<p><strong>ನವದೆಹಲಿ:</strong> ಕೋವಿಡ್–19 ಕಾರಣ ನೀಡಿ ಸಿಬಿಎಸ್ಇ ಪಠ್ಯಕ್ರಮದಲ್ಲಿ ಕೆಲವು ವಿಷಯಗಳನ್ನು ಕೈಬಿಟ್ಟಿರುವ ಬಗ್ಗೆ ಟೀಕೆ ವ್ಯಕ್ತವಾಗಿರುವ ಬೆನ್ನಲ್ಲೇ ಮಾನವ ಸಂಪನ್ಮೂಲ ಸಚಿವ ರಮೇಶ ಪೋಖ್ರಿಯಾಲ್ ನಿಶಾಂಕ್ ಅವರು ಸರ್ಕಾರದ ಈ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ.</p>.<p>‘ಕೆಲವರು ಸರಿಯಾದ ಮಾಹಿತಿ ಇಲ್ಲದೇ ಟೀಕೆ ಮಾಡುತ್ತಿದ್ದಾರೆ. ಸರ್ಕಾರದ ಕ್ರಮದ ಬಗ್ಗೆ ಅಪಪ್ರಚಾರ ಮಾಡುವ ಉದ್ದೇಶದಿಂದಲೇ ಈ ರೀತಿ ಟೀಕೆ ಮಾಡಲಾಗುತ್ತಿದೆ’ ಎಂದು ಅವರು ಗುರುವಾರ ಹೇಳಿದ್ದಾರೆ.</p>.<p>ಸಿಬಿಎಸ್ಇ ಪಠ್ಯಕ್ರಮದಿಂದ ‘ಪ್ರಜಾಪ್ರಭುತ್ವ’, ‘ಬಹುತ್ವ’ ಕುರಿತ ಪಾಠಗಳನ್ನು ಇತ್ತೀಚೆಗೆ ಸಚಿವಾಲಯ ಕೈಬಿಟ್ಟಿದ್ದಕ್ಕೆ ವಿರೋಧ ಪಕ್ಷಗಳಿಂದ ಟೀಕೆ ವ್ಯಕ್ತವಾಗಿತ್ತು. ಒಂದು ನಿರ್ದಿಷ್ಟ ಸಿದ್ಧಾಂತವನ್ನು ಮಕ್ಕಳ ಮೇಲೆ ಹೇರುವ ಹುನ್ನಾರ ಅಡಗಿದೆ ಎಂದು ಸರ್ಕಾರದ ವಿರುದ್ಧ ಹರಿಹಾಯ್ದಿದ್ದವು.</p>.<p>‘ಸರ್ಕಾರದ ಕ್ರಮವನ್ನು ಟೀಕಿಸುತ್ತಿರುವವರ ಸಮಸ್ಯೆ ಏನೆಂದರೆ, ನಿರ್ದಿಷ್ಟ ವಿಷಯವನ್ನು ಕೈಗೆತ್ತಿಕೊಂಡು, ಅದನ್ನು ಭಾವನಾತ್ಮಕವಾಗಿ ಹೇಳುವ ಮೂಲಕ ಸತ್ಯವನ್ನು ಮರೆಮಾಚುವ ಪ್ರಯತ್ನ ಮಾಡಲಾಗುತ್ತಿದೆ’ ಎಂದು ಸಚಿವ ಪೋಖ್ರಿಯಾಲ್ ತಿರುಗೇಟು ನೀಡಿದ್ದಾರೆ.</p>.<p>‘ಕೆಲವು ಪಾಠಗಳನ್ನು ತೆಗೆದುಹಾಕಿರುವುದು ಈಗಿನ ಪರಿಸ್ಥಿತಿ ಹಿನ್ನೆಲೆಯಲ್ಲಿ ಕೈಗೊಂಡಿರುವ ಕ್ರಮ ಮಾತ್ರ. ಶಾಲಾ ಅವಧಿಯೂ ಕಡಿತವಾಗಿರುವುದರಿಂದ ವಿದ್ಯಾರ್ಥಿಗಳ ಮೇಲೆ ಹೊರೆಯಾಗಬಾರದು ಎಂಬ ಉದ್ದೇಶದಿಂದ ಈ ಕ್ರಮ. ಶಿಕ್ಷಣದೊಂದಿಗೆ ರಾಜಕೀಯ ಬೆರಸಬಾರದು’ ಎಂದು ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕೋವಿಡ್–19 ಕಾರಣ ನೀಡಿ ಸಿಬಿಎಸ್ಇ ಪಠ್ಯಕ್ರಮದಲ್ಲಿ ಕೆಲವು ವಿಷಯಗಳನ್ನು ಕೈಬಿಟ್ಟಿರುವ ಬಗ್ಗೆ ಟೀಕೆ ವ್ಯಕ್ತವಾಗಿರುವ ಬೆನ್ನಲ್ಲೇ ಮಾನವ ಸಂಪನ್ಮೂಲ ಸಚಿವ ರಮೇಶ ಪೋಖ್ರಿಯಾಲ್ ನಿಶಾಂಕ್ ಅವರು ಸರ್ಕಾರದ ಈ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ.</p>.<p>‘ಕೆಲವರು ಸರಿಯಾದ ಮಾಹಿತಿ ಇಲ್ಲದೇ ಟೀಕೆ ಮಾಡುತ್ತಿದ್ದಾರೆ. ಸರ್ಕಾರದ ಕ್ರಮದ ಬಗ್ಗೆ ಅಪಪ್ರಚಾರ ಮಾಡುವ ಉದ್ದೇಶದಿಂದಲೇ ಈ ರೀತಿ ಟೀಕೆ ಮಾಡಲಾಗುತ್ತಿದೆ’ ಎಂದು ಅವರು ಗುರುವಾರ ಹೇಳಿದ್ದಾರೆ.</p>.<p>ಸಿಬಿಎಸ್ಇ ಪಠ್ಯಕ್ರಮದಿಂದ ‘ಪ್ರಜಾಪ್ರಭುತ್ವ’, ‘ಬಹುತ್ವ’ ಕುರಿತ ಪಾಠಗಳನ್ನು ಇತ್ತೀಚೆಗೆ ಸಚಿವಾಲಯ ಕೈಬಿಟ್ಟಿದ್ದಕ್ಕೆ ವಿರೋಧ ಪಕ್ಷಗಳಿಂದ ಟೀಕೆ ವ್ಯಕ್ತವಾಗಿತ್ತು. ಒಂದು ನಿರ್ದಿಷ್ಟ ಸಿದ್ಧಾಂತವನ್ನು ಮಕ್ಕಳ ಮೇಲೆ ಹೇರುವ ಹುನ್ನಾರ ಅಡಗಿದೆ ಎಂದು ಸರ್ಕಾರದ ವಿರುದ್ಧ ಹರಿಹಾಯ್ದಿದ್ದವು.</p>.<p>‘ಸರ್ಕಾರದ ಕ್ರಮವನ್ನು ಟೀಕಿಸುತ್ತಿರುವವರ ಸಮಸ್ಯೆ ಏನೆಂದರೆ, ನಿರ್ದಿಷ್ಟ ವಿಷಯವನ್ನು ಕೈಗೆತ್ತಿಕೊಂಡು, ಅದನ್ನು ಭಾವನಾತ್ಮಕವಾಗಿ ಹೇಳುವ ಮೂಲಕ ಸತ್ಯವನ್ನು ಮರೆಮಾಚುವ ಪ್ರಯತ್ನ ಮಾಡಲಾಗುತ್ತಿದೆ’ ಎಂದು ಸಚಿವ ಪೋಖ್ರಿಯಾಲ್ ತಿರುಗೇಟು ನೀಡಿದ್ದಾರೆ.</p>.<p>‘ಕೆಲವು ಪಾಠಗಳನ್ನು ತೆಗೆದುಹಾಕಿರುವುದು ಈಗಿನ ಪರಿಸ್ಥಿತಿ ಹಿನ್ನೆಲೆಯಲ್ಲಿ ಕೈಗೊಂಡಿರುವ ಕ್ರಮ ಮಾತ್ರ. ಶಾಲಾ ಅವಧಿಯೂ ಕಡಿತವಾಗಿರುವುದರಿಂದ ವಿದ್ಯಾರ್ಥಿಗಳ ಮೇಲೆ ಹೊರೆಯಾಗಬಾರದು ಎಂಬ ಉದ್ದೇಶದಿಂದ ಈ ಕ್ರಮ. ಶಿಕ್ಷಣದೊಂದಿಗೆ ರಾಜಕೀಯ ಬೆರಸಬಾರದು’ ಎಂದು ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>