<p><strong>ನವದೆಹಲಿ</strong>: ಮಹತ್ವದ ಬೆಳವಣಿಗೆಯೊಂದರಲ್ಲಿ ದೆಹಲಿ ಹೈಕೋರ್ಟ್, ಭ್ರಷ್ಟಾಚಾರ ಪ್ರಕರಣವೊಂದರಲ್ಲಿ ಲಂಚದ ಆರೋಪ ಎದುರಿಸುತ್ತಿರುವ ಮೂವರು ಸಿಬಿಐ ಅಧಿಕಾರಿಗಳನ್ನು ಎರಡು ದಿನಗಳ ಮಟ್ಟಿಗೆ ಸಿಬಿಐ ಕಸ್ಟಡಿಗೆ ಒಪ್ಪಿಸಿ ಆದೇಶ ಹೊರಡಿಸಿದೆ. </p>.<p>ನ್ಯಾಯಮೂರ್ತಿ ನೀನಾ ಬನ್ಸಾಲ್ ಕೃಷ್ಣ ಅವರು ಏಪ್ರಿಲ್ 25 ರಂದು ನೀಡಿದ ಆದೇಶದಲ್ಲಿ, ‘ಇದು ಸಿಬಿಐ, ಇ.ಡಿ ಮತ್ತು ಇತರ ಇಲಾಖೆಗಳಲ್ಲಿನ ಅತಿರೇಕದ ಭ್ರಷ್ಟಾಚಾರದ ವಿಶಿಷ್ಟ ಪ್ರಕರಣಗಳಲ್ಲಿ ಒಂದಾಗಿದೆ. ಇದು ನಮ್ಮ ಕಾರ್ಯಾಂಗ ಮತ್ತು ತನಿಖಾ ಯಂತ್ರದ ಸಂಪೂರ್ಣ ವ್ಯವಸ್ಥೆಯನ್ನು ಅಲುಗಾಡಿಸುತ್ತದೆ. ಈ ಅಪರಾಧದ ತನಿಖೆ ನಡೆಯುವುದು ಪ್ರಾಥಮಿಕ ಕರ್ತವ್ಯವಾಗಿದೆ. ಅಲ್ಲದೆ ಅಪರಾಧಿಗಳನ್ನು ತಾವು ನಡೆಸಿದ ಭ್ರಷ್ಟಾಚಾರಕ್ಕೆ ಶಿಕ್ಷೆ ಎದುರಿಸುವಂತೆ ಮಾಡಬೇಕಿದೆ’ ಎಂದು ಹೇಳಿದ್ದಾರೆ. </p>.<p>ಮೂವರು ಆರೋಪಿ ಅಧಿಕಾರಿಗಳನ್ನು ಏಜೆನ್ಸಿ ಕಸ್ಟಡಿಗೆ ನೀಡಲು ನಿರಾಕರಿಸಿದ ವಿಚಾರಣಾ ನ್ಯಾಯಾಲಯದ ಆದೇಶದ ವಿರುದ್ಧ ಸಿಬಿಐ ಸಲ್ಲಿಸಿದ ಅರ್ಜಿಯ ಮೇರೆಗೆ ಈ ಆದೇಶ ಹೊರಬಿದ್ದಿದೆ.</p>.<p>ತಾನು ಭಾಗಿಯಾಗಿರುವ ಎರಡು ಪ್ರಕರಣಗಳನ್ನು ಇತ್ಯರ್ಥಪಡಿಸಲು ಆರೋಪಿ ಸಿಬಿಐ ಅಧಿಕಾರಿಗಳು ₹50 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು. ನಂತರ ಅದನ್ನು ₹35 ಲಕ್ಷಕ್ಕೆ ಇಳಿಸಿದರು ಎಂದು ದೂರುದಾರರು ಆರೋಪಿಸಿದ್ದಾರೆ.</p>.<p>ಮತ್ತೊಂದು ಪ್ರಕರಣದಲ್ಲಿ ಇ.ಡಿ ಅಧಿಕಾರಿಗಳ ಮೇಲೆ ಪ್ರಭಾವ ಬೀರಿದ್ದಕ್ಕಾಗಿ ಹಣಕಾಸು ಸಚಿವಾಲಯದ ಮತ್ತೊಬ್ಬ ಅಧಿಕಾರಿ ಗೂಗಲ್ ಪೇ ಮೂಲಕ ₹ 50,000 ಸ್ವೀಕರಿಸಿದ್ದಾರೆ ಎಂದು ಆರೋಪಿಸಲಾಗಿದೆ.</p>.<p>ಏಪ್ರಿಲ್ 10 ರಂದು, ವಿಚಾರಣಾ ನ್ಯಾಯಾಲಯವು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು. 10 ದಿನಗಳ ಕಸ್ಟಡಿಗೆ ನೀಡುವಂತೆ ಸಿಬಿಐ ಸಲ್ಲಿಸಿದ್ದ ಮನವಿಯನ್ನು ತಳ್ಳಿಹಾಕಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಮಹತ್ವದ ಬೆಳವಣಿಗೆಯೊಂದರಲ್ಲಿ ದೆಹಲಿ ಹೈಕೋರ್ಟ್, ಭ್ರಷ್ಟಾಚಾರ ಪ್ರಕರಣವೊಂದರಲ್ಲಿ ಲಂಚದ ಆರೋಪ ಎದುರಿಸುತ್ತಿರುವ ಮೂವರು ಸಿಬಿಐ ಅಧಿಕಾರಿಗಳನ್ನು ಎರಡು ದಿನಗಳ ಮಟ್ಟಿಗೆ ಸಿಬಿಐ ಕಸ್ಟಡಿಗೆ ಒಪ್ಪಿಸಿ ಆದೇಶ ಹೊರಡಿಸಿದೆ. </p>.<p>ನ್ಯಾಯಮೂರ್ತಿ ನೀನಾ ಬನ್ಸಾಲ್ ಕೃಷ್ಣ ಅವರು ಏಪ್ರಿಲ್ 25 ರಂದು ನೀಡಿದ ಆದೇಶದಲ್ಲಿ, ‘ಇದು ಸಿಬಿಐ, ಇ.ಡಿ ಮತ್ತು ಇತರ ಇಲಾಖೆಗಳಲ್ಲಿನ ಅತಿರೇಕದ ಭ್ರಷ್ಟಾಚಾರದ ವಿಶಿಷ್ಟ ಪ್ರಕರಣಗಳಲ್ಲಿ ಒಂದಾಗಿದೆ. ಇದು ನಮ್ಮ ಕಾರ್ಯಾಂಗ ಮತ್ತು ತನಿಖಾ ಯಂತ್ರದ ಸಂಪೂರ್ಣ ವ್ಯವಸ್ಥೆಯನ್ನು ಅಲುಗಾಡಿಸುತ್ತದೆ. ಈ ಅಪರಾಧದ ತನಿಖೆ ನಡೆಯುವುದು ಪ್ರಾಥಮಿಕ ಕರ್ತವ್ಯವಾಗಿದೆ. ಅಲ್ಲದೆ ಅಪರಾಧಿಗಳನ್ನು ತಾವು ನಡೆಸಿದ ಭ್ರಷ್ಟಾಚಾರಕ್ಕೆ ಶಿಕ್ಷೆ ಎದುರಿಸುವಂತೆ ಮಾಡಬೇಕಿದೆ’ ಎಂದು ಹೇಳಿದ್ದಾರೆ. </p>.<p>ಮೂವರು ಆರೋಪಿ ಅಧಿಕಾರಿಗಳನ್ನು ಏಜೆನ್ಸಿ ಕಸ್ಟಡಿಗೆ ನೀಡಲು ನಿರಾಕರಿಸಿದ ವಿಚಾರಣಾ ನ್ಯಾಯಾಲಯದ ಆದೇಶದ ವಿರುದ್ಧ ಸಿಬಿಐ ಸಲ್ಲಿಸಿದ ಅರ್ಜಿಯ ಮೇರೆಗೆ ಈ ಆದೇಶ ಹೊರಬಿದ್ದಿದೆ.</p>.<p>ತಾನು ಭಾಗಿಯಾಗಿರುವ ಎರಡು ಪ್ರಕರಣಗಳನ್ನು ಇತ್ಯರ್ಥಪಡಿಸಲು ಆರೋಪಿ ಸಿಬಿಐ ಅಧಿಕಾರಿಗಳು ₹50 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು. ನಂತರ ಅದನ್ನು ₹35 ಲಕ್ಷಕ್ಕೆ ಇಳಿಸಿದರು ಎಂದು ದೂರುದಾರರು ಆರೋಪಿಸಿದ್ದಾರೆ.</p>.<p>ಮತ್ತೊಂದು ಪ್ರಕರಣದಲ್ಲಿ ಇ.ಡಿ ಅಧಿಕಾರಿಗಳ ಮೇಲೆ ಪ್ರಭಾವ ಬೀರಿದ್ದಕ್ಕಾಗಿ ಹಣಕಾಸು ಸಚಿವಾಲಯದ ಮತ್ತೊಬ್ಬ ಅಧಿಕಾರಿ ಗೂಗಲ್ ಪೇ ಮೂಲಕ ₹ 50,000 ಸ್ವೀಕರಿಸಿದ್ದಾರೆ ಎಂದು ಆರೋಪಿಸಲಾಗಿದೆ.</p>.<p>ಏಪ್ರಿಲ್ 10 ರಂದು, ವಿಚಾರಣಾ ನ್ಯಾಯಾಲಯವು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು. 10 ದಿನಗಳ ಕಸ್ಟಡಿಗೆ ನೀಡುವಂತೆ ಸಿಬಿಐ ಸಲ್ಲಿಸಿದ್ದ ಮನವಿಯನ್ನು ತಳ್ಳಿಹಾಕಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>