<p><strong>ಪ್ರಯಾಗ್ರಾಜ್ (ಉತ್ತರ ಪ್ರದೇಶ)</strong>: ‘2027ರಲ್ಲಿ ನಡೆಯುವ ಉತ್ತರಪ್ರದೇಶ ವಿಧಾನಸಭಾ ಚುನಾವಣೆಯನ್ನು ಪ್ರತಿಪಕ್ಷಗಳ ‘ಇಂಡಿಯಾ’ ಮೈತ್ರಿಕೂಟವು ಜಂಟಿಯಾಗಿ ಎದುರಿಸಲಿದೆ’ ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ತಿಳಿಸಿದ್ದಾರೆ.</p>.<p>ಇಲ್ಲಿ ನಡೆದ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ‘2024ರ ಲೋಕಸಭಾ ಚುನಾವಣೆಗೂ ಮುನ್ನ ‘ಇಂಡಿಯಾ’ ಮೈತ್ರಿಕೂಟವು ರಚನೆಯಾಗಿತ್ತು. ಈಗಲೂ ಒಕ್ಕೂಟವಿದ್ದು, ಮುಂದೆಯೂ ಮುಂದುವರಿಯಲಿದೆ. ಹಿಂದುಳಿದ, ದಲಿತ ಹಾಗೂ ಅಲ್ಪಸಂಖ್ಯಾತರು ಸೇರಿ, ರಾಜ್ಯದ ಬಿಜೆಪಿ ಸರ್ಕಾರವನ್ನು ಬುಡಸಮೇತ ಕಿತ್ತೊಗೆಯಲಿದ್ದಾರೆ’ ಎಂದು ಹೇಳಿದರು.</p>.<p>‘ವಕ್ಫ್ ತಿದ್ದುಪಡಿ ಕಾಯ್ದೆ ಬಳಿಕ ರಾಜ್ಯದಲ್ಲಿ ಬಿಜೆಪಿಯು ಮಾಫಿಯಾ ಮಾದರಿಯಲ್ಲಿ ಭೂಮಿಯನ್ನು ಕಿತ್ತುಕೊಳ್ಳುತ್ತಿದೆ. ಎಲ್ಲಿಯೇ ಜಾಗ ಕಂಡರೂ, ಅದು ವಶಕ್ಕೆ ಪಡೆಯುತ್ತಿದೆ. ಬಿಜೆಪಿಯು ಲ್ಯಾಂಡ್ ಮಾಫಿಯಾ ಪಕ್ಷವಾಗಿದೆ’ ಎಂದು ಆರೋಪಿಸಿದರು.</p>.<p>‘ನೋಟು ರದ್ದು, ಜಿಎಸ್ಟಿ ಮೂಲಕ ಜನರ ಹಣವನ್ನು ಕಿತ್ತುಕೊಂಡ ಬಿಜೆಪಿಯು, ಮೀಸಲಾತಿಯನ್ನು ಕಡಿತಗೊಳಿಸುತ್ತಿದೆ’ ಎಂದು ದೂರಿದರು. </p>.<p>‘ಪ್ರಯಾಗ್ರಾಜ್ನಲ್ಲಿ ನಡೆದ ಮಹಾಕುಂಭ ಮೇಳವನ್ನು ನಿರ್ವಹಿಸುವಲ್ಲಿ ಬಿಜೆಪಿಯು ಸಂಪೂರ್ಣವಾಗಿ ವಿಫಲವಾಗಿದ್ದು, ರಾಜ್ಯದಲ್ಲಿ ಪಕ್ಷ ಅಧಿಕಾರಕ್ಕೆ ಬಂದರೆ ತನಿಖೆ ನಡೆಸಲಾಗುವುದು’ ಎಂದು ಭರವಸೆ ನೀಡಿದರು.</p>.ಜನರು ಮುಕ್ತವಾಗಿ ಈದ್ ಆಚರಿಸಲು ಸರ್ಕಾರ ಅಡೆತಡೆಗಳನ್ನು ಸೃಷ್ಟಿಸುತ್ತಿದೆ: ಅಖಿಲೇಶ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪ್ರಯಾಗ್ರಾಜ್ (ಉತ್ತರ ಪ್ರದೇಶ)</strong>: ‘2027ರಲ್ಲಿ ನಡೆಯುವ ಉತ್ತರಪ್ರದೇಶ ವಿಧಾನಸಭಾ ಚುನಾವಣೆಯನ್ನು ಪ್ರತಿಪಕ್ಷಗಳ ‘ಇಂಡಿಯಾ’ ಮೈತ್ರಿಕೂಟವು ಜಂಟಿಯಾಗಿ ಎದುರಿಸಲಿದೆ’ ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ತಿಳಿಸಿದ್ದಾರೆ.</p>.<p>ಇಲ್ಲಿ ನಡೆದ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ‘2024ರ ಲೋಕಸಭಾ ಚುನಾವಣೆಗೂ ಮುನ್ನ ‘ಇಂಡಿಯಾ’ ಮೈತ್ರಿಕೂಟವು ರಚನೆಯಾಗಿತ್ತು. ಈಗಲೂ ಒಕ್ಕೂಟವಿದ್ದು, ಮುಂದೆಯೂ ಮುಂದುವರಿಯಲಿದೆ. ಹಿಂದುಳಿದ, ದಲಿತ ಹಾಗೂ ಅಲ್ಪಸಂಖ್ಯಾತರು ಸೇರಿ, ರಾಜ್ಯದ ಬಿಜೆಪಿ ಸರ್ಕಾರವನ್ನು ಬುಡಸಮೇತ ಕಿತ್ತೊಗೆಯಲಿದ್ದಾರೆ’ ಎಂದು ಹೇಳಿದರು.</p>.<p>‘ವಕ್ಫ್ ತಿದ್ದುಪಡಿ ಕಾಯ್ದೆ ಬಳಿಕ ರಾಜ್ಯದಲ್ಲಿ ಬಿಜೆಪಿಯು ಮಾಫಿಯಾ ಮಾದರಿಯಲ್ಲಿ ಭೂಮಿಯನ್ನು ಕಿತ್ತುಕೊಳ್ಳುತ್ತಿದೆ. ಎಲ್ಲಿಯೇ ಜಾಗ ಕಂಡರೂ, ಅದು ವಶಕ್ಕೆ ಪಡೆಯುತ್ತಿದೆ. ಬಿಜೆಪಿಯು ಲ್ಯಾಂಡ್ ಮಾಫಿಯಾ ಪಕ್ಷವಾಗಿದೆ’ ಎಂದು ಆರೋಪಿಸಿದರು.</p>.<p>‘ನೋಟು ರದ್ದು, ಜಿಎಸ್ಟಿ ಮೂಲಕ ಜನರ ಹಣವನ್ನು ಕಿತ್ತುಕೊಂಡ ಬಿಜೆಪಿಯು, ಮೀಸಲಾತಿಯನ್ನು ಕಡಿತಗೊಳಿಸುತ್ತಿದೆ’ ಎಂದು ದೂರಿದರು. </p>.<p>‘ಪ್ರಯಾಗ್ರಾಜ್ನಲ್ಲಿ ನಡೆದ ಮಹಾಕುಂಭ ಮೇಳವನ್ನು ನಿರ್ವಹಿಸುವಲ್ಲಿ ಬಿಜೆಪಿಯು ಸಂಪೂರ್ಣವಾಗಿ ವಿಫಲವಾಗಿದ್ದು, ರಾಜ್ಯದಲ್ಲಿ ಪಕ್ಷ ಅಧಿಕಾರಕ್ಕೆ ಬಂದರೆ ತನಿಖೆ ನಡೆಸಲಾಗುವುದು’ ಎಂದು ಭರವಸೆ ನೀಡಿದರು.</p>.ಜನರು ಮುಕ್ತವಾಗಿ ಈದ್ ಆಚರಿಸಲು ಸರ್ಕಾರ ಅಡೆತಡೆಗಳನ್ನು ಸೃಷ್ಟಿಸುತ್ತಿದೆ: ಅಖಿಲೇಶ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>