<p><strong>ನವದೆಹಲಿ</strong>: ‘ಒಂದು ದೇಶ, ಒಂದು ಕಾನೂನು ಇಂದಿನ ಅತ್ಯಗತ್ಯವಾಗಿದೆ’ ಎಂದು ಕೇಂದ್ರದ ಮಾಜಿ ಸಚಿವ, ಬಿಜೆಪಿಯ ಹಿರಿಯ ಮುಖಂಡ ಮುಖ್ತಾರ್ ಅಬ್ಬಾಸ್ ನಖ್ವಿ ಬುಧವಾರ ಇಲ್ಲಿ ಪ್ರತಿಪಾದಿಸಿದರು.</p>.<p>‘ಏಕರೂಪ ನಾಗರಿಕ ಸಂಹಿತೆಯು ಇಡೀ ದೇಶಕ್ಕೆ ಅನ್ವಯವಾಗುವಂಥದ್ದು. ಇದು ಯಾವುದೇ ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿಕೊಂಡಿಲ್ಲ’ ಎಂದರು.</p>.<p>ಸಂವಿಧಾನ ದಿನದ ಅಂಗವಾಗಿ ಭಾರತ್ ಮಂಟಪದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ನಖ್ವಿ, ‘ಸಂವಿಧಾನದ ಬಲವರ್ಧನೆಗೆ ಏಕರೂಪ ನಾಗರಿಕ ಸಂಹಿತೆ ಅನಿವಾರ್ಯವಾಗಿದೆ’ ಎಂದು ಹೇಳಿದರು.</p>.<p>‘ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂದರ್ಭದಲ್ಲಿ ಸಂವಿಧಾನದ ನಿರ್ದೇಶಕ ತತ್ವಗಳನ್ನು ಅಳವಡಿಸಿಕೊಳ್ಳಲು ಏಕರೂಪ ನಾಗರಿಕ ಸಂಹಿತೆಯು ಅವಕಾಶ ಒದಗಿಸಲಿದೆ’ ಎಂದರು.</p>.<p>‘ಬಹುಸಂಖ್ಯಾತ ಸಮುದಾಯದ ಒಳಗೊಳ್ಳುವಿಕೆ, ಸಹಬಾಳ್ವೆ ಮತ್ತು ಸಹಿಷ್ಣುತೆಯ ಪರಿಣಾಮದಿಂದಾಗಿ ದೇಶದಲ್ಲಿ ಜಾತ್ಯತೀತತೆ ರೂಪುಗೊಂಡಿದೆ’ ಎಂದು ತಿಳಿಸಿದರು.</p>.<p>‘ದೇಶ ವಿಭಜನೆಯ ನಂತರ, ಭಾರತದ ಹಿಂದೂ ಬಹುಸಂಖ್ಯಾತ ಸಮುದಾಯವು ಜಾತ್ಯತೀತತೆಯ ಹಾದಿಯನ್ನು ಆಯ್ಕೆ ಮಾಡಿಕೊಂಡರೆ, ಪಾಕಿಸ್ತಾನದ ಮುಸ್ಲಿಂ ಬಹುಸಂಖ್ಯಾತರು ಇಸ್ಲಾಮಿಕ್ ರಾಷ್ಟ್ರದ ಧ್ವಜ ಆರೋಹಣ ಮಾಡಿದರು’ ಎಂದು ನಖ್ವಿ ಹೇಳಿದರು.</p>.<p>‘ಭಾರತದ ಸಂವಿಧಾನವು ಅಂಗೀಕಾರಗೊಂಡ ದಿನದಿಂದ ಇಂದಿನವರೆಗೂ ತನ್ನ ಆಶಯವನ್ನು ಉಳಿಸಿಕೊಂಡಿದೆ. ಸುರಕ್ಷಿತವಾಗಿದೆ. ಆದರೆ, ಪಾಕಿಸ್ತಾನದ ಸಂವಿಧಾನವು 1956, 1969ರಲ್ಲಿ ಅಮಾನತುಗೊಂಡಿತು. ರದ್ದಾದ ಬಳಿಕ ಹೊಸ ಸಂವಿಧಾನ ಜಾರಿಗೆ ಬಂದಿತು’ ಎಂದು ತಿಳಿಸಿದರು.</p>.<p>ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧವೂ ಕೇಂದ್ರದ ಮಾಜಿ ಸಚಿವರು ವಾಗ್ದಾಳಿ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ‘ಒಂದು ದೇಶ, ಒಂದು ಕಾನೂನು ಇಂದಿನ ಅತ್ಯಗತ್ಯವಾಗಿದೆ’ ಎಂದು ಕೇಂದ್ರದ ಮಾಜಿ ಸಚಿವ, ಬಿಜೆಪಿಯ ಹಿರಿಯ ಮುಖಂಡ ಮುಖ್ತಾರ್ ಅಬ್ಬಾಸ್ ನಖ್ವಿ ಬುಧವಾರ ಇಲ್ಲಿ ಪ್ರತಿಪಾದಿಸಿದರು.</p>.<p>‘ಏಕರೂಪ ನಾಗರಿಕ ಸಂಹಿತೆಯು ಇಡೀ ದೇಶಕ್ಕೆ ಅನ್ವಯವಾಗುವಂಥದ್ದು. ಇದು ಯಾವುದೇ ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿಕೊಂಡಿಲ್ಲ’ ಎಂದರು.</p>.<p>ಸಂವಿಧಾನ ದಿನದ ಅಂಗವಾಗಿ ಭಾರತ್ ಮಂಟಪದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ನಖ್ವಿ, ‘ಸಂವಿಧಾನದ ಬಲವರ್ಧನೆಗೆ ಏಕರೂಪ ನಾಗರಿಕ ಸಂಹಿತೆ ಅನಿವಾರ್ಯವಾಗಿದೆ’ ಎಂದು ಹೇಳಿದರು.</p>.<p>‘ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂದರ್ಭದಲ್ಲಿ ಸಂವಿಧಾನದ ನಿರ್ದೇಶಕ ತತ್ವಗಳನ್ನು ಅಳವಡಿಸಿಕೊಳ್ಳಲು ಏಕರೂಪ ನಾಗರಿಕ ಸಂಹಿತೆಯು ಅವಕಾಶ ಒದಗಿಸಲಿದೆ’ ಎಂದರು.</p>.<p>‘ಬಹುಸಂಖ್ಯಾತ ಸಮುದಾಯದ ಒಳಗೊಳ್ಳುವಿಕೆ, ಸಹಬಾಳ್ವೆ ಮತ್ತು ಸಹಿಷ್ಣುತೆಯ ಪರಿಣಾಮದಿಂದಾಗಿ ದೇಶದಲ್ಲಿ ಜಾತ್ಯತೀತತೆ ರೂಪುಗೊಂಡಿದೆ’ ಎಂದು ತಿಳಿಸಿದರು.</p>.<p>‘ದೇಶ ವಿಭಜನೆಯ ನಂತರ, ಭಾರತದ ಹಿಂದೂ ಬಹುಸಂಖ್ಯಾತ ಸಮುದಾಯವು ಜಾತ್ಯತೀತತೆಯ ಹಾದಿಯನ್ನು ಆಯ್ಕೆ ಮಾಡಿಕೊಂಡರೆ, ಪಾಕಿಸ್ತಾನದ ಮುಸ್ಲಿಂ ಬಹುಸಂಖ್ಯಾತರು ಇಸ್ಲಾಮಿಕ್ ರಾಷ್ಟ್ರದ ಧ್ವಜ ಆರೋಹಣ ಮಾಡಿದರು’ ಎಂದು ನಖ್ವಿ ಹೇಳಿದರು.</p>.<p>‘ಭಾರತದ ಸಂವಿಧಾನವು ಅಂಗೀಕಾರಗೊಂಡ ದಿನದಿಂದ ಇಂದಿನವರೆಗೂ ತನ್ನ ಆಶಯವನ್ನು ಉಳಿಸಿಕೊಂಡಿದೆ. ಸುರಕ್ಷಿತವಾಗಿದೆ. ಆದರೆ, ಪಾಕಿಸ್ತಾನದ ಸಂವಿಧಾನವು 1956, 1969ರಲ್ಲಿ ಅಮಾನತುಗೊಂಡಿತು. ರದ್ದಾದ ಬಳಿಕ ಹೊಸ ಸಂವಿಧಾನ ಜಾರಿಗೆ ಬಂದಿತು’ ಎಂದು ತಿಳಿಸಿದರು.</p>.<p>ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧವೂ ಕೇಂದ್ರದ ಮಾಜಿ ಸಚಿವರು ವಾಗ್ದಾಳಿ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>