<p><strong>ಲಖನೌ: </strong>ಉತ್ತರ ಪ್ರದೇಶದ<strong></strong><a href="https://www.prajavani.net/tags/unnao-rape-case" target="_blank">ಉನ್ನಾವ್ ಸಾಮೂಹಿಕ ಅತ್ಯಾಚಾರ</a> ಸಂತ್ರಸ್ತೆ ಗುರುವಾರಬೆಳಗ್ಗೆ ನ್ಯಾಯಾಲಯದ ವಿಚಾರಣೆಗಾಗಿ ಬರುತ್ತಿದ್ದ ವೇಳೆ ದುಷ್ಕರ್ಮಿಗಳು ಆಕೆಯ ಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ ಘಟನೆ ನಡೆದಿದೆ.</p>.<p>ಈಕೆಯನ್ನು ತಕ್ಷಣ ಆಸ್ಪತ್ರೆಗೆ ಸೇರಿಸಿದ್ದು, ಆರೋಗ್ಯಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ಹೇಳಿದ್ದಾರೆ.</p>.<p>ರಾಯ್ಬರೇಲಿಗೆ ಬರುವುದಕ್ಕಾಗಿ ಮುಂಜಾನೆ4.30ಕ್ಕೆ ಬೈಸ್ವಾರಾ ಬಿಹಾರ್ರೈಲು ನಿಲ್ದಾಣಕ್ಕೆ ಹೋಗುತ್ತಿದ್ದಾಗದುಷ್ಕರ್ಮಿಗಳು ಆಕೆಯನ್ನು ತಡೆದಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.</p>.<p>ಸಂತ್ರಸ್ತೆಯ ಹೇಳಿಕೆ ಪ್ರಕಾರ 6 ಮಂದಿ ದುಷ್ಕರ್ಮಿಗಳು ಅಡ್ಡಗಟ್ಟಿ ತಲೆಗೆ ಹೊಡಿದು, ಕತ್ತಿಯಿಂದ ಕುತ್ತಿಗೆಗೆ ಇರಿದಿದ್ದಾರೆ. ಆಮೇಲೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿದ್ದಾರೆ.</p>.<p>ಗೌರಾ ಕ್ರಾಸಿಂಗ್ನಲ್ಲಿ ಹರಿಶಂಕರ್ ತ್ರಿವೇದಿ, ಕಿಶೋರ್, ಶುಭಂ, ಶಿವಂ, ಉಮೇಶ್ ಮತ್ತು ಇಬ್ಬರು ತನ್ನ ಮೇಲೆ ದಾಳಿ ನಡೆಸಿದ್ದಾರೆ ಎಂದು ಸಂತ್ರಸ್ತೆ ಹೇಳಿದ್ದು, ಇದರಲ್ಲಿ ಇಬ್ಬರು ಅತ್ಯಾಚಾರ ಪ್ರಕರಣದ ಆರೋಪಿಗಳಾಗಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://cms.prajavani.net/stories/national/unnao-rape-case-bjp-expels-its-655193.html" target="_blank">ಉನ್ನಾವ್ ಅತ್ಯಾಚಾರ ಪ್ರಕರಣ: ಹೋರಾಟವೇ ದುಬಾರಿಯಾಯಿತೇ?</a></p>.<p>ಈವೇಳೆ ಅಲ್ಲಿದ್ದ ಜನರು ಸಂತ್ರಸ್ತೆಯ ರಕ್ಷಣೆಗಾಗಿ ಓಡಿ ಬಂದಾಗ ದುರ್ಷರ್ಮಿಗಳು ಓಡಿ ಹೋಗಿದ್ದಾರೆ. ಸ್ಥಳೀಯರು112 ಸಂಖ್ಯೆಗೆ ತುರ್ತು ಕರೆ ಮಾಡಿದ ನಂತರ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದರು.</p>.<p>ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 5 ಮಂದಿಯ ವಿರುದ್ಧ ಸಂತ್ರಸ್ತೆ ದೂರು ನೀಡಿದ್ದು ಇದರಲ್ಲಿ ಮೂವರನ್ನು ಬಂಧಿಸಲಾಗಿದೆ. ಇನ್ನು ಇಬ್ಬರು ಆರೋಪಿಗಳಿಗಾಗಿ ಹುಡುಕಾಟನಡೆಯುತ್ತಿದೆ ಎಂದು ಉನ್ನಾವ್ ಎಸ್ಪಿ ವಿಕ್ರಾಂತ್ ವೀರ್ ಹೇಳಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/national/unnao-rape-survivors-car-crash-654836.html" target="_blank">ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕಾರು ಅಪಘಾತ ಪ್ರಕರಣದಲ್ಲಿ ಬಿಜೆಪಿ ಕೈವಾಡ?</a></p>.<p>ಸಾಮೂಹಿಕ ಅತ್ಯಾಚಾರದ ಬಗ್ಗೆ ಸಂತ್ರಸ್ತೆ ಮಾರ್ಚ್ ತಿಂಗಳಲ್ಲಿ ಕೋರ್ಟ್ ಮೆಟ್ಟಿಲೇರಿದ್ದರು. ಪ್ರಕರಣದಲ್ಲಿ ಬಂಧಿತರಾಗಿದ್ದಇಬ್ಬರು ಆರೋಪಿಗಳು ಜಾಮೀನು ಪಡೆದು ಹೊರ ಬಂದಿದ್ದಾರೆ. ಸಂತ್ರಸ್ತೆಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/national/woman-who-had-filed-rape-654390.html" target="_blank">ಉನ್ನಾವ್ ಅತ್ಯಾಚಾರ: ಆರೋಪ ಹೊರಿಸಿದ್ದಕ್ಕಾಗಿ ಬೆಲೆ ತೆರಬೇಕಾಯಿತೇ ಸಂತ್ರಸ್ತೆ?</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ: </strong>ಉತ್ತರ ಪ್ರದೇಶದ<strong></strong><a href="https://www.prajavani.net/tags/unnao-rape-case" target="_blank">ಉನ್ನಾವ್ ಸಾಮೂಹಿಕ ಅತ್ಯಾಚಾರ</a> ಸಂತ್ರಸ್ತೆ ಗುರುವಾರಬೆಳಗ್ಗೆ ನ್ಯಾಯಾಲಯದ ವಿಚಾರಣೆಗಾಗಿ ಬರುತ್ತಿದ್ದ ವೇಳೆ ದುಷ್ಕರ್ಮಿಗಳು ಆಕೆಯ ಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ ಘಟನೆ ನಡೆದಿದೆ.</p>.<p>ಈಕೆಯನ್ನು ತಕ್ಷಣ ಆಸ್ಪತ್ರೆಗೆ ಸೇರಿಸಿದ್ದು, ಆರೋಗ್ಯಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ಹೇಳಿದ್ದಾರೆ.</p>.<p>ರಾಯ್ಬರೇಲಿಗೆ ಬರುವುದಕ್ಕಾಗಿ ಮುಂಜಾನೆ4.30ಕ್ಕೆ ಬೈಸ್ವಾರಾ ಬಿಹಾರ್ರೈಲು ನಿಲ್ದಾಣಕ್ಕೆ ಹೋಗುತ್ತಿದ್ದಾಗದುಷ್ಕರ್ಮಿಗಳು ಆಕೆಯನ್ನು ತಡೆದಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.</p>.<p>ಸಂತ್ರಸ್ತೆಯ ಹೇಳಿಕೆ ಪ್ರಕಾರ 6 ಮಂದಿ ದುಷ್ಕರ್ಮಿಗಳು ಅಡ್ಡಗಟ್ಟಿ ತಲೆಗೆ ಹೊಡಿದು, ಕತ್ತಿಯಿಂದ ಕುತ್ತಿಗೆಗೆ ಇರಿದಿದ್ದಾರೆ. ಆಮೇಲೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿದ್ದಾರೆ.</p>.<p>ಗೌರಾ ಕ್ರಾಸಿಂಗ್ನಲ್ಲಿ ಹರಿಶಂಕರ್ ತ್ರಿವೇದಿ, ಕಿಶೋರ್, ಶುಭಂ, ಶಿವಂ, ಉಮೇಶ್ ಮತ್ತು ಇಬ್ಬರು ತನ್ನ ಮೇಲೆ ದಾಳಿ ನಡೆಸಿದ್ದಾರೆ ಎಂದು ಸಂತ್ರಸ್ತೆ ಹೇಳಿದ್ದು, ಇದರಲ್ಲಿ ಇಬ್ಬರು ಅತ್ಯಾಚಾರ ಪ್ರಕರಣದ ಆರೋಪಿಗಳಾಗಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://cms.prajavani.net/stories/national/unnao-rape-case-bjp-expels-its-655193.html" target="_blank">ಉನ್ನಾವ್ ಅತ್ಯಾಚಾರ ಪ್ರಕರಣ: ಹೋರಾಟವೇ ದುಬಾರಿಯಾಯಿತೇ?</a></p>.<p>ಈವೇಳೆ ಅಲ್ಲಿದ್ದ ಜನರು ಸಂತ್ರಸ್ತೆಯ ರಕ್ಷಣೆಗಾಗಿ ಓಡಿ ಬಂದಾಗ ದುರ್ಷರ್ಮಿಗಳು ಓಡಿ ಹೋಗಿದ್ದಾರೆ. ಸ್ಥಳೀಯರು112 ಸಂಖ್ಯೆಗೆ ತುರ್ತು ಕರೆ ಮಾಡಿದ ನಂತರ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದರು.</p>.<p>ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 5 ಮಂದಿಯ ವಿರುದ್ಧ ಸಂತ್ರಸ್ತೆ ದೂರು ನೀಡಿದ್ದು ಇದರಲ್ಲಿ ಮೂವರನ್ನು ಬಂಧಿಸಲಾಗಿದೆ. ಇನ್ನು ಇಬ್ಬರು ಆರೋಪಿಗಳಿಗಾಗಿ ಹುಡುಕಾಟನಡೆಯುತ್ತಿದೆ ಎಂದು ಉನ್ನಾವ್ ಎಸ್ಪಿ ವಿಕ್ರಾಂತ್ ವೀರ್ ಹೇಳಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/national/unnao-rape-survivors-car-crash-654836.html" target="_blank">ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕಾರು ಅಪಘಾತ ಪ್ರಕರಣದಲ್ಲಿ ಬಿಜೆಪಿ ಕೈವಾಡ?</a></p>.<p>ಸಾಮೂಹಿಕ ಅತ್ಯಾಚಾರದ ಬಗ್ಗೆ ಸಂತ್ರಸ್ತೆ ಮಾರ್ಚ್ ತಿಂಗಳಲ್ಲಿ ಕೋರ್ಟ್ ಮೆಟ್ಟಿಲೇರಿದ್ದರು. ಪ್ರಕರಣದಲ್ಲಿ ಬಂಧಿತರಾಗಿದ್ದಇಬ್ಬರು ಆರೋಪಿಗಳು ಜಾಮೀನು ಪಡೆದು ಹೊರ ಬಂದಿದ್ದಾರೆ. ಸಂತ್ರಸ್ತೆಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/national/woman-who-had-filed-rape-654390.html" target="_blank">ಉನ್ನಾವ್ ಅತ್ಯಾಚಾರ: ಆರೋಪ ಹೊರಿಸಿದ್ದಕ್ಕಾಗಿ ಬೆಲೆ ತೆರಬೇಕಾಯಿತೇ ಸಂತ್ರಸ್ತೆ?</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>