<p><strong>ಬಲ್ಲಿಯಾ (ಉತ್ತರ ಪ್ರದೇಶ): </strong>ಕೋಳಿ ಕೊಂದಿದ್ದಕ್ಕೆ ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿರುವ ಘಟನೆ ಉತ್ತರ ಪ್ರದೇಶದಲ್ಲಿ ಬೆಳಕಿಗೆ ಬಂದಿದೆ. </p><p>ಭೂ ವಿವಾದದ ಹಿನ್ನೆಲೆಯಲ್ಲಿ ಕೋಳಿಯನ್ನು ಇಟ್ಟಿಗೆ ಮತ್ತು ಕಲ್ಲುಗಳಿಂದ ಕೊಂದು, ಆ ಕೋಳಿ ಮಾಲೀಕರು ಪ್ರತಿಭಟಿಸಿದಾಗ ಅವರನ್ನು ಥಳಿಸಲಾಗಿದ್ದು, ಈ ಸಂಬಂಧ ಉತ್ತರ ಪ್ರದೇಶ ಬಲ್ಲಿಯಾ ಜಿಲ್ಲೆಯ ಪಕ್ಡಿ ಪ್ರದೇಶದಲ್ಲಿ ಇಬ್ಬರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.</p><p> ಮಾರ್ಚ್ 21ರಂದು ಪಕ್ಡಿ ಪೊಲೀಸ್ ಠಾಣೆ ವ್ಯಾಪ್ತಿಯ ಗರ್ಹ್ಮಲ್ಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p><p>ಕೋಳಿಯ ಮಾಲೀಕರಾದ ಆರತಿ ದೇವಿ ಅವರು ಕೋಳಿಯನ್ನು ಕೊಂದ ಬಗ್ಗೆ ಆರೋಪಿಗಳಿಂದ ವಿವರಣೆ ಕೇಳಿದಾಗ, ಅವರು ಆಕೆಯನ್ನು ಸಹ ಥಳಿಸಿದ್ದಾರೆ ಎಂದು ಆರೋಪಿಸಲಾಗಿದೆ.</p><p>ಆರತಿ ದೇವಿ ಅವರ ದೂರಿನ ಆಧಾರದ ಮೇಲೆ, ಸೂರಜ್ ರಾಮ್ ಮತ್ತು ಶೀಲಾ ದೇವಿ ವಿರುದ್ಧ ಬಿಎನ್ಎಸ್ ಸೆಕ್ಷನ್ 325 (ಪ್ರಾಣಿಯನ್ನು ಕೊಲ್ಲುವುದು), 115-2 (ಉದ್ದೇಶಪೂರ್ವಕವಾಗಿ ನೋವುಂಟು ಮಾಡುವುದು), 352 (ಶಾಂತಿ ಕದಡುವ ಉದ್ದೇಶದಿಂದ ಉದ್ದೇಶಪೂರ್ವಕವಾಗಿ ಅವಮಾನಿಸುವುದು) ಮತ್ತು 351-3 (ಯಾವುದೇ ವ್ಯಕ್ತಿಗೆ ಕೊಲ್ಲುವ ಅಥವಾ ಗಂಭೀರ ಹಾನಿ ಉಂಟುಮಾಡುವ ಬೆದರಿಕೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.</p><p>ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅನಿಲ್ ಕುಮಾರ್ ಝಾ ಹೇಳಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಲ್ಲಿಯಾ (ಉತ್ತರ ಪ್ರದೇಶ): </strong>ಕೋಳಿ ಕೊಂದಿದ್ದಕ್ಕೆ ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿರುವ ಘಟನೆ ಉತ್ತರ ಪ್ರದೇಶದಲ್ಲಿ ಬೆಳಕಿಗೆ ಬಂದಿದೆ. </p><p>ಭೂ ವಿವಾದದ ಹಿನ್ನೆಲೆಯಲ್ಲಿ ಕೋಳಿಯನ್ನು ಇಟ್ಟಿಗೆ ಮತ್ತು ಕಲ್ಲುಗಳಿಂದ ಕೊಂದು, ಆ ಕೋಳಿ ಮಾಲೀಕರು ಪ್ರತಿಭಟಿಸಿದಾಗ ಅವರನ್ನು ಥಳಿಸಲಾಗಿದ್ದು, ಈ ಸಂಬಂಧ ಉತ್ತರ ಪ್ರದೇಶ ಬಲ್ಲಿಯಾ ಜಿಲ್ಲೆಯ ಪಕ್ಡಿ ಪ್ರದೇಶದಲ್ಲಿ ಇಬ್ಬರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.</p><p> ಮಾರ್ಚ್ 21ರಂದು ಪಕ್ಡಿ ಪೊಲೀಸ್ ಠಾಣೆ ವ್ಯಾಪ್ತಿಯ ಗರ್ಹ್ಮಲ್ಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p><p>ಕೋಳಿಯ ಮಾಲೀಕರಾದ ಆರತಿ ದೇವಿ ಅವರು ಕೋಳಿಯನ್ನು ಕೊಂದ ಬಗ್ಗೆ ಆರೋಪಿಗಳಿಂದ ವಿವರಣೆ ಕೇಳಿದಾಗ, ಅವರು ಆಕೆಯನ್ನು ಸಹ ಥಳಿಸಿದ್ದಾರೆ ಎಂದು ಆರೋಪಿಸಲಾಗಿದೆ.</p><p>ಆರತಿ ದೇವಿ ಅವರ ದೂರಿನ ಆಧಾರದ ಮೇಲೆ, ಸೂರಜ್ ರಾಮ್ ಮತ್ತು ಶೀಲಾ ದೇವಿ ವಿರುದ್ಧ ಬಿಎನ್ಎಸ್ ಸೆಕ್ಷನ್ 325 (ಪ್ರಾಣಿಯನ್ನು ಕೊಲ್ಲುವುದು), 115-2 (ಉದ್ದೇಶಪೂರ್ವಕವಾಗಿ ನೋವುಂಟು ಮಾಡುವುದು), 352 (ಶಾಂತಿ ಕದಡುವ ಉದ್ದೇಶದಿಂದ ಉದ್ದೇಶಪೂರ್ವಕವಾಗಿ ಅವಮಾನಿಸುವುದು) ಮತ್ತು 351-3 (ಯಾವುದೇ ವ್ಯಕ್ತಿಗೆ ಕೊಲ್ಲುವ ಅಥವಾ ಗಂಭೀರ ಹಾನಿ ಉಂಟುಮಾಡುವ ಬೆದರಿಕೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.</p><p>ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅನಿಲ್ ಕುಮಾರ್ ಝಾ ಹೇಳಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>