ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಖಿಂಪುರ: ಕೋರ್ಟ್‌ಗೆ ಶರಣಾದ ಆಶಿಶ್‌ ಮಿಶ್ರಾ

Last Updated 24 ಏಪ್ರಿಲ್ 2022, 16:00 IST
ಅಕ್ಷರ ಗಾತ್ರ

ಲಖಿಂಪುರ: ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣದ ಪ್ರಮುಖ ಆರೋಪಿ, ಕೇಂದ್ರ ಸಚಿವ ಅಜಯ್‌ ಮಿಶ್ರಾ ಅವರ ಪುತ್ರ ಆಶಿಶ್‌ ಮಿಶ್ರಾ ಇಲ್ಲಿನ ಸ್ಥಳೀಯ ನ್ಯಾಯಾಲಯಕ್ಕೆ ಭಾನುವಾರ ಶರಣಾಗಿದ್ದಾರೆ.

‘ಆಶಿಶ್‌ ಮಿಶ್ರಾಗೆ ಅಲಹಾಬಾದ್‌ ಹೈಕೋರ್ಟ್‌ ನೀಡಿದ್ದ ಜಾಮೀನು ಅನ್ನು ಸುಪ್ರೀಂ ಕೋರ್ಟ್‌ ಇದೇ ಏಪ್ರಿಲ್‌ 18 ರಂದು ರದ್ದುಪಡಿಸಿ, ಒಂದು ವಾರದೊಳಗೆ ಶರಣಾಗುವಂತೆ ಸೂಚಿಸಿತ್ತು. ಸುಪ್ರೀಂ ಕೋರ್ಟ್ ನೀಡಿದ ಅವಧಿಗೂ ಮುನ್ನವೇ ಆಶಿಶ್‌ ನ್ಯಾಯಾಲಯಕ್ಕೆ ಶರಣಾಗಿದ್ದಾರೆ’ ಎಂದು ಆಶಿಶ್‌ ಪರ ವಕೀಲ ಅವದೇಶ್‌ ಸಿಂಗ್‌ ತಿಳಿಸಿದ್ದಾರೆ.

‘ಭದ್ರತೆಯ ದೃಷ್ಟಿಯಿಂದ ಆಶಿಶ್‌ ಅವರನ್ನು ಜೈಲಿನಲ್ಲಿ ಪ್ರತ್ಯೇಕ ಬ್ಯಾರಕ್‌ನಲ್ಲಿ ಇರಿಸಲಾಗುವುದು’ ಎಂದು ಜೈಲು ಅಧೀಕ್ಷಕ ಪಿ.ಪಿ.ಸಿಂಗ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT