<p><strong>ಝಾನ್ಸಿ(ಉತ್ತರ ಪ್ರದೇಶ):</strong> ಮೊಘಲ್ ಚಕ್ರವರ್ತಿ ಬಾಬರ್ ಹೆಸರಿನಲ್ಲಿ ಯಾವುದೇ ಕಟ್ಟಡ ನಿರ್ಮಾಣ ಕಾರ್ಯ ನಡೆದರೆ ತೀವ್ರ ವಿರೋಧ ಎದುರಿಸಬೇಕಾಗುತ್ತದೆ ಎಂದು ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಭಾನುವಾರ ಎಚ್ಚರಿಕೆ ನೀಡಿದ್ದಾರೆ.</p><p>ಟಿಎಂಸಿಯಿಂದ ಅಮಾನತುಗೊಂಡಿರುವ ಶಾಸಕ ಹುಮಾಯೂನ್ ಕಬೀರ್ ಅವರು ಶನಿವಾರ ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯ ರೆಜಿನಗರದಲ್ಲಿ ಅಯೋಧ್ಯೆಯಲ್ಲಿದ್ದ ಬಾಬರಿ ಮಸೀದಿ ಮಾದರಿಯಲ್ಲಿ ಮಸೀದಿ ನಿರ್ಮಾಣಕ್ಕೆ ಅಡಿಪಾಯ ಹಾಕಿದ ನಂತರ ಮೌರ್ಯ ಅವರ ಪ್ರತಿಕ್ರಿಯೆ ಬಂದಿದೆ. </p><p>'ಮಸೀದಿ ನಿರ್ಮಾಣದಿಂದ ನಮಗೆ ಯಾವುದೇ ಸಮಸ್ಯೆ ಇಲ್ಲ. ಆದರೆ, ಯಾರಾದರೂ ಬಾಬರ್ ಹೆಸರಿನಲ್ಲಿ ಅದನ್ನು ನಿರ್ಮಿಸಿದರೆ, ನಾವು ಅದನ್ನು ವಿರೋಧಿಸುವುದಲ್ಲದೆ, ತ್ವರಿತವಾಗಿ ಕೆಡವಲಾಗುವುದು’ಎಂದು ಅವರು ತಿಳಿಸಿದ್ದಾರೆ.</p><p>ಇದೇವೇಳೆ, ಸಮಾಜವಾದಿ ಪಕ್ಷವನ್ನು(ಎಸ್ಪಿ) ಮೌರ್ಯ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದು, ಬಿಹಾರ ಚುನಾವಣೆಯಲ್ಲಿ ಅವಮಾನಕರ ಸೋಲನ್ನು ಅನುಭವಿಸಿದ ನಂತರ ಅದರ ಅಧ್ಯಕ್ಷ ಅಖಿಲೇಶ್ ಯಾದವ್ ತಮ್ಮ ಹಿಡಿತವನ್ನು ಕಳೆದುಕೊಂಡಿದ್ದಾರೆ ಎಂದು ಪ್ರತಿಪಾದಿಸಿದ್ದಾರೆ.</p><p>‘ಬಿಹಾರದಲ್ಲಿ ಪಕ್ಷದ ಹೀನಾಯ ಸೋಲಿನ ನಂತರ ಎಸ್ಪಿ ಮುಖ್ಯಸ್ಥರ ಮಾನಸಿಕ ಸ್ಥಿತಿ ಹದಗೆಟ್ಟಿದೆ. ಅವರು ಈಗ ಅವಾಸ್ತವಿಕ ಕನಸುಗಳಲ್ಲಿ ಮುಳುಗಿದ್ದಾರೆ’ಎಂದು ಟೀಕಿಸಿದ್ದಾರೆ.</p><p>2024ರ ವಿಧಾನಸಭೆ ಚುನಾವಣೆಯಲ್ಲಿ ಎಸ್ಪಿ ಕೆಲ ಕ್ಷೇತ್ರಗಳಲ್ಲಾದರೂ ಗೆದ್ದಿದೆ. 2027ರಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಪಕ್ಷವು ವಿರೋಧ ಪಕ್ಷದ ಸ್ಥಾನದಲ್ಲಿ ಕುಳಿತುಕೊಳ್ಳುವ ಸ್ಥಿತಿಯಲ್ಲಿಯೂ ಇರುವುದಿಲ್ಲ ಎಂದು ಉಪಮುಖ್ಯಮಂತ್ರಿ ಒತ್ತಿ ಹೇಳಿದ್ದಾರೆ.</p> .1528ರಿಂದ 2024: ಬಾಬರಿ ಮಸೀದಿಯಿಂದ ರಾಮ ಮಂದಿರ ನಿರ್ಮಾಣದವರೆಗಿನ ಚಿತ್ರಣ .ಬಾಬರಿ ಮಸೀದಿ ಧ್ವಂಸಕ್ಕೆ 33 ವರ್ಷ: ಹಲವೆಡೆ ಕಟ್ಟೆಚ್ಚರ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಝಾನ್ಸಿ(ಉತ್ತರ ಪ್ರದೇಶ):</strong> ಮೊಘಲ್ ಚಕ್ರವರ್ತಿ ಬಾಬರ್ ಹೆಸರಿನಲ್ಲಿ ಯಾವುದೇ ಕಟ್ಟಡ ನಿರ್ಮಾಣ ಕಾರ್ಯ ನಡೆದರೆ ತೀವ್ರ ವಿರೋಧ ಎದುರಿಸಬೇಕಾಗುತ್ತದೆ ಎಂದು ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಭಾನುವಾರ ಎಚ್ಚರಿಕೆ ನೀಡಿದ್ದಾರೆ.</p><p>ಟಿಎಂಸಿಯಿಂದ ಅಮಾನತುಗೊಂಡಿರುವ ಶಾಸಕ ಹುಮಾಯೂನ್ ಕಬೀರ್ ಅವರು ಶನಿವಾರ ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯ ರೆಜಿನಗರದಲ್ಲಿ ಅಯೋಧ್ಯೆಯಲ್ಲಿದ್ದ ಬಾಬರಿ ಮಸೀದಿ ಮಾದರಿಯಲ್ಲಿ ಮಸೀದಿ ನಿರ್ಮಾಣಕ್ಕೆ ಅಡಿಪಾಯ ಹಾಕಿದ ನಂತರ ಮೌರ್ಯ ಅವರ ಪ್ರತಿಕ್ರಿಯೆ ಬಂದಿದೆ. </p><p>'ಮಸೀದಿ ನಿರ್ಮಾಣದಿಂದ ನಮಗೆ ಯಾವುದೇ ಸಮಸ್ಯೆ ಇಲ್ಲ. ಆದರೆ, ಯಾರಾದರೂ ಬಾಬರ್ ಹೆಸರಿನಲ್ಲಿ ಅದನ್ನು ನಿರ್ಮಿಸಿದರೆ, ನಾವು ಅದನ್ನು ವಿರೋಧಿಸುವುದಲ್ಲದೆ, ತ್ವರಿತವಾಗಿ ಕೆಡವಲಾಗುವುದು’ಎಂದು ಅವರು ತಿಳಿಸಿದ್ದಾರೆ.</p><p>ಇದೇವೇಳೆ, ಸಮಾಜವಾದಿ ಪಕ್ಷವನ್ನು(ಎಸ್ಪಿ) ಮೌರ್ಯ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದು, ಬಿಹಾರ ಚುನಾವಣೆಯಲ್ಲಿ ಅವಮಾನಕರ ಸೋಲನ್ನು ಅನುಭವಿಸಿದ ನಂತರ ಅದರ ಅಧ್ಯಕ್ಷ ಅಖಿಲೇಶ್ ಯಾದವ್ ತಮ್ಮ ಹಿಡಿತವನ್ನು ಕಳೆದುಕೊಂಡಿದ್ದಾರೆ ಎಂದು ಪ್ರತಿಪಾದಿಸಿದ್ದಾರೆ.</p><p>‘ಬಿಹಾರದಲ್ಲಿ ಪಕ್ಷದ ಹೀನಾಯ ಸೋಲಿನ ನಂತರ ಎಸ್ಪಿ ಮುಖ್ಯಸ್ಥರ ಮಾನಸಿಕ ಸ್ಥಿತಿ ಹದಗೆಟ್ಟಿದೆ. ಅವರು ಈಗ ಅವಾಸ್ತವಿಕ ಕನಸುಗಳಲ್ಲಿ ಮುಳುಗಿದ್ದಾರೆ’ಎಂದು ಟೀಕಿಸಿದ್ದಾರೆ.</p><p>2024ರ ವಿಧಾನಸಭೆ ಚುನಾವಣೆಯಲ್ಲಿ ಎಸ್ಪಿ ಕೆಲ ಕ್ಷೇತ್ರಗಳಲ್ಲಾದರೂ ಗೆದ್ದಿದೆ. 2027ರಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಪಕ್ಷವು ವಿರೋಧ ಪಕ್ಷದ ಸ್ಥಾನದಲ್ಲಿ ಕುಳಿತುಕೊಳ್ಳುವ ಸ್ಥಿತಿಯಲ್ಲಿಯೂ ಇರುವುದಿಲ್ಲ ಎಂದು ಉಪಮುಖ್ಯಮಂತ್ರಿ ಒತ್ತಿ ಹೇಳಿದ್ದಾರೆ.</p> .1528ರಿಂದ 2024: ಬಾಬರಿ ಮಸೀದಿಯಿಂದ ರಾಮ ಮಂದಿರ ನಿರ್ಮಾಣದವರೆಗಿನ ಚಿತ್ರಣ .ಬಾಬರಿ ಮಸೀದಿ ಧ್ವಂಸಕ್ಕೆ 33 ವರ್ಷ: ಹಲವೆಡೆ ಕಟ್ಟೆಚ್ಚರ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>