<p><strong>ಹಾಪುಡ:</strong> ಉತ್ತರ ಪ್ರದೇಶದ ಗಢಮುಕ್ತೇಶ್ವರದಲ್ಲಿ ಪರಿಶಿಷ್ಟ ಜಾತಿ ಕುಟುಂಬಗಳು ಅಕ್ರಮವಾಗಿ ಜಾಗ ಒತ್ತುವರಿ ಮಾಡಿಕೊಂಡ ಆರೋಪದ ಮೇರೆಗೆ ಆ ಜಾಗ ತೆರವುಗೊಳಿಸುವಂತೆ ಸೂಚಿಸಿ ನೀಡಲಾಗಿದ್ದ ನೋಟಿಸ್ ಅನ್ನು ಹಾಪುಡ ಜಿಲ್ಲಾಡಳಿತವು ತಾತ್ಕಾಲಿಕವಾಗಿ ರದ್ದುಗೊಳಿಸಿದೆ. </p>.<p>ಪರಿಶಿಷ್ಟ ಜಾತಿಯ ಕುಟುಂಬಗಳಿಗೆ ಏಪ್ರಿಲ್ 8ರಂದು ನೋಟಿಸ್ ನೀಡಿದ್ದ ನಗರ ಪಾಲಿಕೆಯು, 15 ದಿನಗಳಲ್ಲಿ ಜಾಗ ತೆರವುಗೊಳಿಸಬೇಕು ಎಂದು ಸೂಚಿಸಿತ್ತು. </p>.<p>ಈ ಕುರಿತು ಶನಿವಾರ ಪ್ರತಿಕ್ರಿಯಿಸಿದ ಹಾಪುಡ ಜಿಲ್ಲೆಯ ಹೆಚ್ಚುವರಿ ಜಿಲ್ಲಾಧಿಕಾರಿ ಸಂದೀಪ್ ಕುಮಾರ್, ‘ಜಾಗ ತೆರವುಗೊಳಿಸುವಂತೆ ಸೂಚಿಸಿ 41 ನಿವಾಸಿಗಳಿಗೆ ನಗರಪಾಲಿಕೆ ನೀಡಿದ್ದ ನೋಟಿಸ್ ಅನ್ನು ಹಿಂಪಡೆಯಲಾಗಿದೆ. ಈ ಪ್ರಕರಣದ ಇತ್ಯರ್ಥಕ್ಕಾಗಿ ಜಿಲ್ಲಾಧಿಕಾರಿ ಮೂವರು ಸದಸ್ಯರ ಸಮಿತಿಯೊಂದನ್ನು ರಚಿಸಿದ್ದಾರೆ. ಈ ಪ್ರಕರಣದಲ್ಲಿನ ಎಲ್ಲ ಪಕ್ಷಗಳ ಅಭಿಪ್ರಾಯಗಳನ್ನು ಸಂಗ್ರಹಿಸಿ, 15 ದಿನಗಳಲ್ಲಿ ವರದಿ ನೀಡಲಿದೆ’ ಎಂದಿದ್ದಾರೆ. </p>.<p>ಕಂದಾಯ ದಾಖಲೆಗಳಲ್ಲಿ ಕೆರೆ ಎಂಬುದಾಗಿ ದಾಖಲಾಗಿದ್ದ ಜಾಗವನ್ನು 1986ರಲ್ಲಿ ಗುಢಮುಕ್ತೇಶ್ವರ ಮುನ್ಸಿಪಾಲಿಟಿ ಶುಲ್ಕ ಪಡೆದು ಇಲ್ಲಿನ ನಿವಾಸಿಗಳಿಗೆ ಪರಭಾರೆ ಮಾಡಿಕೊಟ್ಟಿದೆ ಎಂಬ ವಿಚಾರ ತಿಳಿದ ಬೆನ್ನಲ್ಲೇ, ಈ ಬಗ್ಗೆ ವಿಸ್ತೃತ ತನಿಖೆಗೆ ಮೂವರು ಸದಸ್ಯರ ಸಮಿತಿಯೊಂದನ್ನು ರಚಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಪುಡ:</strong> ಉತ್ತರ ಪ್ರದೇಶದ ಗಢಮುಕ್ತೇಶ್ವರದಲ್ಲಿ ಪರಿಶಿಷ್ಟ ಜಾತಿ ಕುಟುಂಬಗಳು ಅಕ್ರಮವಾಗಿ ಜಾಗ ಒತ್ತುವರಿ ಮಾಡಿಕೊಂಡ ಆರೋಪದ ಮೇರೆಗೆ ಆ ಜಾಗ ತೆರವುಗೊಳಿಸುವಂತೆ ಸೂಚಿಸಿ ನೀಡಲಾಗಿದ್ದ ನೋಟಿಸ್ ಅನ್ನು ಹಾಪುಡ ಜಿಲ್ಲಾಡಳಿತವು ತಾತ್ಕಾಲಿಕವಾಗಿ ರದ್ದುಗೊಳಿಸಿದೆ. </p>.<p>ಪರಿಶಿಷ್ಟ ಜಾತಿಯ ಕುಟುಂಬಗಳಿಗೆ ಏಪ್ರಿಲ್ 8ರಂದು ನೋಟಿಸ್ ನೀಡಿದ್ದ ನಗರ ಪಾಲಿಕೆಯು, 15 ದಿನಗಳಲ್ಲಿ ಜಾಗ ತೆರವುಗೊಳಿಸಬೇಕು ಎಂದು ಸೂಚಿಸಿತ್ತು. </p>.<p>ಈ ಕುರಿತು ಶನಿವಾರ ಪ್ರತಿಕ್ರಿಯಿಸಿದ ಹಾಪುಡ ಜಿಲ್ಲೆಯ ಹೆಚ್ಚುವರಿ ಜಿಲ್ಲಾಧಿಕಾರಿ ಸಂದೀಪ್ ಕುಮಾರ್, ‘ಜಾಗ ತೆರವುಗೊಳಿಸುವಂತೆ ಸೂಚಿಸಿ 41 ನಿವಾಸಿಗಳಿಗೆ ನಗರಪಾಲಿಕೆ ನೀಡಿದ್ದ ನೋಟಿಸ್ ಅನ್ನು ಹಿಂಪಡೆಯಲಾಗಿದೆ. ಈ ಪ್ರಕರಣದ ಇತ್ಯರ್ಥಕ್ಕಾಗಿ ಜಿಲ್ಲಾಧಿಕಾರಿ ಮೂವರು ಸದಸ್ಯರ ಸಮಿತಿಯೊಂದನ್ನು ರಚಿಸಿದ್ದಾರೆ. ಈ ಪ್ರಕರಣದಲ್ಲಿನ ಎಲ್ಲ ಪಕ್ಷಗಳ ಅಭಿಪ್ರಾಯಗಳನ್ನು ಸಂಗ್ರಹಿಸಿ, 15 ದಿನಗಳಲ್ಲಿ ವರದಿ ನೀಡಲಿದೆ’ ಎಂದಿದ್ದಾರೆ. </p>.<p>ಕಂದಾಯ ದಾಖಲೆಗಳಲ್ಲಿ ಕೆರೆ ಎಂಬುದಾಗಿ ದಾಖಲಾಗಿದ್ದ ಜಾಗವನ್ನು 1986ರಲ್ಲಿ ಗುಢಮುಕ್ತೇಶ್ವರ ಮುನ್ಸಿಪಾಲಿಟಿ ಶುಲ್ಕ ಪಡೆದು ಇಲ್ಲಿನ ನಿವಾಸಿಗಳಿಗೆ ಪರಭಾರೆ ಮಾಡಿಕೊಟ್ಟಿದೆ ಎಂಬ ವಿಚಾರ ತಿಳಿದ ಬೆನ್ನಲ್ಲೇ, ಈ ಬಗ್ಗೆ ವಿಸ್ತೃತ ತನಿಖೆಗೆ ಮೂವರು ಸದಸ್ಯರ ಸಮಿತಿಯೊಂದನ್ನು ರಚಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>