ಮುಂದುವರಿದು ‘ಆತ್ಮನಿರ್ಭರ’ ಯೋಜನೆಗೆ ಸಂಬಂಧಿಸಿದಂತೆಯೂ ಪ್ರಧಾನಿ ವಿರುದ್ಧ ಕಿಡಿಕಾರಿರುವ ರಾಹುಲ್, ‘ಮೋದಿ ಸರ್ಕಾರವು ಜನರಿಗೆ ‘ಆತ್ಮನಿರ್ಭರ ಭಾರತ’ಕ್ಕೆ ಕರೆ ನೀಡಿದೆ. ನೀವು ನಿಮ್ಮನ್ನು ಮತ್ತು ನಿಮ್ಮ ಜೀವನವನ್ನು ಕಾಪಾಡಿಕೊಳ್ಳಿ. ಏಕೆಂದರೆ ಪ್ರಧಾನಿ ನವಿಲುಗಳೊಂದಿಗೆ ಬ್ಯುಸಿಯಾಗಿದ್ದಾರೆ’ ಎಂದೂ ಟೀಕಿಸಿದ್ದಾರೆ.