<p><strong>ನವದೆಹಲಿ</strong>: ಮಹತ್ವಾಕಾಂಕ್ಷೆಯ ‘ಚಂದ್ರಯಾನ–3’ರ ನೌಕೆಯ ಲ್ಯಾಂಡರ್ ಮತ್ತು ರೋವರ್ ಅನ್ನು ಚಂದ್ರನ ದಕ್ಷಿಣ ಧ್ರುವದ ಅಂಗಳದಲ್ಲಿ ಇಸ್ರೊ ಯಶಸ್ವಿಯಾಗಿ ಇಳಿಸಿದ್ದನ್ನು (ಸಾಫ್ಟ್ ಲ್ಯಾಂಡಿಂಗ್) ಶ್ಲಾಘಿಸುವ ನಿರ್ಣಯವನ್ನು ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಮಂಗಳವಾರ ಅಂಗೀಕರಿಸಲಾಗಿದೆ.</p>.<p>‘ಈ ಬಾಹ್ಯಾಕಾಶ ಕಾರ್ಯಕ್ರಮವು ಇಸ್ರೊದ ಯಶಸ್ಸು ಮಾತ್ರವಲ್ಲ, ಭಾರತದ ಪ್ರಗತಿ ಹಾಗೂ ಜಾಗತಿಕ ವೇದಿಕೆಯಲ್ಲಿ ದೇಶದ ಸ್ಥಾನ ಉನ್ನತ ಮಟ್ಟಕ್ಕೆ ಏರಿರುವುದರ ಸಂಕೇತವೂ ಆಗಿದೆ’ ಎಂದು ಸಂಪುಟ ಸಭೆಯು ಹರ್ಷ ವ್ಯಕ್ತಪಡಿಸಿದೆ.</p>.<p>‘ಆಗಸ್ಟ್ 23 ಅನ್ನು ರಾಷ್ಟ್ರೀಯ ಬಾಹ್ಯಾಕಾಶ ದಿನ ಎಂಬುದಾಗಿ ಆಚರಿಸುವ ನಿರ್ಧಾರವನ್ನು ಸಹ ಸಭೆ ಸ್ವಾಗತಿಸಿತು’ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ಸಭೆ ಬಳಿಕೆ ಸುದ್ದಿಗಾರರಿಗೆ ತಿಳಿಸಿದರು.</p>.<p>‘ಚಂದ್ರಯಾನ–3ರ ಯಶಸ್ಸಿಗಾಗಿ ಇಸ್ರೊವನ್ನು ಅಭಿನಂದಿಸಿದ ಸಚಿವ ಸಂಪುಟ, ಈ ಸಾಧನೆಗಾಗಿ ಸಂಸ್ಥೆಯ ವಿಜ್ಞಾನಿಗಳಿಗೆ ಧನ್ಯವಾದ ಅರ್ಪಿಸಿತು. ಚಂದ್ರನ ದಕ್ಷಿಣ ಧ್ರುವದಲ್ಲಿ ಅತ್ಯಂತ ನಿಖರವಾಗಿ ಲ್ಯಾಂಡರ್ ಘಟಕವನ್ನು (ವಿಕ್ರಮ್) ಇಳಿಸಿದ್ದು ಮಹತ್ವದ ಸಾಧನೆ ಎಂಬುದಾಗಿ ಸಭೆ ಬಣ್ಣಿಸಿತು’ ಎಂದು ಸಚಿವ ಠಾಕೂರ್ ಹೇಳಿದರು.</p>.<p>‘ಈ ಐತಿಹಾಸಿಕ ಬಾಹ್ಯಾಕಾಶ ಕಾರ್ಯಕ್ರಮಕ್ಕೆ ಪ್ರತಿಯೊಬ್ಬರ ಕೊಡುಗೆಯನ್ನು ಪ್ರಶಂಸಿಸಿದ ಸಚಿವ ಸಂಪುಟವು, ಸತತ ಪ್ರಯತ್ನ, ಉತ್ಸಾಹ ಹಾಗೂ ನಿಷ್ಠೆಯಿಂದ ಭಾರತ ಏನು ಸಾಧಿಸಬಲ್ಲದು ಎಂಬುದಕ್ಕೆ ಇದು ಸಾಕ್ಷಿಯಾಗಿದೆ ಎಂಬ ನಿರ್ಣಯವನ್ನೂ ಅಂಗೀಕರಿಸಲಾಗಿದೆ’ ಎಂದರು.</p>.<p>‘ದೂರದರ್ಶಿತ್ವ ಹಾಗೂ ಅನುಕರಣೀಯ ನಾಯಕತ್ವಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನೂ ಸಭೆ ಅಭಿನಂದಿಸಿತು’ ಎಂದು ಠಾಕೂರ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಮಹತ್ವಾಕಾಂಕ್ಷೆಯ ‘ಚಂದ್ರಯಾನ–3’ರ ನೌಕೆಯ ಲ್ಯಾಂಡರ್ ಮತ್ತು ರೋವರ್ ಅನ್ನು ಚಂದ್ರನ ದಕ್ಷಿಣ ಧ್ರುವದ ಅಂಗಳದಲ್ಲಿ ಇಸ್ರೊ ಯಶಸ್ವಿಯಾಗಿ ಇಳಿಸಿದ್ದನ್ನು (ಸಾಫ್ಟ್ ಲ್ಯಾಂಡಿಂಗ್) ಶ್ಲಾಘಿಸುವ ನಿರ್ಣಯವನ್ನು ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಮಂಗಳವಾರ ಅಂಗೀಕರಿಸಲಾಗಿದೆ.</p>.<p>‘ಈ ಬಾಹ್ಯಾಕಾಶ ಕಾರ್ಯಕ್ರಮವು ಇಸ್ರೊದ ಯಶಸ್ಸು ಮಾತ್ರವಲ್ಲ, ಭಾರತದ ಪ್ರಗತಿ ಹಾಗೂ ಜಾಗತಿಕ ವೇದಿಕೆಯಲ್ಲಿ ದೇಶದ ಸ್ಥಾನ ಉನ್ನತ ಮಟ್ಟಕ್ಕೆ ಏರಿರುವುದರ ಸಂಕೇತವೂ ಆಗಿದೆ’ ಎಂದು ಸಂಪುಟ ಸಭೆಯು ಹರ್ಷ ವ್ಯಕ್ತಪಡಿಸಿದೆ.</p>.<p>‘ಆಗಸ್ಟ್ 23 ಅನ್ನು ರಾಷ್ಟ್ರೀಯ ಬಾಹ್ಯಾಕಾಶ ದಿನ ಎಂಬುದಾಗಿ ಆಚರಿಸುವ ನಿರ್ಧಾರವನ್ನು ಸಹ ಸಭೆ ಸ್ವಾಗತಿಸಿತು’ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ಸಭೆ ಬಳಿಕೆ ಸುದ್ದಿಗಾರರಿಗೆ ತಿಳಿಸಿದರು.</p>.<p>‘ಚಂದ್ರಯಾನ–3ರ ಯಶಸ್ಸಿಗಾಗಿ ಇಸ್ರೊವನ್ನು ಅಭಿನಂದಿಸಿದ ಸಚಿವ ಸಂಪುಟ, ಈ ಸಾಧನೆಗಾಗಿ ಸಂಸ್ಥೆಯ ವಿಜ್ಞಾನಿಗಳಿಗೆ ಧನ್ಯವಾದ ಅರ್ಪಿಸಿತು. ಚಂದ್ರನ ದಕ್ಷಿಣ ಧ್ರುವದಲ್ಲಿ ಅತ್ಯಂತ ನಿಖರವಾಗಿ ಲ್ಯಾಂಡರ್ ಘಟಕವನ್ನು (ವಿಕ್ರಮ್) ಇಳಿಸಿದ್ದು ಮಹತ್ವದ ಸಾಧನೆ ಎಂಬುದಾಗಿ ಸಭೆ ಬಣ್ಣಿಸಿತು’ ಎಂದು ಸಚಿವ ಠಾಕೂರ್ ಹೇಳಿದರು.</p>.<p>‘ಈ ಐತಿಹಾಸಿಕ ಬಾಹ್ಯಾಕಾಶ ಕಾರ್ಯಕ್ರಮಕ್ಕೆ ಪ್ರತಿಯೊಬ್ಬರ ಕೊಡುಗೆಯನ್ನು ಪ್ರಶಂಸಿಸಿದ ಸಚಿವ ಸಂಪುಟವು, ಸತತ ಪ್ರಯತ್ನ, ಉತ್ಸಾಹ ಹಾಗೂ ನಿಷ್ಠೆಯಿಂದ ಭಾರತ ಏನು ಸಾಧಿಸಬಲ್ಲದು ಎಂಬುದಕ್ಕೆ ಇದು ಸಾಕ್ಷಿಯಾಗಿದೆ ಎಂಬ ನಿರ್ಣಯವನ್ನೂ ಅಂಗೀಕರಿಸಲಾಗಿದೆ’ ಎಂದರು.</p>.<p>‘ದೂರದರ್ಶಿತ್ವ ಹಾಗೂ ಅನುಕರಣೀಯ ನಾಯಕತ್ವಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನೂ ಸಭೆ ಅಭಿನಂದಿಸಿತು’ ಎಂದು ಠಾಕೂರ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>