<p>ಉಡುಪಿ: ಎಸ್ಐಆರ್, ತೈಲ ಬೆಲೆ ಏರಿಕೆ ವಿರೋಧಿಸಿ ಹಾಗೂ ನೀಟ್ ಹಗರಣವನ್ನು ಖಂಡಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ವತಿಯಿಂದ ನಗರದ ಬ್ರಹ್ಮಗಿರಿಯ ಕಾಂಗ್ರೆಸ್ ಭವನದಿಂದ ಜೋಡುಕಟ್ಟೆಯವರೆಗೆ ಶನಿವಾರ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಿತು.</p>.<p>ಜೋಡುಕಟ್ಟೆಯ ಬಳಿ ರಸ್ತೆ ತಡೆ ನಡೆಸಲು ಯತ್ನಿಸಿದ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದು ಬಳಿಕ ಬಿಡುಗಡೆಗೊಳಿಸಿದರು.</p>.<p>ಪ್ರತಿಭಟನೆಯಲ್ಲಿ ಮಾತನಾಡಿದ ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ, ‘ಇಂದು ರಷ್ಯಾದಿಂದ ಕಚ್ಚಾ ತೈಲ ಖರೀದಿಸಬೇಕಾದರೆ ಅಮೆರಿಕದಿಂದ ಅನುಮತಿ ಪಡೆಯುವ ಸ್ಥಿತಿ ನಿರ್ಮಾಣವಾಗಿದೆ’ ಎಂದು ಆರೋಪಿಸಿದರು.</p>.<p>‘ಕೇಂದ್ರದ ಬಿಜೆಪಿ ಸರ್ಕಾರದ ವಿದೇಶಾಂಗ ನೀತಿಯ ವೈಫಲ್ಯದಿಂದಾಗಿ ಇಂದು ಜನರ ಮೇಲೆ ಹೊರೆ ಬೀಳುತ್ತಿದೆ’ ಎಂದೂ ಹೇಳಿದರು.</p>.<p>ಪ್ರತಿಭಟನಾ ಮೆರವಣಿಗೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕೊಡವೂರು, ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ.ಗಫೂರ್, ಮಂಜುನಾಥ ಪೂಜಾರಿ, ಸತೀಶ್ ಕೊಡವೂರು, ಹರಿಪ್ರಸಾದ್ ರೈ, ಪ್ರಸಾದ್ ಕಾಂಚನ್, ಕಿಶನ್ ಹೆಗ್ಡೆ, ನಾಗೇಶ್ ಉದ್ಯಾವರ, ಜ್ಯೋತಿ ಹೆಬ್ಬಾರ್, ಹರೀಶ್ ಕಿಣಿ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260531-28-1463166159</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಉಡುಪಿ: ಎಸ್ಐಆರ್, ತೈಲ ಬೆಲೆ ಏರಿಕೆ ವಿರೋಧಿಸಿ ಹಾಗೂ ನೀಟ್ ಹಗರಣವನ್ನು ಖಂಡಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ವತಿಯಿಂದ ನಗರದ ಬ್ರಹ್ಮಗಿರಿಯ ಕಾಂಗ್ರೆಸ್ ಭವನದಿಂದ ಜೋಡುಕಟ್ಟೆಯವರೆಗೆ ಶನಿವಾರ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಿತು.</p>.<p>ಜೋಡುಕಟ್ಟೆಯ ಬಳಿ ರಸ್ತೆ ತಡೆ ನಡೆಸಲು ಯತ್ನಿಸಿದ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದು ಬಳಿಕ ಬಿಡುಗಡೆಗೊಳಿಸಿದರು.</p>.<p>ಪ್ರತಿಭಟನೆಯಲ್ಲಿ ಮಾತನಾಡಿದ ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ, ‘ಇಂದು ರಷ್ಯಾದಿಂದ ಕಚ್ಚಾ ತೈಲ ಖರೀದಿಸಬೇಕಾದರೆ ಅಮೆರಿಕದಿಂದ ಅನುಮತಿ ಪಡೆಯುವ ಸ್ಥಿತಿ ನಿರ್ಮಾಣವಾಗಿದೆ’ ಎಂದು ಆರೋಪಿಸಿದರು.</p>.<p>‘ಕೇಂದ್ರದ ಬಿಜೆಪಿ ಸರ್ಕಾರದ ವಿದೇಶಾಂಗ ನೀತಿಯ ವೈಫಲ್ಯದಿಂದಾಗಿ ಇಂದು ಜನರ ಮೇಲೆ ಹೊರೆ ಬೀಳುತ್ತಿದೆ’ ಎಂದೂ ಹೇಳಿದರು.</p>.<p>ಪ್ರತಿಭಟನಾ ಮೆರವಣಿಗೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕೊಡವೂರು, ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ.ಗಫೂರ್, ಮಂಜುನಾಥ ಪೂಜಾರಿ, ಸತೀಶ್ ಕೊಡವೂರು, ಹರಿಪ್ರಸಾದ್ ರೈ, ಪ್ರಸಾದ್ ಕಾಂಚನ್, ಕಿಶನ್ ಹೆಗ್ಡೆ, ನಾಗೇಶ್ ಉದ್ಯಾವರ, ಜ್ಯೋತಿ ಹೆಬ್ಬಾರ್, ಹರೀಶ್ ಕಿಣಿ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260531-28-1463166159</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>