<p><strong>ಲಖನೌ:</strong> ಹಿಜ್ಬುಲ್ಲಾ ಮುಖ್ಯಸ್ಥ ಸಯ್ಯದ್ ಹಸನ್ ನಸ್ರಲ್ಲಾ ಹತ್ಯೆಯನ್ನು ವಿರೋಧಿಸಿ ಲಖನೌದ ಹಳೆ ನಗರ ಪ್ರದೇಶದಲ್ಲಿ ನೂರಾರು ಮಂದಿ ಪ್ರತಿಭಟನೆ ನಡೆಸಿದ್ದಾರೆ.</p>.<p>ಇತ್ತೀಚೆಗೆ ಲೆಬನಾನ್ನಲ್ಲಿ ನಡೆಸಿದ ವಾಯುದಾಳಿಯಲ್ಲಿ ನಸ್ರಲ್ಲಾನನ್ನು ಇಸ್ರೇಲ್ ಪಡೆಗಳು ಹತ್ಯೆಗೈದಿದ್ದವು.</p><p>ಶಿಯಾ ಧರ್ಮಗುರು ಮೌಲಾನಾ ಕಲ್ಬೆ ಜವಾದ್ ಪ್ರತಿಭಟನೆಗೆ ಕರೆ ನೀಡಿದ್ದು, ನಸ್ರಲ್ಲಾ ನಿಧನಕ್ಕೆ ಭಾನುವಾರದಿಂದ ಮೂರು ದಿನಗಳ ಶೋಕಾಚರಣೆ ನಡೆಸಬೇಕು, ಮನೆಗಳ ಮೇಲೆ ಕಪ್ಪು ಬಾವುಟಗಳನ್ನು ಹಾರಿಸಬೇಕು ಹಾಗೂ ಅಂಗಡಿಗಳನ್ನು ಮುಚ್ಚಿ ಎಂದು ಕರೆ ನೀಡಿದ್ದಾರೆ.</p><p>ಪ್ರತಿಭಟನಾಕಾರರು ಕೈಯಲ್ಲಿ ಕಪ್ಪು ಬಾವುಟ, ಪಂಜು, ಮತ್ತು ನಸ್ರಲ್ಲಾ ಅವರ ಭಾವಚಿತ್ರಗಳನ್ನು ಹಿಡಿದು ಅಮೆರಿಕ ಮತ್ತು ಇಸ್ರೇಲ್ ವಿರುದ್ಧ ಘೋಷಣೆಗಳನ್ನು ಕೂಗುತ್ತ ಪ್ರತಿಭಟನೆ ನಡೆಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.ಹಿಜ್ಬುಲ್ಲಾ ನಾಯಕ ನಸ್ರಲ್ಲಾ ಸಾವಿನ ಸುದ್ದಿ ಹೇಳುವಾಗ ಕಣ್ಣೀರಿಟ್ಟ ಟಿವಿ ನಿರೂಪಕಿ.ಹಿಜ್ಬುಲ್ಲಾ ನಾಯಕನ ಹತ್ಯೆ: ಇಸ್ರೇಲ್ ವಿರುದ್ಧದ ಹೋರಾಟ ಮುಂದುವರಿಯಲಿದೆ ಎಂದ ಇರಾನ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ:</strong> ಹಿಜ್ಬುಲ್ಲಾ ಮುಖ್ಯಸ್ಥ ಸಯ್ಯದ್ ಹಸನ್ ನಸ್ರಲ್ಲಾ ಹತ್ಯೆಯನ್ನು ವಿರೋಧಿಸಿ ಲಖನೌದ ಹಳೆ ನಗರ ಪ್ರದೇಶದಲ್ಲಿ ನೂರಾರು ಮಂದಿ ಪ್ರತಿಭಟನೆ ನಡೆಸಿದ್ದಾರೆ.</p>.<p>ಇತ್ತೀಚೆಗೆ ಲೆಬನಾನ್ನಲ್ಲಿ ನಡೆಸಿದ ವಾಯುದಾಳಿಯಲ್ಲಿ ನಸ್ರಲ್ಲಾನನ್ನು ಇಸ್ರೇಲ್ ಪಡೆಗಳು ಹತ್ಯೆಗೈದಿದ್ದವು.</p><p>ಶಿಯಾ ಧರ್ಮಗುರು ಮೌಲಾನಾ ಕಲ್ಬೆ ಜವಾದ್ ಪ್ರತಿಭಟನೆಗೆ ಕರೆ ನೀಡಿದ್ದು, ನಸ್ರಲ್ಲಾ ನಿಧನಕ್ಕೆ ಭಾನುವಾರದಿಂದ ಮೂರು ದಿನಗಳ ಶೋಕಾಚರಣೆ ನಡೆಸಬೇಕು, ಮನೆಗಳ ಮೇಲೆ ಕಪ್ಪು ಬಾವುಟಗಳನ್ನು ಹಾರಿಸಬೇಕು ಹಾಗೂ ಅಂಗಡಿಗಳನ್ನು ಮುಚ್ಚಿ ಎಂದು ಕರೆ ನೀಡಿದ್ದಾರೆ.</p><p>ಪ್ರತಿಭಟನಾಕಾರರು ಕೈಯಲ್ಲಿ ಕಪ್ಪು ಬಾವುಟ, ಪಂಜು, ಮತ್ತು ನಸ್ರಲ್ಲಾ ಅವರ ಭಾವಚಿತ್ರಗಳನ್ನು ಹಿಡಿದು ಅಮೆರಿಕ ಮತ್ತು ಇಸ್ರೇಲ್ ವಿರುದ್ಧ ಘೋಷಣೆಗಳನ್ನು ಕೂಗುತ್ತ ಪ್ರತಿಭಟನೆ ನಡೆಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.ಹಿಜ್ಬುಲ್ಲಾ ನಾಯಕ ನಸ್ರಲ್ಲಾ ಸಾವಿನ ಸುದ್ದಿ ಹೇಳುವಾಗ ಕಣ್ಣೀರಿಟ್ಟ ಟಿವಿ ನಿರೂಪಕಿ.ಹಿಜ್ಬುಲ್ಲಾ ನಾಯಕನ ಹತ್ಯೆ: ಇಸ್ರೇಲ್ ವಿರುದ್ಧದ ಹೋರಾಟ ಮುಂದುವರಿಯಲಿದೆ ಎಂದ ಇರಾನ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>