<p><strong>ಮಹಾಕುಂಭ ನಗರ:</strong> ಯುವಜನತೆಗೆ ಉಚಿತವಾಗಿ ನೀಡಲು 25 ಲಕ್ಷ ಸ್ಮಾರ್ಟ್ಫೋನ್ ಖರೀದಿ ಟೆಂಡರ್ಗೆ ಅನುಮೋದನೆ ನೀಡಲು ಉತ್ತರ ಪ್ರದೇಶ ಸರ್ಕಾರದ ಸಂಪುಟ ಸಭೆಯಲ್ಲಿ ಬುಧವಾರ ನಿರ್ಧರಿಸಲಾಗಿದೆ.</p><p>ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರ ಅಧ್ಯಕ್ಷತೆಯಲ್ಲಿ ಪ್ರಯಾಗರಾಜ್ನಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು. ಇದರೊಂದಿಗೆ ಹಾಥರಸ್, ಕಾಸಗಂಜ್ ಮತ್ತು ಬಾಗಪತ್ ಜಿಲ್ಲೆಗಳಲ್ಲಿ ಸಾರ್ವಜನಿಕ ಹಾಗೂ ಖಾಸಗಿ ಪಾಲುದಾರಿಕೆಯ ವೈದ್ಯಕೀಯ ಕಾಲೇಜು ಮಂಜೂರಿಗೂ ಸಂಪುಟ ಅಸ್ತು ಎಂದಿತು ಎಂದು ಅಧಿಕಾರಿಗಳು ಹೇಳಿದ್ಧಾರೆ. </p><p>‘ಸ್ವಾಮಿ ವಿವೇಕಾನಂದ ಯುವ ಸಶಕ್ತೀಕರಣ ಯೋಜನೆಯಡಿ 25 ಲಕ್ಷ ಯುವಜನತೆಗೆ ಉಚಿತವಾಗಿ ಹಂಚಲು ಉತ್ತರ ಪ್ರದೇಶ ಸರ್ಕಾರ 25 ಲಕ್ಷ ಸ್ಮಾರ್ಟ್ ಫೋನ್ ಖರೀದಿಸುತ್ತಿದೆ. ಈ ಯೋಜನೆ ಮೂಲಕ ತಂತ್ರಜ್ಞಾನ ಕ್ಷೇತ್ರದಲ್ಲಿ ಯುವಜನತೆ ಸಬಲೀಕರಣಗೊಳಿಸುವ ಗುರಿ ಹೊಂದಲಾಗಿದ್ದು, ಮುಂದಿನ ಐದು ವರ್ಷಗಳವರೆಗೆ ಈ ಯೋಜನೆ ಜಾರಿಯಲ್ಲಿರಲಿದೆ’ ಎಂದಿದ್ದಾರೆ.</p><p>‘ಈ ಯೋಜನೆಗಾಗಿ 2024–25ರಲ್ಲಿ ₹4 ಸಾವಿರ ಕೋಟಿ ಅನುದಾನವನ್ನು ಉತ್ತರ ಪ್ರದೇಶ ಸರ್ಕಾರ ಮೀಸಲಿಟ್ಟಿದೆ. ತಾಂತ್ರಿಕ, ಆರೋಗ್ಯ, ಕೌಶಲಾಭಿವೃದ್ಧಿ ಹಾಗೂ ಐಟಿಐ ಸೇರಿದಂತೆ ವೃತ್ತಿಪರ ಮತ್ತು ಉನ್ನತ ಶಿಕ್ಷಣಕ್ಕೆ ಸೇರುವ ವಿದ್ಯಾರ್ಥಿಗಳಲ್ಲಿ ತಂತ್ರಜ್ಞಾನ ಆಧಾರಿತ ಕೌಶಲ ಹೆಚ್ಚಳಕ್ಕೆ ಹಾಗೂ ಭವಿಷ್ಯಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಈ ಯೋಜನೆ ಜಾರಿಗೊಳಿಸಲಾಗುತ್ತಿದೆ’ ಎಂದು ಸರ್ಕಾರ ಹೇಳಿದೆ.</p><p>‘ರಾಜ್ಯದಲ್ಲಿರುವ 62 ಕೈಗಾರಿಕಾ ತರಬೇತಿ ಸಂಸ್ಥೆಗಳನ್ನು ಟಾಟಾ ಟೆಕ್ನಾಲಜೀಸ್ ಕಂಪನಿ ಸಹಯೋಗದಲ್ಲಿ ಮೇಲ್ದರ್ಜೆಗೇರಿಸುವ ಪ್ರಸ್ತಾವನೆಗೆ ಸಂಪುಟ ಒಪ್ಪಿಗೆ ನೀಡಿದೆ. ಈ ಯೋಜನೆಯು ₹3,634 ಕೋಟಿ ವೆಚ್ಚದ್ದಾಗಿದೆ. ಈ ಯೋಜನೆಗಾಗಿ ಸರ್ಕಾರವು ಕಂಪನಿಯೊಂದಿಗೆ 11 ವರ್ಷಗಳ ಒಪ್ಪಂದ ಮಾಡಿಕೊಳ್ಳಲಿದೆ. ಇದರಿಂದ ವಾರ್ಷಿಕ 12,500 ಅಭ್ಯರ್ಥಿಗಳನ್ನು ತರಬೇತುಗೊಳಿಸುವ ಗುರಿಯನ್ನು ಹೊಂದಲಾಗಿದೆ ಎಂಉದ ಸರ್ಕಾರ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಹಾಕುಂಭ ನಗರ:</strong> ಯುವಜನತೆಗೆ ಉಚಿತವಾಗಿ ನೀಡಲು 25 ಲಕ್ಷ ಸ್ಮಾರ್ಟ್ಫೋನ್ ಖರೀದಿ ಟೆಂಡರ್ಗೆ ಅನುಮೋದನೆ ನೀಡಲು ಉತ್ತರ ಪ್ರದೇಶ ಸರ್ಕಾರದ ಸಂಪುಟ ಸಭೆಯಲ್ಲಿ ಬುಧವಾರ ನಿರ್ಧರಿಸಲಾಗಿದೆ.</p><p>ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರ ಅಧ್ಯಕ್ಷತೆಯಲ್ಲಿ ಪ್ರಯಾಗರಾಜ್ನಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು. ಇದರೊಂದಿಗೆ ಹಾಥರಸ್, ಕಾಸಗಂಜ್ ಮತ್ತು ಬಾಗಪತ್ ಜಿಲ್ಲೆಗಳಲ್ಲಿ ಸಾರ್ವಜನಿಕ ಹಾಗೂ ಖಾಸಗಿ ಪಾಲುದಾರಿಕೆಯ ವೈದ್ಯಕೀಯ ಕಾಲೇಜು ಮಂಜೂರಿಗೂ ಸಂಪುಟ ಅಸ್ತು ಎಂದಿತು ಎಂದು ಅಧಿಕಾರಿಗಳು ಹೇಳಿದ್ಧಾರೆ. </p><p>‘ಸ್ವಾಮಿ ವಿವೇಕಾನಂದ ಯುವ ಸಶಕ್ತೀಕರಣ ಯೋಜನೆಯಡಿ 25 ಲಕ್ಷ ಯುವಜನತೆಗೆ ಉಚಿತವಾಗಿ ಹಂಚಲು ಉತ್ತರ ಪ್ರದೇಶ ಸರ್ಕಾರ 25 ಲಕ್ಷ ಸ್ಮಾರ್ಟ್ ಫೋನ್ ಖರೀದಿಸುತ್ತಿದೆ. ಈ ಯೋಜನೆ ಮೂಲಕ ತಂತ್ರಜ್ಞಾನ ಕ್ಷೇತ್ರದಲ್ಲಿ ಯುವಜನತೆ ಸಬಲೀಕರಣಗೊಳಿಸುವ ಗುರಿ ಹೊಂದಲಾಗಿದ್ದು, ಮುಂದಿನ ಐದು ವರ್ಷಗಳವರೆಗೆ ಈ ಯೋಜನೆ ಜಾರಿಯಲ್ಲಿರಲಿದೆ’ ಎಂದಿದ್ದಾರೆ.</p><p>‘ಈ ಯೋಜನೆಗಾಗಿ 2024–25ರಲ್ಲಿ ₹4 ಸಾವಿರ ಕೋಟಿ ಅನುದಾನವನ್ನು ಉತ್ತರ ಪ್ರದೇಶ ಸರ್ಕಾರ ಮೀಸಲಿಟ್ಟಿದೆ. ತಾಂತ್ರಿಕ, ಆರೋಗ್ಯ, ಕೌಶಲಾಭಿವೃದ್ಧಿ ಹಾಗೂ ಐಟಿಐ ಸೇರಿದಂತೆ ವೃತ್ತಿಪರ ಮತ್ತು ಉನ್ನತ ಶಿಕ್ಷಣಕ್ಕೆ ಸೇರುವ ವಿದ್ಯಾರ್ಥಿಗಳಲ್ಲಿ ತಂತ್ರಜ್ಞಾನ ಆಧಾರಿತ ಕೌಶಲ ಹೆಚ್ಚಳಕ್ಕೆ ಹಾಗೂ ಭವಿಷ್ಯಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಈ ಯೋಜನೆ ಜಾರಿಗೊಳಿಸಲಾಗುತ್ತಿದೆ’ ಎಂದು ಸರ್ಕಾರ ಹೇಳಿದೆ.</p><p>‘ರಾಜ್ಯದಲ್ಲಿರುವ 62 ಕೈಗಾರಿಕಾ ತರಬೇತಿ ಸಂಸ್ಥೆಗಳನ್ನು ಟಾಟಾ ಟೆಕ್ನಾಲಜೀಸ್ ಕಂಪನಿ ಸಹಯೋಗದಲ್ಲಿ ಮೇಲ್ದರ್ಜೆಗೇರಿಸುವ ಪ್ರಸ್ತಾವನೆಗೆ ಸಂಪುಟ ಒಪ್ಪಿಗೆ ನೀಡಿದೆ. ಈ ಯೋಜನೆಯು ₹3,634 ಕೋಟಿ ವೆಚ್ಚದ್ದಾಗಿದೆ. ಈ ಯೋಜನೆಗಾಗಿ ಸರ್ಕಾರವು ಕಂಪನಿಯೊಂದಿಗೆ 11 ವರ್ಷಗಳ ಒಪ್ಪಂದ ಮಾಡಿಕೊಳ್ಳಲಿದೆ. ಇದರಿಂದ ವಾರ್ಷಿಕ 12,500 ಅಭ್ಯರ್ಥಿಗಳನ್ನು ತರಬೇತುಗೊಳಿಸುವ ಗುರಿಯನ್ನು ಹೊಂದಲಾಗಿದೆ ಎಂಉದ ಸರ್ಕಾರ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>