<p class="title"><strong>ನವದೆಹಲಿ:</strong> ಭಾರತ ಒಕ್ಕೂಟವೋ ಅಥವಾ ಕೇಂದ್ರ ಸರ್ಕಾರವೋ? ವಿರೋಧಪಕ್ಷಗಳ ನಾಯಕರಾದ ರಾಹುಲ್ ಗಾಂಧಿ, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ಇಂಥದೊಂದು ಪ್ರಶ್ನೆ ಎತ್ತಿದ್ದರು.</p>.<p class="title">ಈ ಮುಖಂಡರ ಮಾತಿಗೆ ಬೆಂಬಲ ಎಂಬಂತೆ ಬಿಜೆಪಿ ಸಂಸದ ಸುಶೀಲ್ ಕುಮಾರ್ ಮೋದಿ ನೇತೃತ್ವದ ಸಂಸದೀಯ ಸಮಿತಿಯು ‘ಭಾರತ ಒಕ್ಕೂಟ’ ಎಂಬ ವಾದಕ್ಕೇ ಒತ್ತು ನೀಡಿದೆ.</p>.<p class="title">ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆ, ಕಾನೂನು ವಿಷಯ ಕುರಿತ ಸಂಸದೀಯ ಸ್ಥಾಯಿ ಸಮಿತಿಯು ಗುರುವಾರ ಮಂಡಿಸಲಾದ ಸಚಿವಾಲಯದ ಅನುದಾನ ಕುರಿತ ವರದಿಯಲ್ಲಿ ಈ ವಾದವನ್ನು ಉಲ್ಲೇಖಿಸಿದೆ.</p>.<p>ಕೇಂದ್ರ ಸರ್ಕಾರ ಬಳಕೆಗೆ ಪರ್ಯಾಯವಾಗಿ ಭಾರತ ಒಕ್ಕೂಟ ಎಂದೇ ಬಳಸಬೇಕು. ಕಾರ್ಯಾಂಗ, ಶಾಸಕಾಂಗ ಮತ್ತು ನ್ಯಾಯಾಂಗದ ಅಧಿಕಾರಿಗಳನ್ನು ಭಾರತ ಒಕ್ಕೂಟದ ಅಧಿಕಾರಿಗಳು ಎಂದೇ ಉಲ್ಲೇಖಿಸಬೇಕು ಎಂದು ಹೇಳಿದೆ.</p>.<p>ಇದಕ್ಕೆ ಪ್ರತಿಯಾಗಿ ಸಚಿವಾಲಯವು ಸಮಿತಿಗೆ ‘ಸ್ಪಷ್ಟವಾಗಿ’, ಇದು ನಿಮ್ಮ ವ್ಯಾಪ್ತಿಯನ್ನು ಮೀರಿದ್ದಾಗಿದೆ ಎಂದು ಪ್ರತಿಕ್ರಿಯಿಸಿದೆ.</p>.<p>ಈ ಪ್ರತಿಕ್ರಿಯೆಯನ್ನು ಲಘುವಾಗಿ ಪರಿಗಣಿಸದ ಸಮಿತಿಯು ತನ್ನ ಮತ್ತು ಸಚಿವಾಲಯಾದ ಮನಸ್ಸಾಕ್ಷಿಗೆ ಅನುಗುಣವಾಗಿ, ಸಮಿತಿಯ ಶಿಫಾರಸುಗಳು ‘ಪರಿಮಿತಿಯಲ್ಲಿಯೇ’ ಅಂದರೆ ಸಂವಿಧಾನ ಮತ್ತು ಸಮಿತಿಯ ನಿಯಮಗಳ ವ್ಯಾಪ್ತಿಯಲ್ಲಿಯೇ ಇವೆ ಎಂದು ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ:</strong> ಭಾರತ ಒಕ್ಕೂಟವೋ ಅಥವಾ ಕೇಂದ್ರ ಸರ್ಕಾರವೋ? ವಿರೋಧಪಕ್ಷಗಳ ನಾಯಕರಾದ ರಾಹುಲ್ ಗಾಂಧಿ, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ಇಂಥದೊಂದು ಪ್ರಶ್ನೆ ಎತ್ತಿದ್ದರು.</p>.<p class="title">ಈ ಮುಖಂಡರ ಮಾತಿಗೆ ಬೆಂಬಲ ಎಂಬಂತೆ ಬಿಜೆಪಿ ಸಂಸದ ಸುಶೀಲ್ ಕುಮಾರ್ ಮೋದಿ ನೇತೃತ್ವದ ಸಂಸದೀಯ ಸಮಿತಿಯು ‘ಭಾರತ ಒಕ್ಕೂಟ’ ಎಂಬ ವಾದಕ್ಕೇ ಒತ್ತು ನೀಡಿದೆ.</p>.<p class="title">ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆ, ಕಾನೂನು ವಿಷಯ ಕುರಿತ ಸಂಸದೀಯ ಸ್ಥಾಯಿ ಸಮಿತಿಯು ಗುರುವಾರ ಮಂಡಿಸಲಾದ ಸಚಿವಾಲಯದ ಅನುದಾನ ಕುರಿತ ವರದಿಯಲ್ಲಿ ಈ ವಾದವನ್ನು ಉಲ್ಲೇಖಿಸಿದೆ.</p>.<p>ಕೇಂದ್ರ ಸರ್ಕಾರ ಬಳಕೆಗೆ ಪರ್ಯಾಯವಾಗಿ ಭಾರತ ಒಕ್ಕೂಟ ಎಂದೇ ಬಳಸಬೇಕು. ಕಾರ್ಯಾಂಗ, ಶಾಸಕಾಂಗ ಮತ್ತು ನ್ಯಾಯಾಂಗದ ಅಧಿಕಾರಿಗಳನ್ನು ಭಾರತ ಒಕ್ಕೂಟದ ಅಧಿಕಾರಿಗಳು ಎಂದೇ ಉಲ್ಲೇಖಿಸಬೇಕು ಎಂದು ಹೇಳಿದೆ.</p>.<p>ಇದಕ್ಕೆ ಪ್ರತಿಯಾಗಿ ಸಚಿವಾಲಯವು ಸಮಿತಿಗೆ ‘ಸ್ಪಷ್ಟವಾಗಿ’, ಇದು ನಿಮ್ಮ ವ್ಯಾಪ್ತಿಯನ್ನು ಮೀರಿದ್ದಾಗಿದೆ ಎಂದು ಪ್ರತಿಕ್ರಿಯಿಸಿದೆ.</p>.<p>ಈ ಪ್ರತಿಕ್ರಿಯೆಯನ್ನು ಲಘುವಾಗಿ ಪರಿಗಣಿಸದ ಸಮಿತಿಯು ತನ್ನ ಮತ್ತು ಸಚಿವಾಲಯಾದ ಮನಸ್ಸಾಕ್ಷಿಗೆ ಅನುಗುಣವಾಗಿ, ಸಮಿತಿಯ ಶಿಫಾರಸುಗಳು ‘ಪರಿಮಿತಿಯಲ್ಲಿಯೇ’ ಅಂದರೆ ಸಂವಿಧಾನ ಮತ್ತು ಸಮಿತಿಯ ನಿಯಮಗಳ ವ್ಯಾಪ್ತಿಯಲ್ಲಿಯೇ ಇವೆ ಎಂದು ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>