<p><strong>ನವದೆಹಲಿ:</strong> ಅಹಂಕಾರಿ ಮನುಷ್ಯನು ‘ಯೋಜಿತವಲ್ಲದ ಲಾಕ್ಡೌನ್’ ಅನುಷ್ಠಾನಗೊಳಿಸಿದ್ದರ ಪರಿಣಾಮವಾಗಿ ಕೋವಿಡ್–19 ಸೋಂಕು ದೇಶದಾದ್ಯಂತ ಹರಡಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.</p>.<p>‘ದೇಶದಾದ್ಯಂತ ಕೊರೊನಾವೈರಸ್ ಪ್ರಕರಣಗಳು ಈ ವಾರದಲ್ಲಿ 50 ಲಕ್ಷದ ಗಡಿ ದಾಟಲಿದೆ. 10 ಲಕ್ಷ ಸಕ್ರಿಯ ಪ್ರಕರಣಗಳು ಕಂಡುಬರಲಿವೆ. ಯಾವುದೇ ಯೋಜನೆಯಿಲ್ಲದೆ ಲಾಕ್ಡೌನ್ ಜಾರಿಗೊಳಿಸಿದ್ದು ಅಹಂ ತುಂಬಿದ ವ್ಯಕ್ತಿಯ ಕೊಡುಗೆಯಾಗಿದ್ದು, ದೇಶದಾದ್ಯಂತ ಕೊರೊನಾವೈರಸ್ ಹರಡಲು ಕಾರಣವಾಯಿತು’ ಎಂದು ಟ್ವೀಟ್ ಮಾಡಿದ್ದಾರೆ.</p>.<p>ಮುಂದುವರಿದು ‘ಆತ್ಮನಿರ್ಭರ’ ಯೋಜನೆಗೆ ಸಂಬಂಧಿಸಿದಂತೆಯೂ ಪ್ರಧಾನಿ ವಿರುದ್ಧ ಕಿಡಿಕಾರಿರುವ ರಾಹುಲ್, ‘ಮೋದಿ ಸರ್ಕಾರವು ಜನರಿಗೆ ‘ಆತ್ಮನಿರ್ಭರ ಭಾರತ’ಕ್ಕೆ ಕರೆ ನೀಡಿದೆ. ನೀವು ನಿಮ್ಮನ್ನು ಮತ್ತು ನಿಮ್ಮ ಜೀವನವನ್ನು ಕಾಪಾಡಿಕೊಳ್ಳಿ. ಏಕೆಂದರೆ ಪ್ರಧಾನಿ ನವಿಲುಗಳೊಂದಿಗೆ ಬ್ಯುಸಿಯಾಗಿದ್ದಾರೆ’ ಎಂದೂ ಟೀಕಿಸಿದ್ದಾರೆ.</p>.<p>ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 24 ಸಾವಿರ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ದೇಶದಲ್ಲಿ ಕೋವಿಡ್–19 ಸೋಂಕು ಪ್ರಕರಣಗಳ ಸಂಖ್ಯೆ 48 ಲಕ್ಷ ದಾಟಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಅಹಂಕಾರಿ ಮನುಷ್ಯನು ‘ಯೋಜಿತವಲ್ಲದ ಲಾಕ್ಡೌನ್’ ಅನುಷ್ಠಾನಗೊಳಿಸಿದ್ದರ ಪರಿಣಾಮವಾಗಿ ಕೋವಿಡ್–19 ಸೋಂಕು ದೇಶದಾದ್ಯಂತ ಹರಡಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.</p>.<p>‘ದೇಶದಾದ್ಯಂತ ಕೊರೊನಾವೈರಸ್ ಪ್ರಕರಣಗಳು ಈ ವಾರದಲ್ಲಿ 50 ಲಕ್ಷದ ಗಡಿ ದಾಟಲಿದೆ. 10 ಲಕ್ಷ ಸಕ್ರಿಯ ಪ್ರಕರಣಗಳು ಕಂಡುಬರಲಿವೆ. ಯಾವುದೇ ಯೋಜನೆಯಿಲ್ಲದೆ ಲಾಕ್ಡೌನ್ ಜಾರಿಗೊಳಿಸಿದ್ದು ಅಹಂ ತುಂಬಿದ ವ್ಯಕ್ತಿಯ ಕೊಡುಗೆಯಾಗಿದ್ದು, ದೇಶದಾದ್ಯಂತ ಕೊರೊನಾವೈರಸ್ ಹರಡಲು ಕಾರಣವಾಯಿತು’ ಎಂದು ಟ್ವೀಟ್ ಮಾಡಿದ್ದಾರೆ.</p>.<p>ಮುಂದುವರಿದು ‘ಆತ್ಮನಿರ್ಭರ’ ಯೋಜನೆಗೆ ಸಂಬಂಧಿಸಿದಂತೆಯೂ ಪ್ರಧಾನಿ ವಿರುದ್ಧ ಕಿಡಿಕಾರಿರುವ ರಾಹುಲ್, ‘ಮೋದಿ ಸರ್ಕಾರವು ಜನರಿಗೆ ‘ಆತ್ಮನಿರ್ಭರ ಭಾರತ’ಕ್ಕೆ ಕರೆ ನೀಡಿದೆ. ನೀವು ನಿಮ್ಮನ್ನು ಮತ್ತು ನಿಮ್ಮ ಜೀವನವನ್ನು ಕಾಪಾಡಿಕೊಳ್ಳಿ. ಏಕೆಂದರೆ ಪ್ರಧಾನಿ ನವಿಲುಗಳೊಂದಿಗೆ ಬ್ಯುಸಿಯಾಗಿದ್ದಾರೆ’ ಎಂದೂ ಟೀಕಿಸಿದ್ದಾರೆ.</p>.<p>ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 24 ಸಾವಿರ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ದೇಶದಲ್ಲಿ ಕೋವಿಡ್–19 ಸೋಂಕು ಪ್ರಕರಣಗಳ ಸಂಖ್ಯೆ 48 ಲಕ್ಷ ದಾಟಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>