<p><strong>ನವದೆಹಲಿ:</strong> ಫೆ. 1ರಂದು ಮಂಡಿಸಲಾಗುವ ಕೇಂದ್ರ ಬಜೆಟ್ನಲ್ಲಿ ಬಡವರಿಗೆ, ಮಧ್ಯಮ ವರ್ಗದವರಿಗೆ ಹಾಗೂ ಮಹಿಳೆಯರ ಸಬಲೀಕರಣಕ್ಕೆ ಯೋಜನೆಗಳನ್ನು ಘೋಷಿಸುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸುಳಿವು ನೀಡಿದ್ದಾರೆ.</p><p>ಬಜೆಟ್ ಅಧಿವೇಶನ ಆರಂಭಕ್ಕೂ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಡ ಮತ್ತು ಮಧ್ಯಮ ವರ್ಗದವರಿಗೆ ವಿಶೇಷ ಆಶೀರ್ವಾದಕ್ಕಾಗಿ ಸಂಪತ್ತು ಮತ್ತು ಸಮೃದ್ಧಿ ದೇವತೆ ಲಕ್ಷ್ಮಿಯನ್ನು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.</p><p>ಮಹಿಳೆಯರಿಗೆ ಸಮಾನ ಹಕ್ಕುಗಳ ಮಹತ್ವದ ಬಗ್ಗೆ ಪ್ರತಿಪಾದಿಸಿದ ಅವರು, ಮಹಿಳೆಯರನ್ನು ಧಾರ್ಮಿಕ ಹಾಗೂ ಪಂಥೀಯ ಭೇದಗಳಿಂದ ಮುಕ್ತಗೊಳಿಸಬೇಕು ಎಂದು ಹೇಳಿದ್ದಾರೆ. ಈ ಬಗ್ಗೆ ಬಜೆಟ್ ಅಧಿವೇಶನದಲ್ಲಿ ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುವುದು ಎಂದು ನುಡಿದಿದ್ದಾರೆ. ಅಲ್ಲದೆ ಮಹಿಳೆಯರ ಘನತೆಯನ್ನು ಸ್ಥಾಪಿಸುವ ಮಹತ್ವವನ್ನು ಅವರು ಒತ್ತಿ ಹೇಳಿದ್ದಾರೆ.</p><p>‘ಈ ಅಧಿವೇಶನದಲ್ಲಿ ಹಲವಾರು ಐತಿಹಾಸಿಕ ಮಸೂದೆಗಳು ಮತ್ತು ಪ್ರಸ್ತಾಪಗಳನ್ನು ಚರ್ಚಿಸಲಾಗುವುದು. ಇದು ರಾಷ್ಟ್ರವನ್ನು ಬಲಪಡಿಸುವ ಕಾನೂನುಗಳಿಗೆ ಕಾರಣವಾಗುತ್ತದೆ’ ಎಂದು ಮೋದಿ ಹೇಳಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಫೆ. 1ರಂದು ಮಂಡಿಸಲಾಗುವ ಕೇಂದ್ರ ಬಜೆಟ್ನಲ್ಲಿ ಬಡವರಿಗೆ, ಮಧ್ಯಮ ವರ್ಗದವರಿಗೆ ಹಾಗೂ ಮಹಿಳೆಯರ ಸಬಲೀಕರಣಕ್ಕೆ ಯೋಜನೆಗಳನ್ನು ಘೋಷಿಸುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸುಳಿವು ನೀಡಿದ್ದಾರೆ.</p><p>ಬಜೆಟ್ ಅಧಿವೇಶನ ಆರಂಭಕ್ಕೂ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಡ ಮತ್ತು ಮಧ್ಯಮ ವರ್ಗದವರಿಗೆ ವಿಶೇಷ ಆಶೀರ್ವಾದಕ್ಕಾಗಿ ಸಂಪತ್ತು ಮತ್ತು ಸಮೃದ್ಧಿ ದೇವತೆ ಲಕ್ಷ್ಮಿಯನ್ನು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.</p><p>ಮಹಿಳೆಯರಿಗೆ ಸಮಾನ ಹಕ್ಕುಗಳ ಮಹತ್ವದ ಬಗ್ಗೆ ಪ್ರತಿಪಾದಿಸಿದ ಅವರು, ಮಹಿಳೆಯರನ್ನು ಧಾರ್ಮಿಕ ಹಾಗೂ ಪಂಥೀಯ ಭೇದಗಳಿಂದ ಮುಕ್ತಗೊಳಿಸಬೇಕು ಎಂದು ಹೇಳಿದ್ದಾರೆ. ಈ ಬಗ್ಗೆ ಬಜೆಟ್ ಅಧಿವೇಶನದಲ್ಲಿ ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುವುದು ಎಂದು ನುಡಿದಿದ್ದಾರೆ. ಅಲ್ಲದೆ ಮಹಿಳೆಯರ ಘನತೆಯನ್ನು ಸ್ಥಾಪಿಸುವ ಮಹತ್ವವನ್ನು ಅವರು ಒತ್ತಿ ಹೇಳಿದ್ದಾರೆ.</p><p>‘ಈ ಅಧಿವೇಶನದಲ್ಲಿ ಹಲವಾರು ಐತಿಹಾಸಿಕ ಮಸೂದೆಗಳು ಮತ್ತು ಪ್ರಸ್ತಾಪಗಳನ್ನು ಚರ್ಚಿಸಲಾಗುವುದು. ಇದು ರಾಷ್ಟ್ರವನ್ನು ಬಲಪಡಿಸುವ ಕಾನೂನುಗಳಿಗೆ ಕಾರಣವಾಗುತ್ತದೆ’ ಎಂದು ಮೋದಿ ಹೇಳಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>