‘ವಾಷಿಂಗ್ಟನ್ ಪೋಸ್ಟ್’ ವರದಿ ಕುರಿತಂತೆ ಪ್ರತಿಕ್ರಿಯಿಸಿರುವ ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಕರೀನ್ ಜೀನ್ ಪಿಯರ್, ನಮ್ಮ ಕಳವಳವನ್ನು ಭಾರತ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಹೇಳಿದ್ದಾರೆ.
‘ವಾಷಿಂಗ್ಟನ್ ಪೋಸ್ಟ್’ ವರದಿ ಹೇಳುವುದೇನು?
ಅಮೆರಿಕದಲ್ಲಿ ನಡೆದಿದ್ದ, ಸಿಖ್ ಪ್ರತ್ಯೇಕತಾವಾದಿ ನಾಯಕ ಗುರುಪತ್ವಂತ್ ಸಿಂಗ್ ಪನ್ನೂ ಹತ್ಯೆಯ ಸಂಚಿನಲ್ಲಿ ‘ರಾ’ ಅಧಿಕಾರಿ ವಿಕ್ರಮ್ ಯಾದವ್ ಅವರು ಭಾಗಿಯಾಗಿದ್ದರು. ಯಾದವ್ ಅವರು ಸಂಚಿನ ಭಾಗವಾಗಲು ಆಗ ಭಾರತೀಯ ಗುಪ್ತದಳ ಸಂಸ್ಥೆ ‘ರಾ’ ಮುಖ್ಯಸ್ಥರಾಗಿದ್ದ ಸಾಮಂತ್ ಗೋಯಲ್ ಅವರ ಅನುಮೋದನೆ ಸಿಕ್ಕಿತ್ತು. ಭಾರತದ ಪ್ರಧಾನಿಯವರ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಡೋಭಾಲ್ ಅವರಿಗೂ ಸಿಖ್ ಕಾರ್ಯಕರ್ತನ ಕೊಲ್ಲುವ ‘ರಾ’ ಸಂಚಿನ ಅರಿವಿತ್ತು ಎಂದು ವರದಿ ಹೇಳಿದೆ.
ಜೂನ್ 18ರಂದು ಕೆನಡಾದ ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದಲ್ಲಿ ಖಾಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ ನಡೆದಿತ್ತು. ಅದೇ ಅವಧಿಯಲ್ಲಿ ಪನ್ನೂ ಹತ್ಯೆಗೂ ಸಂಚು ನಡೆದಿದ್ದು, ಆ ಕಾರ್ಯಾ ಚರಣೆಗೂ ವಿಕ್ರಂ ಯಾದವ್ ಅವರಿಗೂ ಸಂಪರ್ಕವಿದೆ ಎಂದೂ ತಿಳಿಸಿದೆ.