<p><strong>ಕೋಲ್ಕತ್ತ:</strong> ಬಾಂಗ್ಲಾದೇಶದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ, ಮಾನವ ಹಕ್ಕುಗಳ ಉಲ್ಲಂಘನೆ ಕಳವಳಕಾರಿಯಾಗಿದ್ದು, ವಿಶ್ವಸಂಸ್ಥೆಯ ಹೈಕಮಿಷನರ್ (ವಲಸಿಗರು) ಇತ್ತ ಗಮನಹರಿಸಬೇಕು ಎಂದು ಕೋಲ್ಕತ್ತದ ಇಸ್ಕಾನ್ ಕೇಂದ್ರ ಆಗ್ರಹಪಡಿಸಿದೆ.</p>.<p>ಬಾಂಗ್ಲಾದ ಮಧ್ಯಂತರ ಸರ್ಕಾರ ಗಲಭೆ, ದಾಂದಲೆ ನಡೆಸುತ್ತಿರುವ ಮೂಲಭೂತವಾದಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ಅಲ್ಪಸಂಖ್ಯಾತರಲ್ಲಿ ಆತ್ಮವಿಶ್ವಾಸ ಮೂಡಿಸಬೇಕು ಎಂದು ಇಸ್ಕಾನ್ ಕೇಂದ್ರದ ವಕ್ತಾರ ರಾಧಾಮೋಹನ ದಾಸ್ ಒತ್ತಾಯಿಸಿದ್ದಾರೆ.</p>.<p>ಮಾನವ ಹಕ್ಕುಗಳ ದಿನ ಆಚರಣೆ ಸಂದರ್ಭದಲ್ಲಿ ‘ಎಕ್ಸ್’ ಮೂಲಕ ಈ ಒತ್ತಾಯ ಮಾಡಿರುವ ಅವರು, ಮಾನವಹಕ್ಕುಗಳ ರಕ್ಷಣೆ ಕುರಿತು ವಿಶ್ವಸಂಸ್ಥೆ ಎಚ್ಚೆತ್ತುಕೊಳ್ಳಬೇಕು. ಬಾಂಗ್ಲಾದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಹೃದಯವಿದ್ರಾವಕವಾಗಿದೆ ಎಂದು ಹೇಳಿದ್ದಾರೆ.</p>.<p>ಅಮೆರಿಕ, ಬ್ರಿಟನ್ನ ಸಂಸದರು ಈ ದೌರ್ಜನ್ಯದ ವಿರುದ್ಧ ಧ್ವನಿ ಎತ್ತಿದ್ದಾರೆ. ಆದರೆ, ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿ (ಯುಎನ್ಎಚ್ಸಿಆರ್) ಈ ಕುರಿತಂತೆ ಇನ್ನೂ ಪ್ರತಿಕ್ರಿಯೆ ನೀಡಬೇಕಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ:</strong> ಬಾಂಗ್ಲಾದೇಶದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ, ಮಾನವ ಹಕ್ಕುಗಳ ಉಲ್ಲಂಘನೆ ಕಳವಳಕಾರಿಯಾಗಿದ್ದು, ವಿಶ್ವಸಂಸ್ಥೆಯ ಹೈಕಮಿಷನರ್ (ವಲಸಿಗರು) ಇತ್ತ ಗಮನಹರಿಸಬೇಕು ಎಂದು ಕೋಲ್ಕತ್ತದ ಇಸ್ಕಾನ್ ಕೇಂದ್ರ ಆಗ್ರಹಪಡಿಸಿದೆ.</p>.<p>ಬಾಂಗ್ಲಾದ ಮಧ್ಯಂತರ ಸರ್ಕಾರ ಗಲಭೆ, ದಾಂದಲೆ ನಡೆಸುತ್ತಿರುವ ಮೂಲಭೂತವಾದಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ಅಲ್ಪಸಂಖ್ಯಾತರಲ್ಲಿ ಆತ್ಮವಿಶ್ವಾಸ ಮೂಡಿಸಬೇಕು ಎಂದು ಇಸ್ಕಾನ್ ಕೇಂದ್ರದ ವಕ್ತಾರ ರಾಧಾಮೋಹನ ದಾಸ್ ಒತ್ತಾಯಿಸಿದ್ದಾರೆ.</p>.<p>ಮಾನವ ಹಕ್ಕುಗಳ ದಿನ ಆಚರಣೆ ಸಂದರ್ಭದಲ್ಲಿ ‘ಎಕ್ಸ್’ ಮೂಲಕ ಈ ಒತ್ತಾಯ ಮಾಡಿರುವ ಅವರು, ಮಾನವಹಕ್ಕುಗಳ ರಕ್ಷಣೆ ಕುರಿತು ವಿಶ್ವಸಂಸ್ಥೆ ಎಚ್ಚೆತ್ತುಕೊಳ್ಳಬೇಕು. ಬಾಂಗ್ಲಾದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಹೃದಯವಿದ್ರಾವಕವಾಗಿದೆ ಎಂದು ಹೇಳಿದ್ದಾರೆ.</p>.<p>ಅಮೆರಿಕ, ಬ್ರಿಟನ್ನ ಸಂಸದರು ಈ ದೌರ್ಜನ್ಯದ ವಿರುದ್ಧ ಧ್ವನಿ ಎತ್ತಿದ್ದಾರೆ. ಆದರೆ, ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿ (ಯುಎನ್ಎಚ್ಸಿಆರ್) ಈ ಕುರಿತಂತೆ ಇನ್ನೂ ಪ್ರತಿಕ್ರಿಯೆ ನೀಡಬೇಕಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>