ಸುಪ್ರೀಂ ಕೊರ್ಟ್ ನೇಮಿಸಿದ್ದ ಸಮಿತಿಯಲ್ಲಿ ಒಬ್ಬರಾಗಿದ್ದ ಭಾರತೀಯ ಕಿಸಾನ್ ಯೂನಿಯನ್ ಅಧ್ಯಕ್ಷ ಭೂಪಿಂದರ್ ಸಿಂಗ್ ಮನ್ ಅವರು, ಸದಸ್ಯತ್ವ ಸ್ಥಾನದಿಂದ ಹಿಂದೆ ಸರಿದಿದ್ದರು. ಉಳಿದಂತೆ ಮಹಾರಾಷ್ಟ್ರದ ಶೆಟ್ಕಾರಿ ಸಂಘಟನಾ ಅಧ್ಯಕ್ಷ ಘನ್ವಾತ್, ಅಂತರರಾಷ್ಟ್ರೀಯ ಆಹಾರ ನೀತಿ ಸಂಶೋಧನಾ ಸಂಸ್ಥೆಯ ಪ್ರಮೋದ್ ಕುಮಾರ್ ಜೋಶಿ ಮತ್ತು ಕೃಷಿ ಅರ್ಥಶಾಸ್ತ್ರಜ್ಞ ಅಶೋಕ್ ಗುಲಾಟಿ ಅವರು ಸಮಿತಿಯ ಇತರ ಮೂವರು ಸದಸ್ಯರಾಗಿದ್ದಾರೆ.