ಇದೇ ವೇಳೆವಿಮಾನ ನಿಲ್ದಾಣದಹೊರಗೆ ಕಾಯುತ್ತಿದ್ದ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯಿಸಿದ ರವಿಶಂಕರ್ ಪ್ರಸಾದ್, ‘ಮಹತ್ತರ ಹೊಣೆ ನೀಡಿದ ನನ್ನ ಪಕ್ಷಕ್ಕೆ ಧನ್ಯವಾದ ಸಲ್ಲಿಸುತ್ತೇನೆ ಮತ್ತು ಈ ಹೊಣೆಯನ್ನು ಅತ್ಯುತ್ತಮವಾಗಿ ನಿರ್ವಹಿಸುತ್ತೇನೆ. ಬಿಜೆಪಿಯ ಉತ್ತಮ ಆಡಳಿತ ಹಾಗೂ ದೇಶದ ಕುರಿತು ಇರುವ ಬದ್ಧತೆ, ನರೇಂದ್ರ ಮೋದಿ ಅವರು ಅಧಿಕಾರಕ್ಕೆ ಮರಳಲು ನೆರವಾಗಲಿದೆ‘ ಎಂದಿದ್ದಾರೆ.