<p><strong>ನವದೆಹಲಿ:</strong> ಉತ್ತರ ಪ್ರದೇಶದ ಪ್ರಭಾವಿ ಕಾಂಗ್ರೆಸ್ಜಿತಿನ್ ಪ್ರಸಾದ್ ಅವರನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್ ಹೋರಾಟಕ್ಕೆ ಇಳಿದಿರುವುದು ಸರಿಯಲ್ಲ ಎಂದು ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್ ಹೇಳಿದ್ದಾರೆ.</p>.<p>ಈ ಬಗ್ಗೆ ಟ್ವೀಟ್ ಮಾಡಿರುವ ಕಪಿಲ್ ಸಿಬಲ್ ಕಾಂಗ್ರೆಸ್ ಪಕ್ಷ ಬಿಜೆಪಿಯನ್ನು ಗುರಿಯಾಗಿಸಿಕೊಂಡು ಸರ್ಜಿಕಲ್ ದಾಳಿ ನಡೆಸುವ ಬದಲು ಕಾಂಗ್ರೆಸ್ ಅನ್ನುಗುರಿಯಾಗಿಸಿಕೊಂಡಿರುವುದು ದುರದುಷ್ಟಕರ. ಆ ಮೂಲಕ ತನ್ನ ಶಕ್ತಿಯನ್ನು ವ್ಯಯಮಾಡಿಕೊಳ್ಳುತ್ತಿದೆಎಂದು ಟ್ವೀಟ್ ಮಾಡಿದ್ದಾರೆ.</p>.<p>ಉತ್ತರ ಪ್ರದೇಶದಲ್ಲಿ ಜಿತಿನ್ ಪ್ರಸಾದ್ ಅವರನ್ನುಗುರಿಯಾಗಿಸಿಕೊಂಡು ಹೋರಾಟಕ್ಕೆ ಇಳಿದಿರುವುದು ಹಾಗೂ ಶಿಸ್ತು ಕ್ರಮಕ್ಕೆ ಮುಂದಾಗಿರುವುದು ಒಳ್ಳೆಯ ಬೆಳವಣಿಗೆಯಲ್ಲ,ಅಧ್ಯಕ್ಷರ ಬದಲಾವಣೆಗಾಗಿ ಪತ್ರ ಬರೆದಿರುವುದಕ್ಕೆ ಈ ಶಿಕ್ಷೆಯೇ ಎಂದು ಕಪಿಲ್ ಸಿಬಲ್ ಸೇರಿದಂತೆ ಕೆಲ ಕಾಂಗ್ರೆಸ್ ಮುಖಂಡರು ಪ್ರಶ್ನೆ ಮಾಡಿದ್ದಾರೆ.</p>.<p>ಸಕ್ರಿಯ ಅಧ್ಯಕ್ಷರು ಬೇಕು ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ 23 ಜನ ಪತ್ರ ಬರೆದವರಲ್ಲಿ ಜಿತಿನ್ ಪ್ರಸಾದ್ ಕೂಡ ಒಬ್ಬರಾಗಿದ್ದಾರೆ.</p>.<p>ಉತ್ತರ ಪ್ರದೇಶ ಕಾಂಗ್ರೆಸ್ನಲ್ಲಿ ಜಿತಿನ್ ಹಿಡಿತ ಹೊಂದಿದ್ದು, ಬ್ರಾಹ್ಮಣ ಸಮುದಾಯದ ವೋಟ್ ಬ್ಯಾಂಕ್ ಇವರಬೆನ್ನಿಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಉತ್ತರ ಪ್ರದೇಶದ ಪ್ರಭಾವಿ ಕಾಂಗ್ರೆಸ್ಜಿತಿನ್ ಪ್ರಸಾದ್ ಅವರನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್ ಹೋರಾಟಕ್ಕೆ ಇಳಿದಿರುವುದು ಸರಿಯಲ್ಲ ಎಂದು ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್ ಹೇಳಿದ್ದಾರೆ.</p>.<p>ಈ ಬಗ್ಗೆ ಟ್ವೀಟ್ ಮಾಡಿರುವ ಕಪಿಲ್ ಸಿಬಲ್ ಕಾಂಗ್ರೆಸ್ ಪಕ್ಷ ಬಿಜೆಪಿಯನ್ನು ಗುರಿಯಾಗಿಸಿಕೊಂಡು ಸರ್ಜಿಕಲ್ ದಾಳಿ ನಡೆಸುವ ಬದಲು ಕಾಂಗ್ರೆಸ್ ಅನ್ನುಗುರಿಯಾಗಿಸಿಕೊಂಡಿರುವುದು ದುರದುಷ್ಟಕರ. ಆ ಮೂಲಕ ತನ್ನ ಶಕ್ತಿಯನ್ನು ವ್ಯಯಮಾಡಿಕೊಳ್ಳುತ್ತಿದೆಎಂದು ಟ್ವೀಟ್ ಮಾಡಿದ್ದಾರೆ.</p>.<p>ಉತ್ತರ ಪ್ರದೇಶದಲ್ಲಿ ಜಿತಿನ್ ಪ್ರಸಾದ್ ಅವರನ್ನುಗುರಿಯಾಗಿಸಿಕೊಂಡು ಹೋರಾಟಕ್ಕೆ ಇಳಿದಿರುವುದು ಹಾಗೂ ಶಿಸ್ತು ಕ್ರಮಕ್ಕೆ ಮುಂದಾಗಿರುವುದು ಒಳ್ಳೆಯ ಬೆಳವಣಿಗೆಯಲ್ಲ,ಅಧ್ಯಕ್ಷರ ಬದಲಾವಣೆಗಾಗಿ ಪತ್ರ ಬರೆದಿರುವುದಕ್ಕೆ ಈ ಶಿಕ್ಷೆಯೇ ಎಂದು ಕಪಿಲ್ ಸಿಬಲ್ ಸೇರಿದಂತೆ ಕೆಲ ಕಾಂಗ್ರೆಸ್ ಮುಖಂಡರು ಪ್ರಶ್ನೆ ಮಾಡಿದ್ದಾರೆ.</p>.<p>ಸಕ್ರಿಯ ಅಧ್ಯಕ್ಷರು ಬೇಕು ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ 23 ಜನ ಪತ್ರ ಬರೆದವರಲ್ಲಿ ಜಿತಿನ್ ಪ್ರಸಾದ್ ಕೂಡ ಒಬ್ಬರಾಗಿದ್ದಾರೆ.</p>.<p>ಉತ್ತರ ಪ್ರದೇಶ ಕಾಂಗ್ರೆಸ್ನಲ್ಲಿ ಜಿತಿನ್ ಹಿಡಿತ ಹೊಂದಿದ್ದು, ಬ್ರಾಹ್ಮಣ ಸಮುದಾಯದ ವೋಟ್ ಬ್ಯಾಂಕ್ ಇವರಬೆನ್ನಿಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>