ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜನರು ಎಸ್‌ಪಿ ಪರ ಇಲ್ಲ ಎಂಬುದು ಅಖಿಲೇಶ್‌ಗೆ ಗೊತ್ತಾಗಿದೆ: ಅನುರಾಗ್ ಠಾಕೂರ್

Last Updated 8 ಮಾರ್ಚ್ 2022, 16:04 IST
ಅಕ್ಷರ ಗಾತ್ರ

ಲಖನೌ: ಜನರು ಸಮಾಜವಾದಿ ಪಕ್ಷದ (ಎಸ್‌ಪಿ) ಪರ ಇಲ್ಲ ಎಂಬುದು ಆ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರಿಗೆ ಗೊತ್ತಾಗಿದೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ಹೇಳಿದ್ದಾರೆ.

‘ಸಮಾಜವಾದಿ ‍ಪಕ್ಷದ ಮೊದಲ ಅಭ್ಯರ್ಥಿಗಳ ಪಟ್ಟಿಯಲ್ಲಿ ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದವರೇ ಹೆಚ್ಚಿದ್ದರು. ಮಾರ್ಚ್ 10ರಂದು ಅಖಿಲೇಶ್ ಅವರು ಮತಯಂತ್ರಗಳನ್ನು ದೂರಲಿದ್ದಾರೆ. ಆದರೆ, ಅಲ್ಲಿವರೆಗೂ ಕಾಯಲು ಅವರಿಂದ ಸಾಧ್ಯವಾಗುತ್ತಿಲ್ಲ. ಅದನ್ನು ಅವರು ಮಾರ್ಚ್ 8ರಂದೇ ಹೇಳುತ್ತಿದ್ದಾರೆ. ಯಾಕೆಂದರೆ ಅವರಿಗೆ ಜನರು ತಮ್ಮ ಪರ ಇಲ್ಲ ಎಂಬುದು ಗೊತ್ತಾಗಿದೆ’ ಎಂದು ಠಾಕೂರ್ ಹೇಳಿದ್ದಾರೆ.

‘ವಾರಾಣಸಿಯಲ್ಲಿ ಮತಯಂತ್ರಗಳನ್ನು ಕದಿಯಲಾಗುತ್ತಿದೆ. ಟ್ರಕ್‌ಗಳಲ್ಲಿ ಇವಿಎಂಗಳನ್ನು ಸಾಗಿಸಲಾಗುತ್ತಿದೆ. ಬಿಜೆಪಿ ಮತಗಳನ್ನು ಕದಿಯಲು ಪ್ರಯತ್ನಿಸುತ್ತಿದೆ ಎಂದು ಅಖಿಲೇಶ್‌ ಯಾದವ್‌ ಆರೋಪಿಸಿದ್ದಾರೆ. ಇದರ ಬೆನ್ನಲ್ಲೇ ಅನುರಾಗ್ ಠಾಕೂರ್ ತಿರುಗೇಟು ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT