ಲಂಡನ್ (ಪಿಟಿಐ): ಭಾರತದ ಪಂಜಾಬ್ ನ್ಯಾಷನಲ್ ಬ್ಯಾಂಕ್ಗೆ ₹13,500 ಕೋಟಿ ವಂಚಿಸಿ ಪರಾರಿಯಾಗಿರುವ ವಜ್ರದ ವ್ಯಾಪಾರಿ ನೀರವ್ ಮೋದಿ, ಕೆಳ ನ್ಯಾಯಾಲಯದ ತೀರ್ಪನ್ನು ಇಲ್ಲಿನ ಹೈಕೋರ್ಟ್ನಲ್ಲಿ ಪ್ರಶ್ನಿಸಲು ನಿರ್ಧರಿಸಿದ್ದಾರೆ.
ಕಳೆದ ವಾರ ಕೆಳ ನ್ಯಾಯಾಲಯವು ನೀರವ್ ಮೋದಿಗೆ ಜಾಮೀನು ನೀಡಲು ಎರಡು ಬಾರಿ ನಿರಾಕರಿಸಿತ್ತು. ಹೀಗಾಗಿ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಲಿದ್ದಾರೆ ಎಂದು ಕ್ರೌನ್ ಪ್ರಾಸಿಕ್ಯೂಷನ್ ಸರ್ವೀಸಸ್ನ (ಸಿಪಿಎಸ್) ವಕ್ತಾರರು ಮಂಗಳವಾರ ಹೇಳಿದ್ದಾರೆ.