ಲಕ್ನೋ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ನೇತೃತ್ವದಲ್ಲಿ ಅವರ ಸಂಪುಟದ ಎಲ್ಲ ಸಚಿವರು, ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳ ಶಾಸಕರು, ರಾಷ್ಟ್ರೀಯ ಲೋಕದಳ (ಆರ್ಎಲ್ಡಿ), ಕಾಂಗ್ರೆಸ್ ಹಾಗೂ ಬಿಎಸ್ಪಿಯ ಶಾಸಕರು ಭಾನುವಾರ ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಿ ಶ್ರೀರಾಮನಿಗೆ ನಮಿಸಿದರು.
ಉತ್ತರ ಪ್ರದೇಶದ ವಿಧಾನ ಸಭಾಧ್ಯಕ್ಷರ ಆಹ್ವಾನದ ಮೇರೆಗೆ ಎಲ್ಲ ಶಾಸಕರು ಅಯೋಧ್ಯೆಗೆ ತೆರಳಿದ್ದರು. ಆದರೆ, ಸಮಾಜವಾದಿ ಪಕ್ಷದ ಶಾಸಕರು ಅಯೋಧ್ಯೆ ಭೇಟಿ ಕಾರ್ಯಕ್ರಮದಿಂದ ಉಳಿದಿದ್ದು, ತಾವು ಪ್ರತ್ಯೇಕವಾಗಿ ರಾಮ ಮಂದಿರಕ್ಕೆ ಭೇಟಿ ನೀಡುವುದಾಗಿ ತಿಳಿಸಿದ್ದಾರೆ.