<p><strong>ಲಖನೌ</strong>: ಉತ್ತರ ಪ್ರದೇಶದ ಉನ್ನಾವ್ ಅತ್ಯಾಚಾರ ಪ್ರಕರಣದ ಸಂತ್ರಸ್ತೆಯ ಕಾರು ಅಪಘಾತ ಪ್ರಕರಣದಲ್ಲಿ ಬಿಜೆಪಿ ಕೈವಾಡ ಇದೆ ಎಂದು ಪೊಲೀಸರು ಹೇಳಿರುವುದಾಗಿ <a href="https://www.ndtv.com/india-news/in-unnao-rape-survivors-car-crash-a-second-bjp-name-accused-no-7-arun-singh-2078171?pfrom=home-livetv" target="_blank">ಎನ್ಡಿಟಿವಿ</a> ವರದಿ ಮಾಡಿದೆ.</p>.<p><span style="color:#8B4513;"><strong>ಇದನ್ನೂ ಓದಿ:</strong></span><a href="https://www.prajavani.net/stories/national/unnao-woman-who-accused-bjp-654143.html" target="_blank">ಉನ್ನಾವೊ ಅತ್ಯಾಚಾರ ಸಂತ್ರಸ್ತೆ ಸಂಚರಿಸುತ್ತಿದ್ದ ಕಾರು ಅಪಘಾತ: ಪರಿಸ್ಥಿತಿ ಗಂಭೀರ</a></p>.<p>ಭಾನುವಾರ ರಾಯ್ಬರೇಲಿಯಲ್ಲಿ ಸಂತ್ರಸ್ತೆಯ ಕಾರು ಅಪಘಾತಕ್ಕೀಡಾಗಿತ್ತು. ಅಪಘಾತದಲ್ಲಿ ಸಂತ್ರಸ್ತೆ ಗಂಭೀರ ಗಾಯಗೊಂಡಿದ್ದು, ಇಬ್ಬರು ಸಂಬಂಧಿಕರು ಮೃತಪಟ್ಟಿದ್ದರು.ಕಾರಿಗೆ ಟ್ರಕ್ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ್ದು, ಈ ವೇಳೆ ಟ್ರಕ್ನ ನಂಬರ್ ಪ್ಲೇಟ್ ಮರೆ ಮಾಡಲಾಗಿತ್ತು. ಈ ಬಗ್ಗೆ ಸಿಬಿಐ ತನಿಖೆ ನಡೆಸುತ್ತಿದೆ.</p>.<p>ಅತ್ಯಾಚಾರ ಸಂತ್ರಸ್ತೆಯ ಚಿಕ್ಕಪ್ಪ ಅವರ ಆರೋಪದ ಮೇರೆಗೆ ಅತ್ಯಾಚಾರದ ಆರೋಪಿ ಬಿಜೆಪಿ ಶಾಸಕ ಕುಲ್ದೀಪ್ ಸೆಂಗಾರ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.ಈ ಎಫ್ಐಆರ್ನಲ್ಲಿ ಬಿಜೆಪಿಯ ಇನ್ನೊಬ್ಬ ನಾಯಕರ ಹೆಸರೂ ಇದೆ.</p>.<p><span style="color:#8B4513;"><strong>ಇದನ್ನೂ ಓದಿ:<a href="https://www.prajavani.net/stories/national/woman-who-had-filed-rape-654390.html" target="_blank">ಉನ್ನಾವ್ ಅತ್ಯಾಚಾರ: ಆರೋಪ ಹೊರಿಸಿದ್ದಕ್ಕಾಗಿ ಬೆಲೆ ತೆರಬೇಕಾಯಿತೇ ಸಂತ್ರಸ್ತೆ?</a></strong></span></p>.<p>ಅಪಘಾತ ಪ್ರಕರಣದ ಎಫ್ಐಆರ್ನಲ್ಲಿ ಆರೋಪಿ ಸಂಖ್ಯೆ -7, <strong>ಅರುಣ್ ಸಿಂಗ್</strong> ಎಂಬವರ ಹೆಸರು ಇದೆ. ಅರುಣ್ ಸಿಂಗ್ ಬಿಜೆಪಿ ಕಾರ್ಯಕರ್ತರಾಗಿದ್ದು ಉನ್ನಾವ್ನ ಬ್ಲಾಕ್ ಅಧ್ಯಕ್ಷರಾಗಿದ್ದಾರೆ. ಅಷ್ಟೇ ಅಲ್ಲದೆ ಕುಲ್ದೀಪ್ ಸೆಂಗಾರ್ ಅವರ ಆಪ್ತರೂ ಆಗಿದ್ದಾರೆ.</p>.<p>2019ರ ಲೋಕಸಭಾ ಚುನಾವಣಾ ಪ್ರಚಾರ ಕಾರ್ಯಕ್ರಮದ ಫೋಟೊ, ವಿಡಿಯೊಗಳನ್ನು ನೋಡಿದರೆ ಅರುಣ್ ಸಿಂಗ್ ಅವರು ಅಮಿತ್ ಶಾ ಮತ್ತು ಉನ್ನಾವ್ ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ ಅವರ ಬಳಿ ನಿಂತಿರುವುದು ಕಾಣಿಸುತ್ತದೆ.</p>.<p><span style="color:#8B4513;"><strong>ಇದನ್ನೂ ಓದಿ:<a href="https://www.prajavani.net/stories/national/unnao-rape-case-murder-case-654348.html" target="_blank">ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕಾರು ಅಪಘಾತ:ಬಿಜೆಪಿ ಶಾಸಕನ ವಿರುದ್ಧ ಕೇಸು ದಾಖಲು</a></strong></span></p>.<p>ಉತ್ತರ ಪ್ರದೇಶದ ಸಚಿವ ರಣ್ವೇಂದ್ರ ಪ್ರತಾಪ್ ಸಿಂಗ್ ಅಲಿಯಾಸ್ ಧುನ್ನೀ ಭಯ್ಯಾ ಅವರ ಅಳಿಯ ಈ ಅರುಣ್ ಸಿಂಗ್. ರಣ್ವೇಂದ್ರ ಅವರು ಯೋಗಿ ಆದಿತ್ಯನಾಥ ನೇತೃತ್ವದ ಸರ್ಕಾರದಲ್ಲಿ ಕೃಷಿ, ಕೃಷಿ ಶಿಕ್ಷಣ ಮತ್ತು ಅಧ್ಯಯನ ಇಲಾಖೆಯ ಸಚಿವರಾಗಿದ್ದಾರೆ.</p>.<p>ರಣ್ವೇಂದ್ರ ಸಿಂಗ್ ಅವರು ಫತೇಫುರ್ ಜಿಲ್ಲೆಯ ಶಾಸಕರಾಗಿದ್ದು, ಸಂತ್ರಸ್ತೆಯ ಕಾರಿಗೆ ಡಿಕ್ಕಿ ಹೊಡೆದಿರುವ ಟ್ರಕ್ನಮಾಲೀಕ ಇದೇ ಊರಿನವರಾಗಿದ್ದಾರೆ. ಆದಾಗ್ಯೂ, ಈ ಪ್ರಕರಣದಲ್ಲಿ ಸಿಂಗ್ ಅವರ ಪಾತ್ರದ ಬಗ್ಗೆ ಇಲ್ಲಿಯವರೆಗೆ ಯಾವುದೇ ಸಾಕ್ಷ್ಯ ಸಿಕ್ಕಿಲ್ಲ.</p>.<p><span style="color:#8B4513;"><strong>ಇದನ್ನೂ ಓದಿ:<a href="https://www.prajavani.net/stories/national/unnao-survivor-wrote-cji-days-654567.html" target="_blank">ನನ್ನ ಮನೆಗೆ ಬಂದು ಬೆದರಿಕೆಯೊಡ್ಡಿದ್ದರು: ಉನ್ನಾವ್ ಸಂತ್ರಸ್ತೆಯಿಂದ ಸಿಜೆಐಗೆ ಪತ್ರ</a></strong></span></p>.<p>ಅರುಣ್ ಸಿಂಗ್ ಮತ್ತು ಇತರರು ಸಂತ್ರಸ್ತೆಗೆ ಬೆದರಿಕೆಯೊಡ್ಡಿದ್ದು, ಸೆಂಗಾರ್ ವಿರುದ್ಧದ ಪ್ರಕರಣ ವಾಪಸ್ ಪಡೆಯುವಂತೆಒತ್ತಾಯಿಸಿದ್ದರು ಎಂದು ಎಫ್ಐಆರ್ನಲ್ಲಿದೆ.</p>.<p>2018ರಲ್ಲಿ ಉದ್ಯೋಗ ಪಡೆಯುವುದಕ್ಕಾಗಿ ಸೆಂಗಾರ್ ಅವರನ್ನು ಭೇಟಿಯಾಗಿದ್ದು, ಈ ವೇಳೆ ಸೆಂಗಾರ್ ತನ್ನ ಮೇಲೆ ಅತ್ಯಾಚಾರವೆಸಗಿದ್ದರು ಎಂದು ಸಂತ್ರಸ್ತೆ ಆರೋಪಿಸಿದ್ದರು.ಈ ಆರೋಪದಡಿಯಲ್ಲಿ ಕಳೆದ ವರ್ಷ ಏಪ್ರಿಲ್ ತಿಂಗಳಲ್ಲಿ ಸೆಂಗಾರ್ನ್ನು ಪೊಲೀಸರು ಬಂಧಿಸಿದ್ದರು.<br /><br /><span style="color:#8B4513;"><strong>ಇದನ್ನೂ ಓದಿ:<a href="https://www.prajavani.net/stories/national/sc-takes-suo-moto-cognizance-654800.html" target="_blank">ಉನ್ನಾವ್ ಅತ್ಯಾಚಾರ ಪ್ರಕರಣ: ಸುಪ್ರೀಂಕೋರ್ಟ್ ಸ್ವಯಂಪ್ರೇರಿತ ವಿಚಾರಣೆ ನಾಳೆ</a></strong></span></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ</strong>: ಉತ್ತರ ಪ್ರದೇಶದ ಉನ್ನಾವ್ ಅತ್ಯಾಚಾರ ಪ್ರಕರಣದ ಸಂತ್ರಸ್ತೆಯ ಕಾರು ಅಪಘಾತ ಪ್ರಕರಣದಲ್ಲಿ ಬಿಜೆಪಿ ಕೈವಾಡ ಇದೆ ಎಂದು ಪೊಲೀಸರು ಹೇಳಿರುವುದಾಗಿ <a href="https://www.ndtv.com/india-news/in-unnao-rape-survivors-car-crash-a-second-bjp-name-accused-no-7-arun-singh-2078171?pfrom=home-livetv" target="_blank">ಎನ್ಡಿಟಿವಿ</a> ವರದಿ ಮಾಡಿದೆ.</p>.<p><span style="color:#8B4513;"><strong>ಇದನ್ನೂ ಓದಿ:</strong></span><a href="https://www.prajavani.net/stories/national/unnao-woman-who-accused-bjp-654143.html" target="_blank">ಉನ್ನಾವೊ ಅತ್ಯಾಚಾರ ಸಂತ್ರಸ್ತೆ ಸಂಚರಿಸುತ್ತಿದ್ದ ಕಾರು ಅಪಘಾತ: ಪರಿಸ್ಥಿತಿ ಗಂಭೀರ</a></p>.<p>ಭಾನುವಾರ ರಾಯ್ಬರೇಲಿಯಲ್ಲಿ ಸಂತ್ರಸ್ತೆಯ ಕಾರು ಅಪಘಾತಕ್ಕೀಡಾಗಿತ್ತು. ಅಪಘಾತದಲ್ಲಿ ಸಂತ್ರಸ್ತೆ ಗಂಭೀರ ಗಾಯಗೊಂಡಿದ್ದು, ಇಬ್ಬರು ಸಂಬಂಧಿಕರು ಮೃತಪಟ್ಟಿದ್ದರು.ಕಾರಿಗೆ ಟ್ರಕ್ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ್ದು, ಈ ವೇಳೆ ಟ್ರಕ್ನ ನಂಬರ್ ಪ್ಲೇಟ್ ಮರೆ ಮಾಡಲಾಗಿತ್ತು. ಈ ಬಗ್ಗೆ ಸಿಬಿಐ ತನಿಖೆ ನಡೆಸುತ್ತಿದೆ.</p>.<p>ಅತ್ಯಾಚಾರ ಸಂತ್ರಸ್ತೆಯ ಚಿಕ್ಕಪ್ಪ ಅವರ ಆರೋಪದ ಮೇರೆಗೆ ಅತ್ಯಾಚಾರದ ಆರೋಪಿ ಬಿಜೆಪಿ ಶಾಸಕ ಕುಲ್ದೀಪ್ ಸೆಂಗಾರ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.ಈ ಎಫ್ಐಆರ್ನಲ್ಲಿ ಬಿಜೆಪಿಯ ಇನ್ನೊಬ್ಬ ನಾಯಕರ ಹೆಸರೂ ಇದೆ.</p>.<p><span style="color:#8B4513;"><strong>ಇದನ್ನೂ ಓದಿ:<a href="https://www.prajavani.net/stories/national/woman-who-had-filed-rape-654390.html" target="_blank">ಉನ್ನಾವ್ ಅತ್ಯಾಚಾರ: ಆರೋಪ ಹೊರಿಸಿದ್ದಕ್ಕಾಗಿ ಬೆಲೆ ತೆರಬೇಕಾಯಿತೇ ಸಂತ್ರಸ್ತೆ?</a></strong></span></p>.<p>ಅಪಘಾತ ಪ್ರಕರಣದ ಎಫ್ಐಆರ್ನಲ್ಲಿ ಆರೋಪಿ ಸಂಖ್ಯೆ -7, <strong>ಅರುಣ್ ಸಿಂಗ್</strong> ಎಂಬವರ ಹೆಸರು ಇದೆ. ಅರುಣ್ ಸಿಂಗ್ ಬಿಜೆಪಿ ಕಾರ್ಯಕರ್ತರಾಗಿದ್ದು ಉನ್ನಾವ್ನ ಬ್ಲಾಕ್ ಅಧ್ಯಕ್ಷರಾಗಿದ್ದಾರೆ. ಅಷ್ಟೇ ಅಲ್ಲದೆ ಕುಲ್ದೀಪ್ ಸೆಂಗಾರ್ ಅವರ ಆಪ್ತರೂ ಆಗಿದ್ದಾರೆ.</p>.<p>2019ರ ಲೋಕಸಭಾ ಚುನಾವಣಾ ಪ್ರಚಾರ ಕಾರ್ಯಕ್ರಮದ ಫೋಟೊ, ವಿಡಿಯೊಗಳನ್ನು ನೋಡಿದರೆ ಅರುಣ್ ಸಿಂಗ್ ಅವರು ಅಮಿತ್ ಶಾ ಮತ್ತು ಉನ್ನಾವ್ ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ ಅವರ ಬಳಿ ನಿಂತಿರುವುದು ಕಾಣಿಸುತ್ತದೆ.</p>.<p><span style="color:#8B4513;"><strong>ಇದನ್ನೂ ಓದಿ:<a href="https://www.prajavani.net/stories/national/unnao-rape-case-murder-case-654348.html" target="_blank">ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕಾರು ಅಪಘಾತ:ಬಿಜೆಪಿ ಶಾಸಕನ ವಿರುದ್ಧ ಕೇಸು ದಾಖಲು</a></strong></span></p>.<p>ಉತ್ತರ ಪ್ರದೇಶದ ಸಚಿವ ರಣ್ವೇಂದ್ರ ಪ್ರತಾಪ್ ಸಿಂಗ್ ಅಲಿಯಾಸ್ ಧುನ್ನೀ ಭಯ್ಯಾ ಅವರ ಅಳಿಯ ಈ ಅರುಣ್ ಸಿಂಗ್. ರಣ್ವೇಂದ್ರ ಅವರು ಯೋಗಿ ಆದಿತ್ಯನಾಥ ನೇತೃತ್ವದ ಸರ್ಕಾರದಲ್ಲಿ ಕೃಷಿ, ಕೃಷಿ ಶಿಕ್ಷಣ ಮತ್ತು ಅಧ್ಯಯನ ಇಲಾಖೆಯ ಸಚಿವರಾಗಿದ್ದಾರೆ.</p>.<p>ರಣ್ವೇಂದ್ರ ಸಿಂಗ್ ಅವರು ಫತೇಫುರ್ ಜಿಲ್ಲೆಯ ಶಾಸಕರಾಗಿದ್ದು, ಸಂತ್ರಸ್ತೆಯ ಕಾರಿಗೆ ಡಿಕ್ಕಿ ಹೊಡೆದಿರುವ ಟ್ರಕ್ನಮಾಲೀಕ ಇದೇ ಊರಿನವರಾಗಿದ್ದಾರೆ. ಆದಾಗ್ಯೂ, ಈ ಪ್ರಕರಣದಲ್ಲಿ ಸಿಂಗ್ ಅವರ ಪಾತ್ರದ ಬಗ್ಗೆ ಇಲ್ಲಿಯವರೆಗೆ ಯಾವುದೇ ಸಾಕ್ಷ್ಯ ಸಿಕ್ಕಿಲ್ಲ.</p>.<p><span style="color:#8B4513;"><strong>ಇದನ್ನೂ ಓದಿ:<a href="https://www.prajavani.net/stories/national/unnao-survivor-wrote-cji-days-654567.html" target="_blank">ನನ್ನ ಮನೆಗೆ ಬಂದು ಬೆದರಿಕೆಯೊಡ್ಡಿದ್ದರು: ಉನ್ನಾವ್ ಸಂತ್ರಸ್ತೆಯಿಂದ ಸಿಜೆಐಗೆ ಪತ್ರ</a></strong></span></p>.<p>ಅರುಣ್ ಸಿಂಗ್ ಮತ್ತು ಇತರರು ಸಂತ್ರಸ್ತೆಗೆ ಬೆದರಿಕೆಯೊಡ್ಡಿದ್ದು, ಸೆಂಗಾರ್ ವಿರುದ್ಧದ ಪ್ರಕರಣ ವಾಪಸ್ ಪಡೆಯುವಂತೆಒತ್ತಾಯಿಸಿದ್ದರು ಎಂದು ಎಫ್ಐಆರ್ನಲ್ಲಿದೆ.</p>.<p>2018ರಲ್ಲಿ ಉದ್ಯೋಗ ಪಡೆಯುವುದಕ್ಕಾಗಿ ಸೆಂಗಾರ್ ಅವರನ್ನು ಭೇಟಿಯಾಗಿದ್ದು, ಈ ವೇಳೆ ಸೆಂಗಾರ್ ತನ್ನ ಮೇಲೆ ಅತ್ಯಾಚಾರವೆಸಗಿದ್ದರು ಎಂದು ಸಂತ್ರಸ್ತೆ ಆರೋಪಿಸಿದ್ದರು.ಈ ಆರೋಪದಡಿಯಲ್ಲಿ ಕಳೆದ ವರ್ಷ ಏಪ್ರಿಲ್ ತಿಂಗಳಲ್ಲಿ ಸೆಂಗಾರ್ನ್ನು ಪೊಲೀಸರು ಬಂಧಿಸಿದ್ದರು.<br /><br /><span style="color:#8B4513;"><strong>ಇದನ್ನೂ ಓದಿ:<a href="https://www.prajavani.net/stories/national/sc-takes-suo-moto-cognizance-654800.html" target="_blank">ಉನ್ನಾವ್ ಅತ್ಯಾಚಾರ ಪ್ರಕರಣ: ಸುಪ್ರೀಂಕೋರ್ಟ್ ಸ್ವಯಂಪ್ರೇರಿತ ವಿಚಾರಣೆ ನಾಳೆ</a></strong></span></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>