ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಬರಿಮಲೆ | ಭಕ್ತರ ಸಮಸ್ಯೆ ಬಗೆಹರಿಸುವಂತೆ ಸಿಎಂ ಪಿಣರಾಯಿಗೆ ಕೇಂದ್ರ ಸಚಿವ ಪತ್ರ

Published 17 ಡಿಸೆಂಬರ್ 2023, 4:27 IST
Last Updated 17 ಡಿಸೆಂಬರ್ 2023, 4:27 IST
ಅಕ್ಷರ ಗಾತ್ರ

ಹೈದರಾಬಾದ್‌: ಶಬರಿಮಲೆ ಯಾತ್ರೆಯ ಸಂದರ್ಭದಲ್ಲಿ ಅಯ್ಯಪ್ಪನ ಭಕ್ತರು ಎದುರಿಸುತ್ತಿರುವ ಸಮಸ್ಯೆಗಳು ಮತ್ತು ಅನಾನುಕೂಲತೆಗಳನ್ನು ಪರಿಹರಿಸುವಂತೆ ಒತ್ತಾಯಿಸಿ ಕೇಂದ್ರ ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಸಚಿವ ಜಿ. ಕಿಶನ್‌ ರೆಡ್ಡಿ ಅವರು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರಿಗೆ ಪತ್ರ ಬರೆದಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ರೆಡ್ಡಿ, ‘ಶಬರಿಮಲೆ ಯಾತ್ರೆಯ ಸಂದರ್ಭದಲ್ಲಿ ಅಯ್ಯಪ್ಪ ಭಕ್ತರು ಎದುರಿಸುತ್ತಿರುವ ಸಮಸ್ಯೆಗಳು ಹಾಗೂ ಅನಾನುಕೂಲತೆಗಳನ್ನು ಪರಿಹರಿಸಲು ಕೇರಳ ಸಿಎಂ ಪಿಣರಾಯಿ ವಿಜಯನ್‌ ಅವರಿಗೆ ಪತ್ರ ಬರೆದಿದ್ದೇನೆ’ ಎಂದು ತಿಳಿಸಿದ್ದಾರೆ.

ಶಬರಿಮಲೆಗೆ ಭಕ್ತರು ಪ್ರಯಾಣಿಸುವಾಗ ಅವರಿಗೆ ಸುರಕ್ಷಿತ ಮಾರ್ಗ, ಸುಧಾರಿತ ಮೂಲ ಸೌಕರ್ಯಗಳು ಹಾಗೂ ವೈದ್ಯಕೀಯ ಸೌಲಭ್ಯಗಳು, ನಿರ್ವಹಣೆಗೆ ಸಮರ್ಪಕ ಸಿಬ್ಬಂದಿಗಳನ್ನು ಒದಗಿಸುವಂತೆ ರೆಡ್ಡಿ ಅವರು ಸಿಎಂ ಪಿಣರಾಯಿ ಅವರಿಗೆ ವಿನಂತಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT