ಲಖನೌ: ಉತ್ತರ ಪ್ರದೇಶದಲ್ಲಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸರ್ಕಾರ ರಚಿಸಿದರೆ, ಉಪಮುಖ್ಯಮಂತ್ರಿ ಸ್ಥಾನವನ್ನು ತಮಗೆ ಬಿಟ್ಟುಕೊಡಬೇಕು ಎಂದು ಬಿಜೆಪಿಯ ಪ್ರಮುಖ ಮಿತ್ರಪಕ್ಷ ‘ನಿಶಾದ್ ಪಾರ್ಟಿ’ಯ ಅಧ್ಯಕ್ಷ ಸಂಜಯ್ ನಿಶಾದ್ ಬೇಡಿಕೆ ಇಟ್ಟಿದ್ದಾರೆ. ಈ ಹುದ್ದೆಯನ್ನು ನೀಡದಿದ್ದರೆ ಮೈತ್ರಿಕೂಟದಿಂದ ಹೊರ ನಡೆಯುವ ಬೆದರಿಕೆಯನ್ನೂ ಒಡ್ಡಿದ್ದಾರೆ.