<p><strong>ಲಖನೌ(ಉತ್ತರ ಪ್ರದೇಶ)</strong>: ಪಾಸ್ಪೋರ್ಟ್ ಪರಿಶೀಲನೆಗಾಗಿ ಪೊಲೀಸ್ ಠಾಣೆಗೆ ಬಂದಿದ್ದ ಮುಸ್ಲಿಂ ಮಹಿಳೆಯೊಬ್ಬರ ತಲೆಗೆ ಆಕಸ್ಮಿಕವಾಗಿ ಗುಂಡು ತಾಕಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.</p><p>ಇಶ್ರತ್ ಜಹಾನ್ ಎಂಬ ಮಹಿಳೆ ತಮ್ಮ ಮಗನೊಂದಿಗೆ ಅಲಿಗಢ ಜಿಲ್ಲೆಯ ಉಪರ್ಕೋಟ್ ಕೊತ್ವಾಲಿ ಪೊಲೀಸ್ ಠಾಣೆಗೆ ಬಂದಿದ್ದು, ಪಾಸ್ಪೋರ್ಟ್ ಪರಿಶೀಲನೆಗಾಗಿ ಸಂಬಂಧಪಟ್ಟ ಅಧಿಕಾರಿಗೆ ಕಾಯುತ್ತಾ ಸರದಿಯಲ್ಲಿ ನಿಂತಿದ್ದರು. ಈ ವೇಳೆ ಅಲ್ಲೇ ನಿಂತಿದ್ದ ಮನೋಜ್ ಶರ್ಮಾ ಎಂಬ ಪೊಲೀಸ್ ಅಧಿಕಾರಿ ಕಾನ್ಸ್ಟೆಬಲ್ ಒಬ್ಬರಿಂದ ಪಿಸ್ತೂಲ್ ಅನ್ನು ತೆಗೆದುಕೊಂಡು ಅದಕ್ಕೆ ಲೋಡ್ ಮಾಡಿ ಟ್ರಿಗರ್ ಎಳೆದಿದ್ದಾರೆ. ಈ ವೇಳೆ ಗುಂಡು ನೇರವಾಗಿ ಮಹಿಳೆಗೆ ತಾಕಿದೆ.</p><p>ತಕ್ಷಣ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿದ್ದು, ಮಹಿಳೆಯ ಸ್ಥಿತಿ ಸ್ಥಿರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ ಬೆನ್ನಲ್ಲೇ ಪೊಲೀಸ್ ಅಧಿಕಾರಿ ಮನೋಜ್ ಕುಮಾರ್ ಪರಾರಿಯಾಗಿದ್ದು, ಅವರನ್ನು ಕರ್ತವ್ಯದಿಂದ ಅಮಾನತುಗೊಳಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p><p>ಪೊಲೀಸ್ ಅನ್ನು ಬಂಧಿಸಿ ಆತನ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿ ಸ್ಥಳೀಯರು ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ(ಉತ್ತರ ಪ್ರದೇಶ)</strong>: ಪಾಸ್ಪೋರ್ಟ್ ಪರಿಶೀಲನೆಗಾಗಿ ಪೊಲೀಸ್ ಠಾಣೆಗೆ ಬಂದಿದ್ದ ಮುಸ್ಲಿಂ ಮಹಿಳೆಯೊಬ್ಬರ ತಲೆಗೆ ಆಕಸ್ಮಿಕವಾಗಿ ಗುಂಡು ತಾಕಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.</p><p>ಇಶ್ರತ್ ಜಹಾನ್ ಎಂಬ ಮಹಿಳೆ ತಮ್ಮ ಮಗನೊಂದಿಗೆ ಅಲಿಗಢ ಜಿಲ್ಲೆಯ ಉಪರ್ಕೋಟ್ ಕೊತ್ವಾಲಿ ಪೊಲೀಸ್ ಠಾಣೆಗೆ ಬಂದಿದ್ದು, ಪಾಸ್ಪೋರ್ಟ್ ಪರಿಶೀಲನೆಗಾಗಿ ಸಂಬಂಧಪಟ್ಟ ಅಧಿಕಾರಿಗೆ ಕಾಯುತ್ತಾ ಸರದಿಯಲ್ಲಿ ನಿಂತಿದ್ದರು. ಈ ವೇಳೆ ಅಲ್ಲೇ ನಿಂತಿದ್ದ ಮನೋಜ್ ಶರ್ಮಾ ಎಂಬ ಪೊಲೀಸ್ ಅಧಿಕಾರಿ ಕಾನ್ಸ್ಟೆಬಲ್ ಒಬ್ಬರಿಂದ ಪಿಸ್ತೂಲ್ ಅನ್ನು ತೆಗೆದುಕೊಂಡು ಅದಕ್ಕೆ ಲೋಡ್ ಮಾಡಿ ಟ್ರಿಗರ್ ಎಳೆದಿದ್ದಾರೆ. ಈ ವೇಳೆ ಗುಂಡು ನೇರವಾಗಿ ಮಹಿಳೆಗೆ ತಾಕಿದೆ.</p><p>ತಕ್ಷಣ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿದ್ದು, ಮಹಿಳೆಯ ಸ್ಥಿತಿ ಸ್ಥಿರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ ಬೆನ್ನಲ್ಲೇ ಪೊಲೀಸ್ ಅಧಿಕಾರಿ ಮನೋಜ್ ಕುಮಾರ್ ಪರಾರಿಯಾಗಿದ್ದು, ಅವರನ್ನು ಕರ್ತವ್ಯದಿಂದ ಅಮಾನತುಗೊಳಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p><p>ಪೊಲೀಸ್ ಅನ್ನು ಬಂಧಿಸಿ ಆತನ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿ ಸ್ಥಳೀಯರು ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>