<p><strong>ನವದೆಹಲಿ</strong>: ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ತಂದೆ ಕಸ್ಟಡಿಯಲ್ಲಿ ಮೃತಪಟ್ಟ ಪ್ರಕರಣದಲ್ಲಿ ಬಿಜೆಪಿಯ ಉಚ್ಚಾಟಿತ ನಾಯಕ ಕುಲದೀಪ್ ಸಿಂಗ್ ಸೆಂಗರ್ಗೆ ವಿಧಿಸಿರುವ 10 ವರ್ಷಗಳ ಜೈಲು ಶಿಕ್ಷೆಯನ್ನು ಅಮಾನತುಗೊಳಿಸಲು ದೆಹಲಿ ಹೈಕೋರ್ಟ್ ಸೋಮವಾರ ನಿರಾಕರಿಸಿದೆ.</p>.<p>‘ಶಿಕ್ಷೆಯಿಂದ ಅಮಾನತುಗೊಳಿಸಬೇಕು ಎಂಬ ಮನವಿಯನ್ನು ಸಮರ್ಥಿಸಲು ಸಾಕಷ್ಟು ಪುರಾವೆಗಳನ್ನು ಒದಗಿಸಿಲ್ಲ. ಆದ್ದರಿಂದ ಶಿಕ್ಷೆ ಅಮಾನತುಗೊಳಿಸುವಂತೆ ಕೋರಿ ಸಲ್ಲಿಸಿದ ಅರ್ಜಿಯನ್ನು ವಜಾಗೊಳಿಸಲಾಗಿದೆ’ ಎಂದು ನ್ಯಾಯಮೂರ್ತಿ ರವೀಂದರ್ ಡುಡೇಜಾ ಹೇಳಿದರು.</p>.<p>‘ಅರ್ಜಿದಾರರು ಏಳೂವರೆ ವರ್ಷಗಳ ಸುದೀರ್ಘ ಸೆರೆವಾಸ ಅನುಭವಿಸಿದ್ದು, ಅವರು ಸಲ್ಲಿಸಿರುವ ಮೇಲ್ಮನವಿಗಳ ವಿಚಾರಣೆಯು ವಿಳಂಬವಾಗಿದೆ ಎಂಬುದರ ಅರಿವು ನ್ಯಾಯಾಲಯಕ್ಕೆ ಇದೆ. ಆದರೆ ಈ ವಿಳಂಬಕ್ಕೆ ಅರ್ಜಿದಾರರೇ ಕಾರಣ. ಏಕೆಂದರೆ, ಶಿಕ್ಷೆಗೆ ಮಧ್ಯಂತರ ತಡೆಯಾಜ್ಞೆ ನೀಡಬೇಕು, ಜಾಮೀನು ವಿಸ್ತರಣೆ ಮತ್ತು ಶಿಕ್ಷೆಯನ್ನು ಅಮಾನತುಗೊಳಿಸಬೇಕು ಎಂದು ಕೋರಿ ಅವರು ಹಲವು ಅರ್ಜಿಗಳನ್ನು ಸಲ್ಲಿಸಿದ್ದಾರೆ’ ಎಂದು ಹೇಳಿದರು.</p>.<p>‘ಮೇಲ್ಮನವಿಗಳನ್ನು ಅರ್ಹತೆಯ ಆಧಾರದ ಮೇಲೆ ತ್ವರಿತ ರೀತಿಯಲ್ಲಿ ವಿಚಾರಣೆ ನಡೆಸಿದರೆ ಉದ್ದೇಶವನ್ನು ಪೂರೈಸಲಾಗುತ್ತದೆ’ ಎಂದು ಹೇಳಿ ವಿಚಾರಣೆಯನ್ನು ಫೆಬ್ರುವರಿ 3ಕ್ಕೆ ಮುಂದೂಡಿದರು.</p>.<p>ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ತಂದೆ ಕಸ್ಟಡಿಯಲ್ಲಿ ಮೃತಪಟ್ಟ ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯವು 2020ರ ಮಾರ್ಚ್ 13ರಂದು ಸೆಂಗರ್ಗೆ 10 ವರ್ಷ ಜೈಲು ಹಾಗೂ ₹10 ಲಕ್ಷ ದಂಡ ವಿಧಿಸಿದೆ.</p>.<p>ಇದೇ ಪ್ರಕರಣದಲ್ಲಿ ನ್ಯಾಯಾಲಯವು ಸೆಂಗರ್ ಅವರ ಸಹೋದರ ಅತುಲ್ ಸಿಂಗ್ ಸೆಂಗರ್ ಮತ್ತು ಇತರ ಐವರಿಗೆ 10 ವರ್ಷಗಳ ಶಿಕ್ಷೆ ವಿಧಿಸಿದೆ.</p>.<p>ಅತ್ಯಾಚಾರ ಸಂತ್ರಸ್ತೆಯ ತಂದೆಯನ್ನು ಸೆಂಗರ್ ಸೂಚನೆಯಂತೆ ಶಸ್ತ್ರಾಸ್ತ್ರ ಕಾಯ್ದೆಯಡಿ ಬಂಧಿಸಲಾಗಿತ್ತು. ಪೊಲೀಸ್ ಕಸ್ಟಡಿಯಲ್ಲಿದ್ದಾಗ 2018ರ ಏಪ್ರಿಲ್ 9ರಂದು ಮೃತಪಟ್ಟಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ತಂದೆ ಕಸ್ಟಡಿಯಲ್ಲಿ ಮೃತಪಟ್ಟ ಪ್ರಕರಣದಲ್ಲಿ ಬಿಜೆಪಿಯ ಉಚ್ಚಾಟಿತ ನಾಯಕ ಕುಲದೀಪ್ ಸಿಂಗ್ ಸೆಂಗರ್ಗೆ ವಿಧಿಸಿರುವ 10 ವರ್ಷಗಳ ಜೈಲು ಶಿಕ್ಷೆಯನ್ನು ಅಮಾನತುಗೊಳಿಸಲು ದೆಹಲಿ ಹೈಕೋರ್ಟ್ ಸೋಮವಾರ ನಿರಾಕರಿಸಿದೆ.</p>.<p>‘ಶಿಕ್ಷೆಯಿಂದ ಅಮಾನತುಗೊಳಿಸಬೇಕು ಎಂಬ ಮನವಿಯನ್ನು ಸಮರ್ಥಿಸಲು ಸಾಕಷ್ಟು ಪುರಾವೆಗಳನ್ನು ಒದಗಿಸಿಲ್ಲ. ಆದ್ದರಿಂದ ಶಿಕ್ಷೆ ಅಮಾನತುಗೊಳಿಸುವಂತೆ ಕೋರಿ ಸಲ್ಲಿಸಿದ ಅರ್ಜಿಯನ್ನು ವಜಾಗೊಳಿಸಲಾಗಿದೆ’ ಎಂದು ನ್ಯಾಯಮೂರ್ತಿ ರವೀಂದರ್ ಡುಡೇಜಾ ಹೇಳಿದರು.</p>.<p>‘ಅರ್ಜಿದಾರರು ಏಳೂವರೆ ವರ್ಷಗಳ ಸುದೀರ್ಘ ಸೆರೆವಾಸ ಅನುಭವಿಸಿದ್ದು, ಅವರು ಸಲ್ಲಿಸಿರುವ ಮೇಲ್ಮನವಿಗಳ ವಿಚಾರಣೆಯು ವಿಳಂಬವಾಗಿದೆ ಎಂಬುದರ ಅರಿವು ನ್ಯಾಯಾಲಯಕ್ಕೆ ಇದೆ. ಆದರೆ ಈ ವಿಳಂಬಕ್ಕೆ ಅರ್ಜಿದಾರರೇ ಕಾರಣ. ಏಕೆಂದರೆ, ಶಿಕ್ಷೆಗೆ ಮಧ್ಯಂತರ ತಡೆಯಾಜ್ಞೆ ನೀಡಬೇಕು, ಜಾಮೀನು ವಿಸ್ತರಣೆ ಮತ್ತು ಶಿಕ್ಷೆಯನ್ನು ಅಮಾನತುಗೊಳಿಸಬೇಕು ಎಂದು ಕೋರಿ ಅವರು ಹಲವು ಅರ್ಜಿಗಳನ್ನು ಸಲ್ಲಿಸಿದ್ದಾರೆ’ ಎಂದು ಹೇಳಿದರು.</p>.<p>‘ಮೇಲ್ಮನವಿಗಳನ್ನು ಅರ್ಹತೆಯ ಆಧಾರದ ಮೇಲೆ ತ್ವರಿತ ರೀತಿಯಲ್ಲಿ ವಿಚಾರಣೆ ನಡೆಸಿದರೆ ಉದ್ದೇಶವನ್ನು ಪೂರೈಸಲಾಗುತ್ತದೆ’ ಎಂದು ಹೇಳಿ ವಿಚಾರಣೆಯನ್ನು ಫೆಬ್ರುವರಿ 3ಕ್ಕೆ ಮುಂದೂಡಿದರು.</p>.<p>ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ತಂದೆ ಕಸ್ಟಡಿಯಲ್ಲಿ ಮೃತಪಟ್ಟ ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯವು 2020ರ ಮಾರ್ಚ್ 13ರಂದು ಸೆಂಗರ್ಗೆ 10 ವರ್ಷ ಜೈಲು ಹಾಗೂ ₹10 ಲಕ್ಷ ದಂಡ ವಿಧಿಸಿದೆ.</p>.<p>ಇದೇ ಪ್ರಕರಣದಲ್ಲಿ ನ್ಯಾಯಾಲಯವು ಸೆಂಗರ್ ಅವರ ಸಹೋದರ ಅತುಲ್ ಸಿಂಗ್ ಸೆಂಗರ್ ಮತ್ತು ಇತರ ಐವರಿಗೆ 10 ವರ್ಷಗಳ ಶಿಕ್ಷೆ ವಿಧಿಸಿದೆ.</p>.<p>ಅತ್ಯಾಚಾರ ಸಂತ್ರಸ್ತೆಯ ತಂದೆಯನ್ನು ಸೆಂಗರ್ ಸೂಚನೆಯಂತೆ ಶಸ್ತ್ರಾಸ್ತ್ರ ಕಾಯ್ದೆಯಡಿ ಬಂಧಿಸಲಾಗಿತ್ತು. ಪೊಲೀಸ್ ಕಸ್ಟಡಿಯಲ್ಲಿದ್ದಾಗ 2018ರ ಏಪ್ರಿಲ್ 9ರಂದು ಮೃತಪಟ್ಟಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>