<p><strong>ನವದೆಹಲಿ:</strong> ಕ್ಯಾಂಪಸ್ಗಳಲ್ಲಿ ತಾರತಮ್ಯ ನಿವಾರಣೆಗೆ ಸಂಬಂಧಿಸಿದಂತೆ, ಯುಜಿಸಿ ಅನುಷ್ಠಾನಗೊಳಿಸಿರುವ ನೂತನ ನಿಯಮಗಳನ್ನು ಪ್ರಶ್ನಿಸಿರುವ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಬುಧವಾರ ಒಪ್ಪಿಗೆ ನೀಡಿದೆ.</p>.<p>ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಜಾಯ್ಮಾಲ್ಯ ಬಾಗ್ಚಿ ಅವರನ್ನೊಳಗೊಂಡ ಪೀಠವು, ತುರ್ತು ವಿಚಾರಣೆ ನಡೆಸುವಂತೆ ಕೋರಿ ವಕೀಲರೊಬ್ಬರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿತು.</p>.<p>‘ನೂತನ ನಿಯಮದಂತೆ ಸಮಿತಿಗಳು ರಚನೆ ಆದರೆ, ಸಾಮಾನ್ಯ ವರ್ಗದವರ ಮೇಲೆ ತಾರತಮ್ಯ ನಡೆಯುವ ಸಾಧ್ಯತೆ ಇದೆ’ ಎಂದು ವಕೀಲರು ನ್ಯಾಯಪೀಠದ ಗಮನಕ್ಕೆ ತಂದರು.</p>.<p>‘ಏನು ನಡೆಯುತ್ತಿದೆ ಎಂಬುದು ನಮಗೆ ಗೊತ್ತಿಲ್ಲ. ಲೋಪಗಳು ನಿವಾರಣೆ ಆಗಿವೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಿ. ಅರ್ಜಿಯನ್ನು ವಿಚಾರಣೆಗೆ ಪಟ್ಟಿ ಮಾಡುವಂತೆ ನಾವು ಹೇಳುತ್ತೇವೆ’ ಎಂದು ಸಿಜೆಐ ಸೂರ್ಯಕಾಂತ್ ಹೇಳಿದರು.</p>.<p><strong>ಮಾಯಾವತಿ ಸಮರ್ಥನೆ</strong> </p><p>ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ‘ಇಕ್ವಿಟಿ (ನ್ಯಾಯಸಮ್ಮತ) ಕಮಿಟಿಗಳ’ ರಚನೆಯನ್ನು ಕಡ್ಡಾಯಗೊಳಿಸಿರುವ ಯುಜಿಸಿಯ ಹೊಸ ನಿಯಮಗಳನ್ನು ಬಹುಜನ ಸಮಾಜ ಪಕ್ಷದ ವರಿಷ್ಠರಾದ ಮಾಯಾವತಿ ಸಮರ್ಥಿಸಿಕೊಂಡಿದ್ದಾರೆ. ಸಾಮಾನ್ಯ ವರ್ಗದವರು ಇದಕ್ಕೆ ವಿರೋಧ ವ್ಯಕ್ತಪಡಿಸುವುದು ಸಮರ್ಥನೀಯ ಅಲ್ಲ ಎಂದಿದ್ದಾರೆ. ವ್ಯಾಪಕ ಸಮಾಲೋಚನೆಯ ಬಳಿಕವೇ ಈ ನಿಯಮಗಳನ್ನು ಜಾರಿಗೊಳಿಸಿ ಎಂದೂ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಉಲ್ಲೇಖಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕ್ಯಾಂಪಸ್ಗಳಲ್ಲಿ ತಾರತಮ್ಯ ನಿವಾರಣೆಗೆ ಸಂಬಂಧಿಸಿದಂತೆ, ಯುಜಿಸಿ ಅನುಷ್ಠಾನಗೊಳಿಸಿರುವ ನೂತನ ನಿಯಮಗಳನ್ನು ಪ್ರಶ್ನಿಸಿರುವ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಬುಧವಾರ ಒಪ್ಪಿಗೆ ನೀಡಿದೆ.</p>.<p>ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಜಾಯ್ಮಾಲ್ಯ ಬಾಗ್ಚಿ ಅವರನ್ನೊಳಗೊಂಡ ಪೀಠವು, ತುರ್ತು ವಿಚಾರಣೆ ನಡೆಸುವಂತೆ ಕೋರಿ ವಕೀಲರೊಬ್ಬರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿತು.</p>.<p>‘ನೂತನ ನಿಯಮದಂತೆ ಸಮಿತಿಗಳು ರಚನೆ ಆದರೆ, ಸಾಮಾನ್ಯ ವರ್ಗದವರ ಮೇಲೆ ತಾರತಮ್ಯ ನಡೆಯುವ ಸಾಧ್ಯತೆ ಇದೆ’ ಎಂದು ವಕೀಲರು ನ್ಯಾಯಪೀಠದ ಗಮನಕ್ಕೆ ತಂದರು.</p>.<p>‘ಏನು ನಡೆಯುತ್ತಿದೆ ಎಂಬುದು ನಮಗೆ ಗೊತ್ತಿಲ್ಲ. ಲೋಪಗಳು ನಿವಾರಣೆ ಆಗಿವೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಿ. ಅರ್ಜಿಯನ್ನು ವಿಚಾರಣೆಗೆ ಪಟ್ಟಿ ಮಾಡುವಂತೆ ನಾವು ಹೇಳುತ್ತೇವೆ’ ಎಂದು ಸಿಜೆಐ ಸೂರ್ಯಕಾಂತ್ ಹೇಳಿದರು.</p>.<p><strong>ಮಾಯಾವತಿ ಸಮರ್ಥನೆ</strong> </p><p>ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ‘ಇಕ್ವಿಟಿ (ನ್ಯಾಯಸಮ್ಮತ) ಕಮಿಟಿಗಳ’ ರಚನೆಯನ್ನು ಕಡ್ಡಾಯಗೊಳಿಸಿರುವ ಯುಜಿಸಿಯ ಹೊಸ ನಿಯಮಗಳನ್ನು ಬಹುಜನ ಸಮಾಜ ಪಕ್ಷದ ವರಿಷ್ಠರಾದ ಮಾಯಾವತಿ ಸಮರ್ಥಿಸಿಕೊಂಡಿದ್ದಾರೆ. ಸಾಮಾನ್ಯ ವರ್ಗದವರು ಇದಕ್ಕೆ ವಿರೋಧ ವ್ಯಕ್ತಪಡಿಸುವುದು ಸಮರ್ಥನೀಯ ಅಲ್ಲ ಎಂದಿದ್ದಾರೆ. ವ್ಯಾಪಕ ಸಮಾಲೋಚನೆಯ ಬಳಿಕವೇ ಈ ನಿಯಮಗಳನ್ನು ಜಾರಿಗೊಳಿಸಿ ಎಂದೂ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಉಲ್ಲೇಖಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>