ಮೃತ ಬಾಲಕನ ಅಣ್ಣ ರಾಜೇಶ್ ವಿಶ್ವಕರ್ಮ ಸುದ್ದಿಗಾರರೊಂದಿಗೆ ಮಾತನಾಡಿ, ‘ಮಾಸಿಕ ಶಾಲಾ ಶುಲ್ಕವಾದ ₹250 ನೀಡಲಿಲ್ಲ ಎಂಬ ಕಾರಣಕ್ಕೆ ಶಿಕ್ಷಕ ನನ್ನ ತಮ್ಮನ ಮೇಲೆ ಹಲ್ಲೆ ಮಾಡಿದ್ದಾರೆ. ಆದರೆ, ಶಾಲಾ ಶುಲ್ಕವನ್ನು ನಾನು ಆನ್ಲೈನ್ನಲ್ಲಿ ಪಾವತಿಸಿದ್ದೆ. ಇದು ತಿಳಿಯದ ಶಿಕ್ಷಕ ನನ್ನ ತಮ್ಮನ್ನನ್ನು ಅಮಾನುಷವಾಗಿ ಹೊಡೆದಿದ್ದಾರೆ’ ಎಂದು ಆರೋಪಿಸಿದ್ದಾರೆ.