<p><strong>ರಜೌರಿ/ಜಮ್ಮು: </strong> ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಗ್ರಾಮವೊಂದರಲ್ಲಿ 17 ಜನ ನಿಗೂಢವಾಗಿ ಮೃತಪಟ್ಟ ಪ್ರಕರಣದ ಬಳಿಕ ಗ್ರಾಮವನ್ನು ಕಂಟೈನ್ಮೆಂಟ್ ವಲಯ ಎಂದು ಘೋಷಿಸಿ ಅಧಿಕಾರಿಗಳು ಆದೇಶ ಹೊರಡಿಸಿದ್ದಾರೆ.</p><p>ಅಲ್ಲದೆ ಇದೇ ಊರಿನ ಇನ್ನೊಬ್ಬರು ವ್ಯಕ್ತಿ ತೀವ್ರ ಅಸ್ವಸ್ಥರಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಂಟೈನ್ಮೆಂಟ್ ವಲಯವಾಗಿ ಘೋಷಿಸಿದ ಕಾರಣ ಗ್ರಾಮದಲ್ಲಿ ಒಂದೆಡೆ ಹೆಚ್ಚು ಜನ ಸೇರುವಂತಿಲ್ಲ. ಜಿಲ್ಲಾಡಳಿತ ಒದಗಿಸಿದ ಆಹಾರವನ್ನಷ್ಟೇ ಸೇವಿಸಬೇಕು ಎಂದು ಆದೇಶಿಸಲಾಗಿದೆ.</p><p>ಗ್ರಾಮವನ್ನು ಮೂರು ಕಂಟೈನ್ಮೆಂಟ್ ವಲಯಗಳಾಗಿ ವಿಂಗಡಿಸಲಾಗಿದೆ. ಮೊದಲ ವಲಯದಲ್ಲಿ ಸಾವು ಸಂಭವಿಸಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ರಾಜೀವ್ ಕುಮಾರ್ ಖಜುರಿಯಾ ಹೇಳಿದ್ದಾರೆ.</p><p>ಮೃತರ ಕುಟುಂಬಗಳ ಮನೆಗಳನ್ನು ಸೀಲ್ ಮಾಡಲಾಗುವುದು. ಗೊತ್ತುಪಡಿಸಿದ ಅಧಿಕಾರಿಗಳು ಅಥವಾ ಅಧಿಕಾರಿಗಳಿಂದ ಒಪ್ಪಿಗೆ ಪಡೆಯದ ಹೊರತು ಅವರ ಕುಟುಂಬ ಸದಸ್ಯರು ಸೇರಿದಂತೆ ಯಾರೂ ಕೂಡ ಅಲ್ಲಿಗೆ ತೆರಳಕೂಡದು ಎಂದು ಆದೇಶದಲ್ಲಿ ತಿಳಿಸಿದ್ದಾರೆ.</p><p>ಎರಡನೆ ವಲಯದಲ್ಲಿ ಮೃತ ವ್ಯಕ್ತಿಗಳೊಂದಿಗೆ ನಿಕಟ ಸಂಪರ್ಕದಲ್ಲಿ ಇರುವ ಕಾರಣ ಹಲವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ವಿವರಿಸಿದ್ದಾರೆ.</p><p>ಡಿ.7 ರಿಂದ ಜ.19ರವರೆಗಿನ ಅವಧಿಯಲ್ಲಿ ಒಂದೇ ಗ್ರಾಮದ ಮೂರು ಕುಟುಂಬದ 17 ಜನ ಅಸಹಜವಾಗಿ ಮೃತಪಟ್ಟಿದ್ದರು. ಹೀಗಾಗಿ ಜಿಲ್ಲಾಡಳಿತ ಕಠಿಣ ಕ್ರಮಗಳನ್ನು ಕೈಗೊಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಜೌರಿ/ಜಮ್ಮು: </strong> ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಗ್ರಾಮವೊಂದರಲ್ಲಿ 17 ಜನ ನಿಗೂಢವಾಗಿ ಮೃತಪಟ್ಟ ಪ್ರಕರಣದ ಬಳಿಕ ಗ್ರಾಮವನ್ನು ಕಂಟೈನ್ಮೆಂಟ್ ವಲಯ ಎಂದು ಘೋಷಿಸಿ ಅಧಿಕಾರಿಗಳು ಆದೇಶ ಹೊರಡಿಸಿದ್ದಾರೆ.</p><p>ಅಲ್ಲದೆ ಇದೇ ಊರಿನ ಇನ್ನೊಬ್ಬರು ವ್ಯಕ್ತಿ ತೀವ್ರ ಅಸ್ವಸ್ಥರಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಂಟೈನ್ಮೆಂಟ್ ವಲಯವಾಗಿ ಘೋಷಿಸಿದ ಕಾರಣ ಗ್ರಾಮದಲ್ಲಿ ಒಂದೆಡೆ ಹೆಚ್ಚು ಜನ ಸೇರುವಂತಿಲ್ಲ. ಜಿಲ್ಲಾಡಳಿತ ಒದಗಿಸಿದ ಆಹಾರವನ್ನಷ್ಟೇ ಸೇವಿಸಬೇಕು ಎಂದು ಆದೇಶಿಸಲಾಗಿದೆ.</p><p>ಗ್ರಾಮವನ್ನು ಮೂರು ಕಂಟೈನ್ಮೆಂಟ್ ವಲಯಗಳಾಗಿ ವಿಂಗಡಿಸಲಾಗಿದೆ. ಮೊದಲ ವಲಯದಲ್ಲಿ ಸಾವು ಸಂಭವಿಸಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ರಾಜೀವ್ ಕುಮಾರ್ ಖಜುರಿಯಾ ಹೇಳಿದ್ದಾರೆ.</p><p>ಮೃತರ ಕುಟುಂಬಗಳ ಮನೆಗಳನ್ನು ಸೀಲ್ ಮಾಡಲಾಗುವುದು. ಗೊತ್ತುಪಡಿಸಿದ ಅಧಿಕಾರಿಗಳು ಅಥವಾ ಅಧಿಕಾರಿಗಳಿಂದ ಒಪ್ಪಿಗೆ ಪಡೆಯದ ಹೊರತು ಅವರ ಕುಟುಂಬ ಸದಸ್ಯರು ಸೇರಿದಂತೆ ಯಾರೂ ಕೂಡ ಅಲ್ಲಿಗೆ ತೆರಳಕೂಡದು ಎಂದು ಆದೇಶದಲ್ಲಿ ತಿಳಿಸಿದ್ದಾರೆ.</p><p>ಎರಡನೆ ವಲಯದಲ್ಲಿ ಮೃತ ವ್ಯಕ್ತಿಗಳೊಂದಿಗೆ ನಿಕಟ ಸಂಪರ್ಕದಲ್ಲಿ ಇರುವ ಕಾರಣ ಹಲವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ವಿವರಿಸಿದ್ದಾರೆ.</p><p>ಡಿ.7 ರಿಂದ ಜ.19ರವರೆಗಿನ ಅವಧಿಯಲ್ಲಿ ಒಂದೇ ಗ್ರಾಮದ ಮೂರು ಕುಟುಂಬದ 17 ಜನ ಅಸಹಜವಾಗಿ ಮೃತಪಟ್ಟಿದ್ದರು. ಹೀಗಾಗಿ ಜಿಲ್ಲಾಡಳಿತ ಕಠಿಣ ಕ್ರಮಗಳನ್ನು ಕೈಗೊಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>