‘ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಧನ್ನಿಪುರ್ ಗ್ರಾಮದಲ್ಲಿ ಮಸೀದಿ ನಿರ್ಮಾಣಕ್ಕಾಗಿ ನೀಡಿರುವ ಐದು ಎಕರೆ ಭೂಮಿಯಲ್ಲಿ ಆಸ್ಪತ್ರೆ, ಗ್ರಂಥಾಲಯ,ಸಮುದಾಯ ಅಡುಗೆಮನೆ, ಸಂಶೋಧನಾ ಕೇಂದ್ರವನ್ನು ಸಹ ನಿರ್ಮಿಸಲಾಗುವುದು. ಈ ಕಟ್ಟಡಗಳ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಆಹ್ವಾನ ನೀಡಲಿದ್ದೇವೆ’ ಎಂದು ಸುನ್ನಿ ಕೇಂದ್ರೀಯ ವಕ್ಫ್ ಮಂಡಳಿಯು ಮಸೀದಿ ನಿರ್ಮಾಣಕ್ಕಾಗಿ ರಚಿಸಿರುವ ಟ್ರಸ್ಟ್ ವಕ್ತಾರ ಅಥಾರ್ ಹುಸೈನ್ ತಿಳಿಸಿದ್ದಾರೆ.