<p><strong>ವಿಶ್ವಸಂಸ್ಥೆ :</strong> ‘ಜಮ್ಮು ಮತ್ತು ಕಾಶ್ಮೀರಕ್ಕೆ ಸಂಬಂಧಿಸಿದಂತೆ ನಮ್ಮ ಸರ್ಕಾರವು ತೆಗೆದುಕೊಂಡಿರುವ ನಿರ್ಧಾರವು ಸಂಪೂರ್ಣ ಆಂತರಿಕವಾದುದು. ಅದನ್ನು ನಾವೇ ಬಗೆಹರಿಸಿಕೊಳ್ಳುತ್ತೇವೆ. ಅಂತರರಾಷ್ಟ್ರೀಯ ಸಮುದಾಯವು ಈ ಬಗ್ಗೆ ಚಿಂತಿಸುವುದು ಬೇಡ’ ಎಂದು ಭಾರತವು ಖಾರವಾಗಿ ಪ್ರತಿಕ್ರಿಯಿಸಿದೆ.</p>.<p>‘ನಮ್ಮಲ್ಲಿ ಏನಾದರೂ ಸಮಸ್ಯೆ ಇದ್ದರೆ, ಅದನ್ನು ನಾವೇ ಪರಿಹರಿಸಿಕೊಳ್ಳುತ್ತೇವೆ. ನಮ್ಮ ನ್ಯಾಯಾಲಯಗಳು ಆ ಬಗ್ಗೆ ಚರ್ಚಿಸುತ್ತವೆ ಮತ್ತು ಪರಿಹಾರ ನೀಡುತ್ತವೆ. ನಾವು ಹೇಗೆ ಬದುಕಬೇಕು ಎಂಬುದನ್ನು ಅಂತರರಾಷ್ಟ್ರೀಯ ಸಮುದಾಯವು ನಮಗೆ ಹೇಳಬೇಕಿಲ್ಲ. ನಾವು ನೂರು ಕೋಟಿಗೂ ಹೆಚ್ಚು ಜನರಿದ್ದೇವೆ’ ಎಂದು ವಿಶ್ವಸಂಸ್ಥೆಯಲ್ಲಿ ಭಾರತದ ಪ್ರತಿನಿಧಿಯಾಗಿರುವ ಸೈಯದ್ ಅಕ್ಬರುದ್ದೀನ್ ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ.</p>.<p>ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷಾಧಿಕಾರವನ್ನು ಅಸಿಂಧುಗೊಳಿಸಿದ ಭಾರತದ ನಿರ್ಧಾರ ಕುರಿತು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯು ಶುಕ್ರವಾರ ಗೋಪ್ಯ ಸಭೆ ನಡೆಸಿದ ಬೆನ್ನಲ್ಲೇ ಭಾರತವು ಈ ಪ್ರತಿಕ್ರಿಯೆ ನೀಡಿದೆ. ಭದ್ರತಾ ಮಂಡಳಿಯ ಐವರು ಶಾಶ್ವತ ಸದಸ್ಯ ಮತ್ತು 10 ಸಾಮಾನ್ಯ ಸದಸ್ಯ ರಾಷ್ಟ್ರಗಳ ಪ್ರತಿನಿಧಿಗಳ ನಡುವೆ ನಡೆದ ಈ ಸಭೆಯಲ್ಲಿ ಭಾರತವಾಗಲೀ, ಪಾಕಿಸ್ತಾನವಾಗಲೀ ಭಾಗಿಯಾಗಿರಲಿಲ್ಲ.</p>.<p>ಕಾಶ್ಮೀರದ ವಿಚಾರಕ್ಕೆ ಸಂಬಂಧಿಸಿದಂತೆ ಭದ್ರತಾ ಮಂಡಳಿಯು ಇಂತಹ ಸಭೆ ನಡೆಸಿದ್ದು, ಐವತ್ತು ವರ್ಷಗಳಲ್ಲಿ ಇದೇ ಮೊದಲು.ಇದು ಗೋಪ್ಯ ಸಭೆಯಾಗಿರುವ ಕಾರಣ ಚರ್ಚೆಯ ವಿಷಯವು ಬಹಿರಂಗವಾಗುವುದಿಲ್ಲ. ಆದರೆ ಸಭೆಗೂ ಮುನ್ನ ರಷ್ಯಾ ಪ್ರತಿನಿಧಿ ಈ ವಿಚಾರವಾಗಿ ತಮ್ಮ ಅಭಿಪ್ರಾಯವನ್ನು ಮಾಧ್ಯಮಗಳ ಮುಂದೆ ಬಹಿರಂಗಪಡಿಸಿದ್ದರು. ಸಭೆಯ ನಂತರ ಚೀನಾ ತನ್ನ ಅಭಿಪ್ರಾಯವನ್ನು ಬಹಿರಂಗಪಡಿಸಿತ್ತು. ಪಾಕಿಸ್ತಾನವೂ ಈ ಬಗ್ಗೆ ಹೇಳಿಕೆ ನೀಡಿತ್ತು.</p>.<p>ಈ ಹೇಳಿಕೆಗಳ ನಂತರ ಭಾರತವು ಪ್ರತಿಕ್ರಿಯೆ ನೀಡಿದೆ.ಈ ವಿಚಾರದಲ್ಲಿ ಅಂತರರಾಷ್ಟ್ರೀಯ ಸಮುದಾಯವು ಸಭೆ ನಡೆಸುವುದಕ್ಕೆ ಭಾರತವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಶ್ವಸಂಸ್ಥೆ :</strong> ‘ಜಮ್ಮು ಮತ್ತು ಕಾಶ್ಮೀರಕ್ಕೆ ಸಂಬಂಧಿಸಿದಂತೆ ನಮ್ಮ ಸರ್ಕಾರವು ತೆಗೆದುಕೊಂಡಿರುವ ನಿರ್ಧಾರವು ಸಂಪೂರ್ಣ ಆಂತರಿಕವಾದುದು. ಅದನ್ನು ನಾವೇ ಬಗೆಹರಿಸಿಕೊಳ್ಳುತ್ತೇವೆ. ಅಂತರರಾಷ್ಟ್ರೀಯ ಸಮುದಾಯವು ಈ ಬಗ್ಗೆ ಚಿಂತಿಸುವುದು ಬೇಡ’ ಎಂದು ಭಾರತವು ಖಾರವಾಗಿ ಪ್ರತಿಕ್ರಿಯಿಸಿದೆ.</p>.<p>‘ನಮ್ಮಲ್ಲಿ ಏನಾದರೂ ಸಮಸ್ಯೆ ಇದ್ದರೆ, ಅದನ್ನು ನಾವೇ ಪರಿಹರಿಸಿಕೊಳ್ಳುತ್ತೇವೆ. ನಮ್ಮ ನ್ಯಾಯಾಲಯಗಳು ಆ ಬಗ್ಗೆ ಚರ್ಚಿಸುತ್ತವೆ ಮತ್ತು ಪರಿಹಾರ ನೀಡುತ್ತವೆ. ನಾವು ಹೇಗೆ ಬದುಕಬೇಕು ಎಂಬುದನ್ನು ಅಂತರರಾಷ್ಟ್ರೀಯ ಸಮುದಾಯವು ನಮಗೆ ಹೇಳಬೇಕಿಲ್ಲ. ನಾವು ನೂರು ಕೋಟಿಗೂ ಹೆಚ್ಚು ಜನರಿದ್ದೇವೆ’ ಎಂದು ವಿಶ್ವಸಂಸ್ಥೆಯಲ್ಲಿ ಭಾರತದ ಪ್ರತಿನಿಧಿಯಾಗಿರುವ ಸೈಯದ್ ಅಕ್ಬರುದ್ದೀನ್ ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ.</p>.<p>ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷಾಧಿಕಾರವನ್ನು ಅಸಿಂಧುಗೊಳಿಸಿದ ಭಾರತದ ನಿರ್ಧಾರ ಕುರಿತು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯು ಶುಕ್ರವಾರ ಗೋಪ್ಯ ಸಭೆ ನಡೆಸಿದ ಬೆನ್ನಲ್ಲೇ ಭಾರತವು ಈ ಪ್ರತಿಕ್ರಿಯೆ ನೀಡಿದೆ. ಭದ್ರತಾ ಮಂಡಳಿಯ ಐವರು ಶಾಶ್ವತ ಸದಸ್ಯ ಮತ್ತು 10 ಸಾಮಾನ್ಯ ಸದಸ್ಯ ರಾಷ್ಟ್ರಗಳ ಪ್ರತಿನಿಧಿಗಳ ನಡುವೆ ನಡೆದ ಈ ಸಭೆಯಲ್ಲಿ ಭಾರತವಾಗಲೀ, ಪಾಕಿಸ್ತಾನವಾಗಲೀ ಭಾಗಿಯಾಗಿರಲಿಲ್ಲ.</p>.<p>ಕಾಶ್ಮೀರದ ವಿಚಾರಕ್ಕೆ ಸಂಬಂಧಿಸಿದಂತೆ ಭದ್ರತಾ ಮಂಡಳಿಯು ಇಂತಹ ಸಭೆ ನಡೆಸಿದ್ದು, ಐವತ್ತು ವರ್ಷಗಳಲ್ಲಿ ಇದೇ ಮೊದಲು.ಇದು ಗೋಪ್ಯ ಸಭೆಯಾಗಿರುವ ಕಾರಣ ಚರ್ಚೆಯ ವಿಷಯವು ಬಹಿರಂಗವಾಗುವುದಿಲ್ಲ. ಆದರೆ ಸಭೆಗೂ ಮುನ್ನ ರಷ್ಯಾ ಪ್ರತಿನಿಧಿ ಈ ವಿಚಾರವಾಗಿ ತಮ್ಮ ಅಭಿಪ್ರಾಯವನ್ನು ಮಾಧ್ಯಮಗಳ ಮುಂದೆ ಬಹಿರಂಗಪಡಿಸಿದ್ದರು. ಸಭೆಯ ನಂತರ ಚೀನಾ ತನ್ನ ಅಭಿಪ್ರಾಯವನ್ನು ಬಹಿರಂಗಪಡಿಸಿತ್ತು. ಪಾಕಿಸ್ತಾನವೂ ಈ ಬಗ್ಗೆ ಹೇಳಿಕೆ ನೀಡಿತ್ತು.</p>.<p>ಈ ಹೇಳಿಕೆಗಳ ನಂತರ ಭಾರತವು ಪ್ರತಿಕ್ರಿಯೆ ನೀಡಿದೆ.ಈ ವಿಚಾರದಲ್ಲಿ ಅಂತರರಾಷ್ಟ್ರೀಯ ಸಮುದಾಯವು ಸಭೆ ನಡೆಸುವುದಕ್ಕೆ ಭಾರತವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>