<p><strong>ಹಾಪುರ</strong> <strong>(ಉತ್ತರ ಪ್ರದೇಶ)</strong>: ಸಕಾಲಕ್ಕೆ ಚಿಕಿತ್ಸೆ ನೀಡದಿದ್ದರಿಂದಲೇ ತಮ್ಮ ಐದು ವರ್ಷದ ಮಗಳು ಮೃತಪಟ್ಟಿದ್ದಾಳೆ ಎಂದು ಪೋಷಕರು ಇಲ್ಲಿನ ಖಾಸಗಿ ಆಸ್ಪತ್ರೆಯ ವಿರುದ್ಧ ದೂರಿದ್ದಾರೆ.</p>.<p>ಪಿಲ್ಖುವಾದ ರಾಷ್ಟ್ರೀಯ ಹೆದ್ದಾರಿ 9ರಲ್ಲಿರುವ ಸರಸ್ವತಿ ಆಸ್ಪತ್ರೆಯಲ್ಲಿ ದಿನಗೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿರುವ ಅನ್ವರ್– ಮೌಸಾಮಿ ಅವರು ತಮ್ಮ ಮಗಳು ಅಮ್ರೀನ್ ಅವರನ್ನು ಜೂನ್ 20ರಂದು ಆಸ್ಪತ್ರೆಗೆ ಕರೆದೊಯ್ದಾಗ ಈ ಘಟನೆ ನಡೆದಿದೆ.</p>.<p>ಆಸ್ಪತ್ರೆಯ ವೈದ್ಯರು ಚಿಕಿತ್ಸೆಯ ವೆಚ್ಚ ₹20 ಸಾವಿರ ಪಾವತಿಸುವಂತೆ ಸೂಚಿಸಿದ್ದಾರೆ. ದಂಪತಿ ತಮ್ಮ ಬಳಿ ಹಣವಿಲ್ಲ ಎನ್ನುತ್ತಿದ್ದಂತೆ, ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯುವಂತೆ ಹೇಳಿದ್ದಾರೆ. ಚಿಕಿತ್ಸೆ ನೀಡಲು ವಿಳಂಬವಾಗಿದ್ದರಿಂದಲೇ ತಮ್ಮ ಮಗಳು ಮೃತಪಟ್ಟಿದ್ದಾಳೆ ಎಂದು ಪೋಷಕರು ದೂರಿದ್ದಾರೆ.</p>.<p>ಪೋಷಕರ ಆರೋಪದ ಕುರಿತಂತೆ ಖಾಸಗಿ ಆಸ್ಪತ್ರೆಯು ಯಾವುದೇ ಪ್ರತಿಕ್ರಿಯೆ ನೀಡಿಲ್ಲ.</p>.<p>ಈ ವಿಷಯ ತಿಳಿದ ಹಾಪುರ ಮುಖ್ಯ ವೈದ್ಯಕೀಯ ಅಧಿಕಾರಿ ಡಾ. ಸುನೀಲ್ ತ್ಯಾಗಿ ಅವರು ಆಸ್ಪತ್ರೆಯ ಆಡಳಿತ ಮಂಡಳಿಗೆ ನೋಟಿಸ್ ಜಾರಿ ಮಾಡಿದ್ದು, ತನಿಖೆಗೂ ಆದೇಶಿಸಿದ್ದಾರೆ.</p>.<p>‘ಆಸ್ಪತ್ರೆಯ ನಡೆ ಅಮಾನವೀಯ’ ಎಂದಿರುವ ಬಿಜೆಪಿಯ ನಾಯಕ ಮೊಹಮ್ಮದ್ ಡ್ಯಾನಿಶ್, ಆಸ್ಪತ್ರೆ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಅವರಿಗೆ ಪತ್ರ ಬರೆದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಪುರ</strong> <strong>(ಉತ್ತರ ಪ್ರದೇಶ)</strong>: ಸಕಾಲಕ್ಕೆ ಚಿಕಿತ್ಸೆ ನೀಡದಿದ್ದರಿಂದಲೇ ತಮ್ಮ ಐದು ವರ್ಷದ ಮಗಳು ಮೃತಪಟ್ಟಿದ್ದಾಳೆ ಎಂದು ಪೋಷಕರು ಇಲ್ಲಿನ ಖಾಸಗಿ ಆಸ್ಪತ್ರೆಯ ವಿರುದ್ಧ ದೂರಿದ್ದಾರೆ.</p>.<p>ಪಿಲ್ಖುವಾದ ರಾಷ್ಟ್ರೀಯ ಹೆದ್ದಾರಿ 9ರಲ್ಲಿರುವ ಸರಸ್ವತಿ ಆಸ್ಪತ್ರೆಯಲ್ಲಿ ದಿನಗೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿರುವ ಅನ್ವರ್– ಮೌಸಾಮಿ ಅವರು ತಮ್ಮ ಮಗಳು ಅಮ್ರೀನ್ ಅವರನ್ನು ಜೂನ್ 20ರಂದು ಆಸ್ಪತ್ರೆಗೆ ಕರೆದೊಯ್ದಾಗ ಈ ಘಟನೆ ನಡೆದಿದೆ.</p>.<p>ಆಸ್ಪತ್ರೆಯ ವೈದ್ಯರು ಚಿಕಿತ್ಸೆಯ ವೆಚ್ಚ ₹20 ಸಾವಿರ ಪಾವತಿಸುವಂತೆ ಸೂಚಿಸಿದ್ದಾರೆ. ದಂಪತಿ ತಮ್ಮ ಬಳಿ ಹಣವಿಲ್ಲ ಎನ್ನುತ್ತಿದ್ದಂತೆ, ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯುವಂತೆ ಹೇಳಿದ್ದಾರೆ. ಚಿಕಿತ್ಸೆ ನೀಡಲು ವಿಳಂಬವಾಗಿದ್ದರಿಂದಲೇ ತಮ್ಮ ಮಗಳು ಮೃತಪಟ್ಟಿದ್ದಾಳೆ ಎಂದು ಪೋಷಕರು ದೂರಿದ್ದಾರೆ.</p>.<p>ಪೋಷಕರ ಆರೋಪದ ಕುರಿತಂತೆ ಖಾಸಗಿ ಆಸ್ಪತ್ರೆಯು ಯಾವುದೇ ಪ್ರತಿಕ್ರಿಯೆ ನೀಡಿಲ್ಲ.</p>.<p>ಈ ವಿಷಯ ತಿಳಿದ ಹಾಪುರ ಮುಖ್ಯ ವೈದ್ಯಕೀಯ ಅಧಿಕಾರಿ ಡಾ. ಸುನೀಲ್ ತ್ಯಾಗಿ ಅವರು ಆಸ್ಪತ್ರೆಯ ಆಡಳಿತ ಮಂಡಳಿಗೆ ನೋಟಿಸ್ ಜಾರಿ ಮಾಡಿದ್ದು, ತನಿಖೆಗೂ ಆದೇಶಿಸಿದ್ದಾರೆ.</p>.<p>‘ಆಸ್ಪತ್ರೆಯ ನಡೆ ಅಮಾನವೀಯ’ ಎಂದಿರುವ ಬಿಜೆಪಿಯ ನಾಯಕ ಮೊಹಮ್ಮದ್ ಡ್ಯಾನಿಶ್, ಆಸ್ಪತ್ರೆ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಅವರಿಗೆ ಪತ್ರ ಬರೆದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>