<p><strong>ನವದೆಹಲಿ (ಪಿಟಿಐ):</strong> ಮರಣ ದಂಡನೆಗೆ ಗುರಿಯಾದ ಅಪರಾಧಿಗಳಿಗೆ ಕ್ಷಮಾದಾನ ಅಥವಾ ಗಲ್ಲು ಶಿಕ್ಷೆಗೆ ವಿಧಿಸುವಂತೆ ರಾಷ್ಟ್ರಪತಿ ಹೊರಡಿಸುವ ಆದೇಶ ಪ್ರಶ್ನಿಸಿ ಯಾವುದೇ ನ್ಯಾಯಾಲಯಗಳಲ್ಲಿ ಮೇಲ್ಮನವಿ ಸಲ್ಲಿಸುವುದಕ್ಕೆ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಮಸೂದೆಯಲ್ಲಿ ನಿರ್ಬಂಧ ಹೇರಲಾಗಿದೆ.</p>.<p>ಕ್ರಿಮಿನಲ್ ಪ್ರೊಸೀಜರ್ ಆ್ಯಕ್ಟ್ (ಅಪರಾಧ ಪ್ರಕ್ರಿಯಾ ಸಂಹಿತೆ) ಬದಲಿಗೆ ಕೇಂದ್ರ ಸರ್ಕಾರವು ಲೋಕಸಭೆಯಲ್ಲಿ ಇತ್ತೀಚೆಗೆ ಈ ಮಸೂದೆ ಮಂಡಿಸಿದೆ. ಇದು ಕಾಯ್ದೆಯ ಸ್ವರೂಪ ಪಡೆದರೆ ರಾಷ್ಟ್ರಪತಿ ಆದೇಶದ ವಿರುದ್ಧ ಕೋರ್ಟ್ಗಳ ಮಧ್ಯಪ್ರವೇಶಕ್ಕೆ ಕಡಿವಾಣ ಬೀಳಲಿದೆ. ಅಲ್ಲದೇ, ಅಪರಾಧಿಗಳು ನ್ಯಾಯಾಂಗದ ಪರಿಹಾರ ಪಡೆಯಲು ಅವಕಾಶದ ಬಾಗಿಲು ಸಂಪೂರ್ಣವಾಗಿ ಮುಚ್ಚಲಿದೆ. </p>.<p>ಸಂವಿಧಾನದ 72ನೇ ವಿಧಿ ಅನ್ವಯ ಮರಣ ದಂಡನೆಗೆ ಗುರಿಯಾದ ಅಪರಾಧಿಗಳಿಗೆ ಕ್ಷಮಾದಾನ, ಶಿಕ್ಷೆಗೆ ವಿನಾಯಿತಿ ಅಥವಾ ಅಮಾನತಿನಲ್ಲಿಡುವುದು, ಕ್ಷಮೆ ಅಥವಾ ಶಿಕ್ಷೆಯನ್ನು ಬದಲಾಯಿಸುವ ಅಧಿಕಾರವು ರಾಷ್ಟ್ರಪತಿ ಅವರಿಗೆ ಸಂವಿಧಾನದತ್ತವಾಗಿ ನೀಡಲಾಗಿದೆ.</p>.<p>ಆದರೆ, ಹೊಸ ಮಸೂದೆಯ ಸೆಕ್ಷನ್ 473ರ ಅನ್ವಯ ರಾಷ್ಟ್ರಪತಿ ಪ್ರಕಟಿಸುವ ಆದೇಶ ಪ್ರಶ್ನಿಸಿ ನ್ಯಾಯಾಲಯಗಳಲ್ಲಿ ಅಪರಾಧಿಗಳು ಮೇಲ್ಮನವಿ ಸಲ್ಲಿಸಲು ಅವಕಾಶ ಇರುವುದಿಲ್ಲ ಎಂದು ವಿವರಿಸಲಾಗಿದೆ. </p>.<p>ಅಪರಾಧಿಯ ಕ್ಷಮಾದಾನಕ್ಕೆ ಸಂಬಂಧಿಸಿದಂತೆ ರಾಷ್ಟ್ರಪತಿ ಅಥವಾ ರಾಜ್ಯಪಾಲರು ಕೈಗೊಳ್ಳುವ ನಿರ್ಧಾರವು ನ್ಯಾಯಯುತವಾಗಿರಬೇಕು. ಆದರೆ, ಏಕಾಂತ ಬಂಧನ, ಕ್ಷಮದಾನ ಅರ್ಜಿಯ ಅನಗತ್ಯ ವಿಳಂಬವಾದರೆ ನ್ಯಾಯಾಲಯದ ಮೊರೆ ಹೋಗಬಹುದು ಎಂದು ಈ ಹಿಂದೆ ಸುಪ್ರೀಂ ಕೋರ್ಟ್ ತೀರ್ಪು ನೀಡಿತ್ತು. </p>.<p>ಬಹುತೇಕ ಅಪರಾಧಿಗಳು ಕ್ಷಮಾದಾನ ಅರ್ಜಿಯ ವಜಾ ಪ್ರಶ್ನಿಸಿ ಕೋರ್ಟ್ ಮೆಟ್ಟಿಲೇರುತ್ತಿದ್ದರು. ಕೆಲವು ಪ್ರಕರಣಗಳಲ್ಲಿ ದೀರ್ಘ ವಿಳಂಬವು ಸಂವಿಧಾನದ 21ನೇ ವಿಧಿಯ (ಜೀವಿಸುವ ಹಕ್ಕು) ಉಲ್ಲಂಘನೆಯಾಗಲಿದೆ ಎಂದು ವಾದಿಸುತ್ತಿದ್ದರು. ಗಲ್ಲು ಶಿಕ್ಷೆ ವಿಧಿಸುವ ಕೊನೆಯ ಕ್ಷಣದಲ್ಲೂ ಈ ವಿಳಂಬ ನೀತಿಯನ್ನು ನ್ಯಾಯಾಲಯದಲ್ಲಿ ಪ್ರಶ್ನಿಸುತ್ತಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ):</strong> ಮರಣ ದಂಡನೆಗೆ ಗುರಿಯಾದ ಅಪರಾಧಿಗಳಿಗೆ ಕ್ಷಮಾದಾನ ಅಥವಾ ಗಲ್ಲು ಶಿಕ್ಷೆಗೆ ವಿಧಿಸುವಂತೆ ರಾಷ್ಟ್ರಪತಿ ಹೊರಡಿಸುವ ಆದೇಶ ಪ್ರಶ್ನಿಸಿ ಯಾವುದೇ ನ್ಯಾಯಾಲಯಗಳಲ್ಲಿ ಮೇಲ್ಮನವಿ ಸಲ್ಲಿಸುವುದಕ್ಕೆ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಮಸೂದೆಯಲ್ಲಿ ನಿರ್ಬಂಧ ಹೇರಲಾಗಿದೆ.</p>.<p>ಕ್ರಿಮಿನಲ್ ಪ್ರೊಸೀಜರ್ ಆ್ಯಕ್ಟ್ (ಅಪರಾಧ ಪ್ರಕ್ರಿಯಾ ಸಂಹಿತೆ) ಬದಲಿಗೆ ಕೇಂದ್ರ ಸರ್ಕಾರವು ಲೋಕಸಭೆಯಲ್ಲಿ ಇತ್ತೀಚೆಗೆ ಈ ಮಸೂದೆ ಮಂಡಿಸಿದೆ. ಇದು ಕಾಯ್ದೆಯ ಸ್ವರೂಪ ಪಡೆದರೆ ರಾಷ್ಟ್ರಪತಿ ಆದೇಶದ ವಿರುದ್ಧ ಕೋರ್ಟ್ಗಳ ಮಧ್ಯಪ್ರವೇಶಕ್ಕೆ ಕಡಿವಾಣ ಬೀಳಲಿದೆ. ಅಲ್ಲದೇ, ಅಪರಾಧಿಗಳು ನ್ಯಾಯಾಂಗದ ಪರಿಹಾರ ಪಡೆಯಲು ಅವಕಾಶದ ಬಾಗಿಲು ಸಂಪೂರ್ಣವಾಗಿ ಮುಚ್ಚಲಿದೆ. </p>.<p>ಸಂವಿಧಾನದ 72ನೇ ವಿಧಿ ಅನ್ವಯ ಮರಣ ದಂಡನೆಗೆ ಗುರಿಯಾದ ಅಪರಾಧಿಗಳಿಗೆ ಕ್ಷಮಾದಾನ, ಶಿಕ್ಷೆಗೆ ವಿನಾಯಿತಿ ಅಥವಾ ಅಮಾನತಿನಲ್ಲಿಡುವುದು, ಕ್ಷಮೆ ಅಥವಾ ಶಿಕ್ಷೆಯನ್ನು ಬದಲಾಯಿಸುವ ಅಧಿಕಾರವು ರಾಷ್ಟ್ರಪತಿ ಅವರಿಗೆ ಸಂವಿಧಾನದತ್ತವಾಗಿ ನೀಡಲಾಗಿದೆ.</p>.<p>ಆದರೆ, ಹೊಸ ಮಸೂದೆಯ ಸೆಕ್ಷನ್ 473ರ ಅನ್ವಯ ರಾಷ್ಟ್ರಪತಿ ಪ್ರಕಟಿಸುವ ಆದೇಶ ಪ್ರಶ್ನಿಸಿ ನ್ಯಾಯಾಲಯಗಳಲ್ಲಿ ಅಪರಾಧಿಗಳು ಮೇಲ್ಮನವಿ ಸಲ್ಲಿಸಲು ಅವಕಾಶ ಇರುವುದಿಲ್ಲ ಎಂದು ವಿವರಿಸಲಾಗಿದೆ. </p>.<p>ಅಪರಾಧಿಯ ಕ್ಷಮಾದಾನಕ್ಕೆ ಸಂಬಂಧಿಸಿದಂತೆ ರಾಷ್ಟ್ರಪತಿ ಅಥವಾ ರಾಜ್ಯಪಾಲರು ಕೈಗೊಳ್ಳುವ ನಿರ್ಧಾರವು ನ್ಯಾಯಯುತವಾಗಿರಬೇಕು. ಆದರೆ, ಏಕಾಂತ ಬಂಧನ, ಕ್ಷಮದಾನ ಅರ್ಜಿಯ ಅನಗತ್ಯ ವಿಳಂಬವಾದರೆ ನ್ಯಾಯಾಲಯದ ಮೊರೆ ಹೋಗಬಹುದು ಎಂದು ಈ ಹಿಂದೆ ಸುಪ್ರೀಂ ಕೋರ್ಟ್ ತೀರ್ಪು ನೀಡಿತ್ತು. </p>.<p>ಬಹುತೇಕ ಅಪರಾಧಿಗಳು ಕ್ಷಮಾದಾನ ಅರ್ಜಿಯ ವಜಾ ಪ್ರಶ್ನಿಸಿ ಕೋರ್ಟ್ ಮೆಟ್ಟಿಲೇರುತ್ತಿದ್ದರು. ಕೆಲವು ಪ್ರಕರಣಗಳಲ್ಲಿ ದೀರ್ಘ ವಿಳಂಬವು ಸಂವಿಧಾನದ 21ನೇ ವಿಧಿಯ (ಜೀವಿಸುವ ಹಕ್ಕು) ಉಲ್ಲಂಘನೆಯಾಗಲಿದೆ ಎಂದು ವಾದಿಸುತ್ತಿದ್ದರು. ಗಲ್ಲು ಶಿಕ್ಷೆ ವಿಧಿಸುವ ಕೊನೆಯ ಕ್ಷಣದಲ್ಲೂ ಈ ವಿಳಂಬ ನೀತಿಯನ್ನು ನ್ಯಾಯಾಲಯದಲ್ಲಿ ಪ್ರಶ್ನಿಸುತ್ತಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>