ಕಾರು ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಜೀವನ್ಮರಣದ ಸ್ಥಿತಿಯಲ್ಲಿರುವ ಉನ್ನಾವ್ ಅತ್ಯಾಚಾರ ಸಂತ್ರಸ್ತೆ ಕುರಿತು ಮಂಗಳವಾರವೂ ಲೋಕಸಭೆಯಲ್ಲಿ ವಿರೋಧ ಪಕ್ಷಗಳು, ಬಿಜೆಪಿಯನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡವು. ವಿರೋಧ ಪಕ್ಷಗಳಾದ ಕಾಂಗ್ರೆಸ್, ಬಿಎಸ್ಪಿ ಮತ್ತು ಎಸ್ಪಿ ಪಕ್ಷಗಳು ಬಿಜೆಪಿ ವಿರುದ್ಧ ಮುಗಿಬಿದ್ದಿದ್ದು, ಶಾಸಕ ಕುಲದೀಪ್ ಸಿಂಗ್ನನ್ನು ಪಕ್ಷದಿಂದ ದೂರವಿಡಬೇಕೆಂದೂ, ಬಿಜೆಪಿ ಯಾವುದೇ ಕಾರಣಕ್ಕೂ ಆರೋಪಿಯ ಪರ ವಹಿಸಬಾರದೆಂದು ಎಚ್ಚರಿಸಿದವು.