<p><strong>ನವದೆಹಲಿ:</strong> 'ಆತನನ್ನು ಗಲ್ಲಿಗೇರಿಸುವವರೆಗೂ ವಿಶ್ರಮಿಸುವುದಿಲ್ಲ' ಎಂದು ಉನ್ನಾವೊ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಹೇಳಿಕೆ ನೀಡಿದ್ದಾರೆ. </p><p>ಅದೇ ವೇಳೆ ದೆಹಲಿ ಹೈಕೋರ್ಟ್ ಆದೇಶಕ್ಕೆ ತಡೆ ನೀಡಿದ ಸುಪ್ರೀಂ ಕೋರ್ಟ್ ನಿರ್ಧಾರವನ್ನು ಸಂತ್ರಸ್ತೆ ಸ್ವಾಗತಿಸಿದ್ದಾರೆ. </p>.ಉನ್ನಾವೊ ಅತ್ಯಾಚಾರಿಗೆ ರಿಲೀಫ್ ನೀಡಿದ್ದ ದೆಹಲಿ HC ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ.ಉನ್ನಾವೊ ಅತ್ಯಾಚಾರ ಪ್ರಕರಣ | ಸೆಂಗರ್ ಶಿಕ್ಷೆ ಅಮಾನತು: ಮೇಲ್ಮನವಿ ವಿಚಾರಣೆ ಇಂದು.<p>2017ರ ಉನ್ನಾವೊ ಅತ್ಯಾಚಾರ ಪ್ರಕರಣದ ಆರೋಪಿ, ಬಿಜೆಪಿ ಉಚ್ಚಾಟಿತ ನಾಯಕ ಕುಲದೀಪ್ ಸಿಂಗ್ ಸೆಂಗರ್ಗೆ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿ, ಜಾಮೀನು ನೀಡಿ ದೆಹಲಿ ಹೈಕೋರ್ಟ್ ಹೊರಡಿಸಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಇಂದು (ಸೋಮವಾರ) ತಡೆ ನೀಡಿತ್ತು. ಈ ಕುರಿತು ನಾಲ್ಕು ವಾರಗಳ ಒಳಗಾಗಿ ಪ್ರತಿಕ್ರಿಯೆ ಸಲ್ಲಿಸುವಂತೆ ಸೆಂಗರ್ಗೆ ನೋಟಿಸ್ ಜಾರಿ ಮಾಡಿದೆ. </p><p>'ಈ ಆದೇಶದಿಂದ ಸಂತೋಷವಾಗಿದೆ. ಸುಪ್ರೀಂ ಕೋರ್ಟ್ನಿಂದ ನನಗೆ ನ್ಯಾಯ ದೊರಕಿದೆ. ನಾನು ಮೊದಲಿನಿಂದಲೂ ನ್ಯಾಯಕ್ಕಾಗಿ ಹೋರಾಡುತ್ತಿದ್ದೇನೆ' ಎಂದು ಸಂತ್ರಸ್ತೆ ಹೇಳಿದ್ದಾರೆ. </p><p>'ನ್ಯಾಯಾಲಯದ ವಿರುದ್ಧ ಯಾವುದೇ ಆರೋಪಗಳನ್ನು ಹೊರಿಸುವುದಿಲ್ಲ. ನನಗೆ ನ್ಯಾಯಾಲಯದ ಮೇಲೆ ಅತೀವ ನಂಬಿಕೆ ಇದೆ. ನನಗೀಗ ಸುಪ್ರೀಂ ಕೋರ್ಟ್ನಿಂದ ನ್ಯಾಯ ದೊರಕಿದೆ' ಎಂದು ಪ್ರತಿಕ್ರಿಯಿಸಿದ್ದಾರೆ. </p><p>'ಅವನನ್ನು ಗಲ್ಲಿಗೇರಿಸುವವರೆಗೂ ಸುಮ್ಮನಿರುವುದಿಲ್ಲ. ನನ್ನ ಹೋರಾಟ ಮುಂದುವರಿಯಲಿದೆ. ಆಗ ಮಾತ್ರ ನನಗೆ ಹಾಗೂ ನನ್ನ ಕುಟುಂಬಕ್ಕೆ ನ್ಯಾಯ ಸಿಗಲಿದೆ. ಈಗಲೂ ನಮಗೆ ಬೆದರಿಕೆಗಳು ಬರುತ್ತಿವೆ' ಎಂದು ಹೇಳಿದ್ದಾರೆ. </p><p>ಸುಪ್ರೀಂ ಕೋರ್ಟ್ ಆದೇಶದ ಬಗ್ಗೆ ಸಂತ್ರಸ್ತೆಯ ಕುಟುಂಬ ಸದಸ್ಯರು ಸಮಾಧಾನ ವ್ಯಕ್ತಪಡಿಸಿದ್ದು, 'ಇದರಿಂದ ನ್ಯಾಯ ವ್ಯವಸ್ಥೆಯ ಮೇಲಿನ ನಂಬಿಕೆ ಪುನಃಸ್ಥಾಪಿಸಲಾಗಿದೆ' ಎಂದಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> 'ಆತನನ್ನು ಗಲ್ಲಿಗೇರಿಸುವವರೆಗೂ ವಿಶ್ರಮಿಸುವುದಿಲ್ಲ' ಎಂದು ಉನ್ನಾವೊ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಹೇಳಿಕೆ ನೀಡಿದ್ದಾರೆ. </p><p>ಅದೇ ವೇಳೆ ದೆಹಲಿ ಹೈಕೋರ್ಟ್ ಆದೇಶಕ್ಕೆ ತಡೆ ನೀಡಿದ ಸುಪ್ರೀಂ ಕೋರ್ಟ್ ನಿರ್ಧಾರವನ್ನು ಸಂತ್ರಸ್ತೆ ಸ್ವಾಗತಿಸಿದ್ದಾರೆ. </p>.ಉನ್ನಾವೊ ಅತ್ಯಾಚಾರಿಗೆ ರಿಲೀಫ್ ನೀಡಿದ್ದ ದೆಹಲಿ HC ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ.ಉನ್ನಾವೊ ಅತ್ಯಾಚಾರ ಪ್ರಕರಣ | ಸೆಂಗರ್ ಶಿಕ್ಷೆ ಅಮಾನತು: ಮೇಲ್ಮನವಿ ವಿಚಾರಣೆ ಇಂದು.<p>2017ರ ಉನ್ನಾವೊ ಅತ್ಯಾಚಾರ ಪ್ರಕರಣದ ಆರೋಪಿ, ಬಿಜೆಪಿ ಉಚ್ಚಾಟಿತ ನಾಯಕ ಕುಲದೀಪ್ ಸಿಂಗ್ ಸೆಂಗರ್ಗೆ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿ, ಜಾಮೀನು ನೀಡಿ ದೆಹಲಿ ಹೈಕೋರ್ಟ್ ಹೊರಡಿಸಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಇಂದು (ಸೋಮವಾರ) ತಡೆ ನೀಡಿತ್ತು. ಈ ಕುರಿತು ನಾಲ್ಕು ವಾರಗಳ ಒಳಗಾಗಿ ಪ್ರತಿಕ್ರಿಯೆ ಸಲ್ಲಿಸುವಂತೆ ಸೆಂಗರ್ಗೆ ನೋಟಿಸ್ ಜಾರಿ ಮಾಡಿದೆ. </p><p>'ಈ ಆದೇಶದಿಂದ ಸಂತೋಷವಾಗಿದೆ. ಸುಪ್ರೀಂ ಕೋರ್ಟ್ನಿಂದ ನನಗೆ ನ್ಯಾಯ ದೊರಕಿದೆ. ನಾನು ಮೊದಲಿನಿಂದಲೂ ನ್ಯಾಯಕ್ಕಾಗಿ ಹೋರಾಡುತ್ತಿದ್ದೇನೆ' ಎಂದು ಸಂತ್ರಸ್ತೆ ಹೇಳಿದ್ದಾರೆ. </p><p>'ನ್ಯಾಯಾಲಯದ ವಿರುದ್ಧ ಯಾವುದೇ ಆರೋಪಗಳನ್ನು ಹೊರಿಸುವುದಿಲ್ಲ. ನನಗೆ ನ್ಯಾಯಾಲಯದ ಮೇಲೆ ಅತೀವ ನಂಬಿಕೆ ಇದೆ. ನನಗೀಗ ಸುಪ್ರೀಂ ಕೋರ್ಟ್ನಿಂದ ನ್ಯಾಯ ದೊರಕಿದೆ' ಎಂದು ಪ್ರತಿಕ್ರಿಯಿಸಿದ್ದಾರೆ. </p><p>'ಅವನನ್ನು ಗಲ್ಲಿಗೇರಿಸುವವರೆಗೂ ಸುಮ್ಮನಿರುವುದಿಲ್ಲ. ನನ್ನ ಹೋರಾಟ ಮುಂದುವರಿಯಲಿದೆ. ಆಗ ಮಾತ್ರ ನನಗೆ ಹಾಗೂ ನನ್ನ ಕುಟುಂಬಕ್ಕೆ ನ್ಯಾಯ ಸಿಗಲಿದೆ. ಈಗಲೂ ನಮಗೆ ಬೆದರಿಕೆಗಳು ಬರುತ್ತಿವೆ' ಎಂದು ಹೇಳಿದ್ದಾರೆ. </p><p>ಸುಪ್ರೀಂ ಕೋರ್ಟ್ ಆದೇಶದ ಬಗ್ಗೆ ಸಂತ್ರಸ್ತೆಯ ಕುಟುಂಬ ಸದಸ್ಯರು ಸಮಾಧಾನ ವ್ಯಕ್ತಪಡಿಸಿದ್ದು, 'ಇದರಿಂದ ನ್ಯಾಯ ವ್ಯವಸ್ಥೆಯ ಮೇಲಿನ ನಂಬಿಕೆ ಪುನಃಸ್ಥಾಪಿಸಲಾಗಿದೆ' ಎಂದಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>