ಸಿಸೌಲಿಯಲ್ಲಿ ನಾನು ಕುಟುಂಬ ಸಮೇತ ಮತದಾನ ಮಾಡುತ್ತೇನೆ. ನೀವೂ ಪ್ರಜಾಪ್ರಭುತ್ವದ ಮಹಾಯಜ್ಞದಲ್ಲಿ ಭಾಗಿಯಾಗಿ ಎಂದು ನರೇಶ್ ಟಿಕಾಯತ್ ಮನವಿ ಮಾಡಿದ್ದಾರೆ. ರಾಕೇಶ್ ಟಿಕಾಯತ್, ಮುಜಾಫರ್ನಗರದ ಮತಗಟ್ಟೆಯಲ್ಲಿ ಮತದಾನದ ಹಕ್ಕು ಚಲಾಯಿಸಲಿದ್ದಾರೆ.
ಸಂಯುಕ್ತ ಕಿಸಾನ್ ಮೋರ್ಚಾ (ಎಸ್ಕೆಎಂ) ಒಕ್ಕೂಟದ ಭಾಗವಾಗಿರುವ ಬಿಕೆಯು, 2020 ನವೆಂಬರ್ನಿಂದ ಒಂದು ವರ್ಷಕ್ಕೂ ಹೆಚ್ಚು ಕಾಲ ಕೇಂದ್ರ ಕೃಷಿ ಕಾನೂನುಗಳ ವಿರುದ್ಧ ನಡೆದ ಆಂದೋಲನವನ್ನು ಮುನ್ನಡೆಸಿತ್ತು. ಅಂತಿಮವಾಗಿ ರೈತರ ಬೇಡಿಕೆಗಳಿಗೆ ಮಣಿದ ಸರ್ಕಾರ ವಿವಾದಿತ ಕೃಷಿ ಕಾನೂನುಗಳನ್ನು ಹಿಂಪಡೆದಿತ್ತು.