<p><strong>ಚಂಡೀಗಢ:</strong> ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ನೇತೃತ್ವದ ಎಎಪಿ ಸರ್ಕಾರವು ನಮ್ಮ ಬೆಂಬಲಿಗರ ವಿರುದ್ಧ ಸುಳ್ಳು ಪ್ರಕರಣಗಳನ್ನು ದಾಖಲಿಸಿದೆ ಎಂದು ಕೇಂದ್ರ ಸಚಿವ ರವನೀತ್ ಸಿಂಗ್ ಬಿಟ್ಟು ವಾಗ್ದಾಳಿ ನಡೆಸಿದ್ದಾರೆ. </p><p>ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ‘ನಮ್ಮ ಬೆಂಬಲಿಗರ ವಿರುದ್ಧ ದಾಖಲಾಗಿರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಸೂಕ್ತ ತನಿಖೆ ನಡೆಸುವಂತೆ ಕೋರಿ ಮಾನ್ ಅವರ ಅಧಿಕೃತ ನಿವಾಸಕ್ಕೆ ಹೋಗಿದ್ದೆ. ಆದರೆ, ಅವರು ಮಾತುಕತೆಗೆ ಅವಕಾಶ ನೀಡದೆ ಪಲಾಯನ ಮಾಡಿದ್ದಾರೆ’ ಎಂದು ಆರೋಪಿಸಿದ್ದಾರೆ. </p><p>‘ಎಲ್ಲರಿಗೂ ನನ್ನ ಕಚೇರಿ ಬಾಗಿಲುಗಳು ಸದಾ ತೆರೆದಿರುತ್ತವೆ ಎಂದು ಸಿಎಂ ಮಾನ್ ಹೇಳುತ್ತಿದ್ದರು. ಹಾಗಾದರೆ ಇಂದು ಬಾಗಿಲು ಏಕೆ ಮುಚ್ಚಿದ್ದಾರೆ. ಹೆದರಿಕೆಯಿಂದಲೇ ನನ್ನನ್ನು ಭೇಟಿಯಾಗದೆ ನುಣುಚಿಕೊಳ್ಳುತ್ತಿದ್ದಾರೆ’ ಎಂದು ಬಿಟ್ಟು ದೂರಿದ್ದಾರೆ. </p><p>ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ ನನ್ನ ಆಪ್ತ ಸಹಾಯಕ ರಾಜೀವ್ ರಾಜಾ ಮತ್ತು ಪಟಿಯಾಲ ಮೂಲದ ರಾಜೀವ್ ಅತ್ರಿ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಲಾಗಿದೆ ಎಂದು ಬಿಟ್ಟು ಆರೋಪಿಸಿದ್ದಾರೆ. </p><p>‘ಒಬ್ಬ ವ್ಯಕ್ತಿ ಬಲಹೀನನಾಗಿದ್ದರೆ ಹೇಗೆ ಮಾತನಾಡುತ್ತಾನೆ. ಆತ ಸತ್ಯವಂತನಾಗಿದ್ದರೆ ನನ್ನೊಂದಿಗೆ ಮಾತನಾಡಬೇಕು. ಯಾರಾದರೂ ಮುಖ್ಯಮಂತ್ರಿ ಅಡಗಿಕೊಂಡಿರುವುದನ್ನು ನೋಡಿದ್ದೀರಾ’ ಎಂದು ಬಿಟ್ಟು ಪ್ರಶ್ನಿಸಿದ್ದಾರೆ. </p><p>ರವನೀತ್ ಸಿಂಗ್ ಬಿಟ್ಟು ಅವರ ಭದ್ರತಾ ಸಿಬ್ಬಂದಿ ಮತ್ತು ಚಂಡೀಗಢ ಪೊಲೀಸರ ನಡುವೆ ತೀವ್ರ ವಾಗ್ವಾದವೂ ನಡೆಯಿತು ಎಂದು ಮಾಧ್ಯಮಗಳು ವರದಿ ಮಾಡಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಂಡೀಗಢ:</strong> ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ನೇತೃತ್ವದ ಎಎಪಿ ಸರ್ಕಾರವು ನಮ್ಮ ಬೆಂಬಲಿಗರ ವಿರುದ್ಧ ಸುಳ್ಳು ಪ್ರಕರಣಗಳನ್ನು ದಾಖಲಿಸಿದೆ ಎಂದು ಕೇಂದ್ರ ಸಚಿವ ರವನೀತ್ ಸಿಂಗ್ ಬಿಟ್ಟು ವಾಗ್ದಾಳಿ ನಡೆಸಿದ್ದಾರೆ. </p><p>ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ‘ನಮ್ಮ ಬೆಂಬಲಿಗರ ವಿರುದ್ಧ ದಾಖಲಾಗಿರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಸೂಕ್ತ ತನಿಖೆ ನಡೆಸುವಂತೆ ಕೋರಿ ಮಾನ್ ಅವರ ಅಧಿಕೃತ ನಿವಾಸಕ್ಕೆ ಹೋಗಿದ್ದೆ. ಆದರೆ, ಅವರು ಮಾತುಕತೆಗೆ ಅವಕಾಶ ನೀಡದೆ ಪಲಾಯನ ಮಾಡಿದ್ದಾರೆ’ ಎಂದು ಆರೋಪಿಸಿದ್ದಾರೆ. </p><p>‘ಎಲ್ಲರಿಗೂ ನನ್ನ ಕಚೇರಿ ಬಾಗಿಲುಗಳು ಸದಾ ತೆರೆದಿರುತ್ತವೆ ಎಂದು ಸಿಎಂ ಮಾನ್ ಹೇಳುತ್ತಿದ್ದರು. ಹಾಗಾದರೆ ಇಂದು ಬಾಗಿಲು ಏಕೆ ಮುಚ್ಚಿದ್ದಾರೆ. ಹೆದರಿಕೆಯಿಂದಲೇ ನನ್ನನ್ನು ಭೇಟಿಯಾಗದೆ ನುಣುಚಿಕೊಳ್ಳುತ್ತಿದ್ದಾರೆ’ ಎಂದು ಬಿಟ್ಟು ದೂರಿದ್ದಾರೆ. </p><p>ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ ನನ್ನ ಆಪ್ತ ಸಹಾಯಕ ರಾಜೀವ್ ರಾಜಾ ಮತ್ತು ಪಟಿಯಾಲ ಮೂಲದ ರಾಜೀವ್ ಅತ್ರಿ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಲಾಗಿದೆ ಎಂದು ಬಿಟ್ಟು ಆರೋಪಿಸಿದ್ದಾರೆ. </p><p>‘ಒಬ್ಬ ವ್ಯಕ್ತಿ ಬಲಹೀನನಾಗಿದ್ದರೆ ಹೇಗೆ ಮಾತನಾಡುತ್ತಾನೆ. ಆತ ಸತ್ಯವಂತನಾಗಿದ್ದರೆ ನನ್ನೊಂದಿಗೆ ಮಾತನಾಡಬೇಕು. ಯಾರಾದರೂ ಮುಖ್ಯಮಂತ್ರಿ ಅಡಗಿಕೊಂಡಿರುವುದನ್ನು ನೋಡಿದ್ದೀರಾ’ ಎಂದು ಬಿಟ್ಟು ಪ್ರಶ್ನಿಸಿದ್ದಾರೆ. </p><p>ರವನೀತ್ ಸಿಂಗ್ ಬಿಟ್ಟು ಅವರ ಭದ್ರತಾ ಸಿಬ್ಬಂದಿ ಮತ್ತು ಚಂಡೀಗಢ ಪೊಲೀಸರ ನಡುವೆ ತೀವ್ರ ವಾಗ್ವಾದವೂ ನಡೆಯಿತು ಎಂದು ಮಾಧ್ಯಮಗಳು ವರದಿ ಮಾಡಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>