಿಧನ

Published 10 ನವೆಂಬರ್ 2023, 9:04 IST
Last Updated 10 ನವೆಂಬರ್ 2023, 9:04 IST
ಅಕ್ಷರ ಗಾತ್ರ

ಉಡುಪಿ: ನಾಗಾಲ್ಯಾಂಡ್ ಮಾಜಿ ರಾಜ್ಯಪಾಲರಾದ ಪದ್ಮನಾಭ ಬಾಲಕೃಷ್ಣ ಆಚಾರ್ಯ (ಪಿ.ಬಿ.ಆಚಾರ್ಯ) ಶುಕ್ರವಾರ ಮುಂಬೈನ ನಿವಾಸದಲ್ಲಿ ನಿಧನರಾದರು

ಮೂಲತಃ ಉಡುಪಿಯವರಾದ ಪಿ.ಬಿ.ಆಚಾರ್ಯ ಅವರಿಗೆ ಪತ್ನಿ, ಮೂವರು ಪುತ್ರರು, ಓರ್ವ ಪುತ್ರಿ ಇದ್ದಾರೆ.

ಉಡುಪಿಯ ಎಂಜಿಎಂ ಕಾಲೇಜಿನಲ್ಲಿ ಪದವಿ, ಕ್ರಿಶ್ಚಿಯನ್ ಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ಶಿಕ್ಷಣ ಪಡೆದು ಮುಂಬೈನಲ್ಲಿ ನೆಲೆಸಿದ್ದರು.

ತ್ರಿಪುರಾ, ಅಸ್ಸಾಂ,ನಾಗಾಲ್ಯಾಂಡ್, ಮಣಿಪುರ, ಅರುಣಾಚಲ ಪ್ರದೇಶದ ಗವರ್ನರ್ ಆಗಿ ಪಿ.ಬಿ. ಆಚಾರ್ಯ ಸೇವೆ ಸಲ್ಲಿಸಿದ್ದರು.

ಎಬಿವಿಪಿ, ಆರ್‌ಎಸ್‌ಎಸ್‌ನಲ್ಲಿ ಉನ್ನತ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸಿದ್ದ ಪಿ.ಬಿ.ಆಚಾರ್ಯ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿಯೂ ಕೆಲಸ ಮಾಡಿದ್ದರು.

ಹುಟ್ಟೂರು ಉಡುಪಿ ಜತೆಗಿನ ನಂಟು ಉಳಿಸಿಕೊಂಡಿದ್ದ ಆಚಾರ್ಯರು ಉಡುಪಿಯ ಅಷ್ಠಮಠಗಳಿಗೆ ಆಗಾಗ ಭೇಟಿ ನೀಡುತ್ತಿದ್ದರು. ಮಾಹೆ ವಿಶ್ವವಿದ್ಯಾಲಯದ ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು‌.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT