‘ಭಾರತ ಸರ್ಕಾರ ಮತ್ತು ರಿಸರ್ವ್ ಬ್ಯಾಂಕ್, ತಾತ್ಕಾಲಿಕ ಪರಿಹಾರ ಕ್ರಮಗಳ ಮೂಲಕ ಸಣ್ಣ ಮತ್ತು ಮಧ್ಯಮ ವಲಯಗಳಲ್ಲಿ ಎದುರಾಗಿರುವ ಸಾಲದ ಬಿಕ್ಕಟ್ಟನ್ನು ಮರೆಮಾಚಲು ಸಾಧ್ಯವಿಲ್ಲ. ಕೇರಳ ಮತ್ತು ಇತರೆ ರಾಜ್ಯಗಳು ಅತಿಯಾದ ಸಾಲದ ಹೊರೆಗೆ ಸಿಲುಕಿವೆ. ಇದರಿಂದಾಗಿ ಸಾರ್ವಜನಿಕ ಹಣಕಾಸು ವ್ಯವಸ್ಥೆ ಅಸ್ತವ್ಯಸ್ತವಾಗಿದೆ. ಅಲ್ಲದೆ ಇದು ಮುಂದಿನ ಬಜೆಟ್ನಲ್ಲಿ ದೊಡ್ಡ ಹೊರೆಯನ್ನು ಸೃಷ್ಟಿಸುತ್ತದೆ’ ಎಂದು ಅವರು ದೂರಿದರು.