ಉಕ್ರೇನ್ನಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳನ್ನು ನೆರೆ ದೇಶಗಳಾದ ಪೋಲೆಂಡ್, ರೊಮೇನಿಯಾ, ಹಂಗೇರಿ, ಸ್ಲೊವಾಕಿಯಾ ಮೂಲಕ ಸ್ವದೇಶಕ್ಕೆ ಕರೆಸಿಕೊಳ್ಳಲಾಗುತ್ತಿದೆ. ‘ಆಪರೇಷನ್ ಗಂಗಾ’ ಎಂಬ ಹೆಸರಿನ ಕಾರ್ಯಾಚರಣೆ ಮೂಲಕ ಉಕ್ರೇನ್ನಿಂದ ಭಾರತೀಯರ ಸ್ಥಳಾಂತರ ನಡೆಯುತ್ತಿದೆ. ಈ ದೇಶಗಳ ಗಡಿಗಳಲ್ಲಿ ಉಕ್ರೇನ್ನಿಂದ ಬರುವ ಭಾರತೀಯರಿಗೆ ನೆರವಾಗಲೆಂದೇ ಕೇಂದ್ರಗಳನ್ನು ತೆರೆಯಲಾಗಿದ್ದು, ಇವು ನಿರಂತರ ಕಾರ್ಯಾಚರಣೆ ನಡೆಸುತ್ತಿವೆ.