<p>ಕೌಶಾಂಬಿ (ಉತ್ತರ ಪ್ರದೇಶ): ಇಲ್ಲಿನ ಚರವಾ ಮನುರಿ ರಸ್ತೆಯ ಖಾಸಗಿ ಆಸ್ಪತ್ರೆಯಲ್ಲಿ ವೈದ್ಯರ ಸೋಗಿನಲ್ಲಿ ಸಹೋದರರಿಬ್ಬರು ಐದು ವರ್ಷದ ಮಗುವಿಗೆ ಶಸ್ತ್ರಚಿಕಿತ್ಸೆ ನಡೆಸಿದ್ದು, ಈ ವೇಳೆ ಮಗು ಮೃತಪಟ್ಟಿದೆ. ಘಟನೆ ನಡೆದು ಎರಡು ತಿಂಗಳ ಬಳಿಕ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.</p>.<p>ಇಲ್ಲಿನ ಅನ್ಮೋಲ್ ಆಸ್ಪತ್ರೆಯಲ್ಲಿ ಮಾ.16ರಂದು ಹಿರಿಯ ವೈದ್ಯರು ಗೈರುಹಾಜರಾಗಿದ್ದರು. ಈ ವೇಳೆ ಆಸ್ಪತ್ರೆಯಲ್ಲಿದ್ದ ಇಬ್ಬರು ಸಹೋದರರು ತಾವೇ ವೈದ್ಯರೆಂದು ನಂಬಿಸಿ ಇಲ್ಲಿನ ಸಿರಿಯಾವಾ ಕಾಲಾ ಗ್ರಾಮದ ರಾಮ್ ಅಸ್ರೆ ಅವರ ಮಗ ದಿವ್ಯಾಂಶು ಅವರಿಗೆ ಶಸ್ತ್ರಚಿಕಿತ್ಸೆ ನಡೆಸಿದ್ದರು. ಈ ವೇಳೆ ಮಗ ಮೃತಪಟ್ಟ ಕುರಿತು ಅವರ ತಂದೆ ಚರವಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. </p>.<p>‘ಪ್ರಕರಣ ದಾಖಲಿಸಿ ಸ್ಥಳೀಯ ನಿವಾಸಿಗಳಾದ ವಿಕಾಸ್ಕುಮಾರ್(26,) ವಿಶೇಷ್ಕುಮಾರ್ (25) ಅವರನ್ನು ಮೇ 25ರಂದು ಪೊಲೀಸರು ಬಂಧಿಸಿದ್ದಾರೆ. ವೈದ್ಯಕೀಯ ಪದವಿ ಹೊಂದಿರದಿದ್ದರೂ, ವೈದ್ಯರೆಂದು ಬಿಂಬಿಸಿಕೊಂಡು ಮಗುವಿಗೆ ಶಸ್ತ್ರಚಿಕಿತ್ಸೆ ನಡೆಸಿದ್ದನ್ನು ಒಪ್ಪಿಕೊಂಡಿದ್ದಾರೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಜೇಶ್ ಕುಮಾರ್ ತಿಳಿಸಿದ್ದಾರೆ.</p>.<p>ಮಗು ಆಸ್ಪತ್ರೆಗೆ ಬಂದ ವೇಳೆ ಹಿರಿಯ ವೈದ್ಯರು ಆಸ್ಪತ್ರೆಯಲ್ಲಿ ಇರಲಿಲ್ಲ. ಇಬ್ಬರು ಸಹೋದರರೇ ಮಗುವಿನ ಕಾಲಿನ ಶಸ್ತ್ರಚಿಕಿತ್ಸೆ ನಡೆಸಿದ್ದು, ಈ ವೇಳೆ ಮಗು ಮೃತಪಟ್ಟಿದೆ.</p>.<p>ಘಟನೆ ಬಳಿಕ ಖಾಸಗಿ ಕೌಶಾಂಬಿ ಜಿಲ್ಲಾ ಮುಖ್ಯ ವೈದ್ಯಾಧಿಕಾರಿ ಖಾಸಗಿ ಆಸ್ಪತ್ರೆಯನ್ನು ಮುಚ್ಚಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೌಶಾಂಬಿ (ಉತ್ತರ ಪ್ರದೇಶ): ಇಲ್ಲಿನ ಚರವಾ ಮನುರಿ ರಸ್ತೆಯ ಖಾಸಗಿ ಆಸ್ಪತ್ರೆಯಲ್ಲಿ ವೈದ್ಯರ ಸೋಗಿನಲ್ಲಿ ಸಹೋದರರಿಬ್ಬರು ಐದು ವರ್ಷದ ಮಗುವಿಗೆ ಶಸ್ತ್ರಚಿಕಿತ್ಸೆ ನಡೆಸಿದ್ದು, ಈ ವೇಳೆ ಮಗು ಮೃತಪಟ್ಟಿದೆ. ಘಟನೆ ನಡೆದು ಎರಡು ತಿಂಗಳ ಬಳಿಕ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.</p>.<p>ಇಲ್ಲಿನ ಅನ್ಮೋಲ್ ಆಸ್ಪತ್ರೆಯಲ್ಲಿ ಮಾ.16ರಂದು ಹಿರಿಯ ವೈದ್ಯರು ಗೈರುಹಾಜರಾಗಿದ್ದರು. ಈ ವೇಳೆ ಆಸ್ಪತ್ರೆಯಲ್ಲಿದ್ದ ಇಬ್ಬರು ಸಹೋದರರು ತಾವೇ ವೈದ್ಯರೆಂದು ನಂಬಿಸಿ ಇಲ್ಲಿನ ಸಿರಿಯಾವಾ ಕಾಲಾ ಗ್ರಾಮದ ರಾಮ್ ಅಸ್ರೆ ಅವರ ಮಗ ದಿವ್ಯಾಂಶು ಅವರಿಗೆ ಶಸ್ತ್ರಚಿಕಿತ್ಸೆ ನಡೆಸಿದ್ದರು. ಈ ವೇಳೆ ಮಗ ಮೃತಪಟ್ಟ ಕುರಿತು ಅವರ ತಂದೆ ಚರವಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. </p>.<p>‘ಪ್ರಕರಣ ದಾಖಲಿಸಿ ಸ್ಥಳೀಯ ನಿವಾಸಿಗಳಾದ ವಿಕಾಸ್ಕುಮಾರ್(26,) ವಿಶೇಷ್ಕುಮಾರ್ (25) ಅವರನ್ನು ಮೇ 25ರಂದು ಪೊಲೀಸರು ಬಂಧಿಸಿದ್ದಾರೆ. ವೈದ್ಯಕೀಯ ಪದವಿ ಹೊಂದಿರದಿದ್ದರೂ, ವೈದ್ಯರೆಂದು ಬಿಂಬಿಸಿಕೊಂಡು ಮಗುವಿಗೆ ಶಸ್ತ್ರಚಿಕಿತ್ಸೆ ನಡೆಸಿದ್ದನ್ನು ಒಪ್ಪಿಕೊಂಡಿದ್ದಾರೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಜೇಶ್ ಕುಮಾರ್ ತಿಳಿಸಿದ್ದಾರೆ.</p>.<p>ಮಗು ಆಸ್ಪತ್ರೆಗೆ ಬಂದ ವೇಳೆ ಹಿರಿಯ ವೈದ್ಯರು ಆಸ್ಪತ್ರೆಯಲ್ಲಿ ಇರಲಿಲ್ಲ. ಇಬ್ಬರು ಸಹೋದರರೇ ಮಗುವಿನ ಕಾಲಿನ ಶಸ್ತ್ರಚಿಕಿತ್ಸೆ ನಡೆಸಿದ್ದು, ಈ ವೇಳೆ ಮಗು ಮೃತಪಟ್ಟಿದೆ.</p>.<p>ಘಟನೆ ಬಳಿಕ ಖಾಸಗಿ ಕೌಶಾಂಬಿ ಜಿಲ್ಲಾ ಮುಖ್ಯ ವೈದ್ಯಾಧಿಕಾರಿ ಖಾಸಗಿ ಆಸ್ಪತ್ರೆಯನ್ನು ಮುಚ್ಚಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>