<p><strong>ಲಖನೌ:</strong> ಪೊಲೀಸ್ ದಾಖಲೆಗಳು ಮತ್ತು ಸಾರ್ವಜನಿಕ ಸೂಚನೆಗಳಲ್ಲಿ ಮಾಡಿರುವ ಎಲ್ಲಾ ರೀತಿಯ ಜಾತಿ ಉಲ್ಲೇಖಗಳನ್ನು ತಕ್ಷಣವೇ ತೆಗೆದುಹಾಕಲು ಉತ್ತರ ಪ್ರದೇಶ ಸರ್ಕಾರ ಆದೇಶಿಸಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.</p>.<p>ಜಾತಿ ಆಧಾರಿತ ತಾರತಮ್ಯ ತೊಡೆದುಹಾಕುವ ಉದ್ದೇಶವನ್ನು ಹೊಂದಿರುವ ಅಲಹಾಬಾದ್ ಹೈಕೋರ್ಟ್ನ ತೀರ್ಪಿಗೆ ಅನುಸಾರ ಈ ಆದೇಶ ಹೊರಡಿಸಲಾಗಿದೆ. </p>.<p>ಜಾತಿ ಆಧಾರಿತ ರ್ಯಾಲಿಗಳು ಮತ್ತು ರಾಜಕೀಯ ಉದ್ದೇಶಗಳನ್ನು ಹೊಂದಿರುವ ಸಾರ್ವಜನಿಕ ಕಾರ್ಯಕ್ರಮಗಳನ್ನು ರಾಜ್ಯದಾದ್ಯಂತ ನಿಷೇಧಿಸಲಾಗಿದೆ. ಜಾತಿಯ ಕುರಿತು ಹೊಗಳುವ ಅಥವಾ ದ್ವೇಷವನ್ನು ಉತ್ತೇಜಿಸುವ ಸಾಮಾಜಿಕ ಮಾಧ್ಯಮ ಪೋಸ್ಟ್ಗಳ ಮೇಲೂ ನಿಗಾ ಇಡಲಾಗುವುದು ಎಂದು ಹೇಳಿದೆ.</p>.<p>ಅಧಿಕೃತ ಆದೇಶದ ಪ್ರಕಾರ ಇನ್ನು ಮುಂದೆ ಪೊಲೀಸ್ ನೋಂದಣಿ, ಪ್ರಕರಣದ ವರದಿ, ಬಂಧನಕ್ಕೆ ಸಂಬಂಧಿಸಿದ ದಾಖಲೆಗಳಲ್ಲಿ ಆರೋಪಿಗಳ ಜಾತಿಯನ್ನು ಉಲ್ಲೇಖಿಸಬಾರದು ಅಥವಾ ಪೊಲೀಸ್ ಠಾಣೆಯ ಸೂಚನಾ ಫಲಕಗಳಲ್ಲಿ ಪ್ರದರ್ಶಿಸಬಾರದು ಎಂದು ಮುಖ್ಯ ಕಾರ್ಯದರ್ಶಿ ದೀಪಕ್ ಕುಮಾರ್ ಸೂಚನೆ ನೀಡಿದ್ದಾರೆ.</p>.<p>‘ಅಲಹಾಬಾದ್ ಹೈಕೋರ್ಟ್ ಸೆಪ್ಟೆಂಬರ್ 16ರಂದು ನೀಡಿದ ತೀರ್ಪಿಗೆ ಅನುಗುಣವಾಗಿ ಪೊಲೀಸ್ ಇಲಾಖೆ ಮತ್ತು ಎಲ್ಲ ಜಿಲ್ಲಾಡಳಿತಗಳಿಗೆ ಈ ನಿರ್ದೇಶನ ನೀಡಲಾಗಿದ್ದು, ತಕ್ಷಣವೇ ಜಾರಿಗೆ ಬರುತ್ತದೆ’ ಎಂದು ತಿಳಿಸಿದ್ದಾರೆ.</p>.<p>ಈ ಆದೇಶದ ಪರಿಣಾಮಕಾರಿ ಜಾರಿಯನ್ನು ಖಚಿತಪಡಿಸಿಕೊಳ್ಳಲು ಮತ್ತು ಹೊಸ ನಿಯಮಗಳ ಬಗ್ಗೆ ಜಾಗೃತಿ ಮೂಡಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ತರಬೇತಿ ನೀಡುವಂತೆಯೂ ತಿಳಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ:</strong> ಪೊಲೀಸ್ ದಾಖಲೆಗಳು ಮತ್ತು ಸಾರ್ವಜನಿಕ ಸೂಚನೆಗಳಲ್ಲಿ ಮಾಡಿರುವ ಎಲ್ಲಾ ರೀತಿಯ ಜಾತಿ ಉಲ್ಲೇಖಗಳನ್ನು ತಕ್ಷಣವೇ ತೆಗೆದುಹಾಕಲು ಉತ್ತರ ಪ್ರದೇಶ ಸರ್ಕಾರ ಆದೇಶಿಸಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.</p>.<p>ಜಾತಿ ಆಧಾರಿತ ತಾರತಮ್ಯ ತೊಡೆದುಹಾಕುವ ಉದ್ದೇಶವನ್ನು ಹೊಂದಿರುವ ಅಲಹಾಬಾದ್ ಹೈಕೋರ್ಟ್ನ ತೀರ್ಪಿಗೆ ಅನುಸಾರ ಈ ಆದೇಶ ಹೊರಡಿಸಲಾಗಿದೆ. </p>.<p>ಜಾತಿ ಆಧಾರಿತ ರ್ಯಾಲಿಗಳು ಮತ್ತು ರಾಜಕೀಯ ಉದ್ದೇಶಗಳನ್ನು ಹೊಂದಿರುವ ಸಾರ್ವಜನಿಕ ಕಾರ್ಯಕ್ರಮಗಳನ್ನು ರಾಜ್ಯದಾದ್ಯಂತ ನಿಷೇಧಿಸಲಾಗಿದೆ. ಜಾತಿಯ ಕುರಿತು ಹೊಗಳುವ ಅಥವಾ ದ್ವೇಷವನ್ನು ಉತ್ತೇಜಿಸುವ ಸಾಮಾಜಿಕ ಮಾಧ್ಯಮ ಪೋಸ್ಟ್ಗಳ ಮೇಲೂ ನಿಗಾ ಇಡಲಾಗುವುದು ಎಂದು ಹೇಳಿದೆ.</p>.<p>ಅಧಿಕೃತ ಆದೇಶದ ಪ್ರಕಾರ ಇನ್ನು ಮುಂದೆ ಪೊಲೀಸ್ ನೋಂದಣಿ, ಪ್ರಕರಣದ ವರದಿ, ಬಂಧನಕ್ಕೆ ಸಂಬಂಧಿಸಿದ ದಾಖಲೆಗಳಲ್ಲಿ ಆರೋಪಿಗಳ ಜಾತಿಯನ್ನು ಉಲ್ಲೇಖಿಸಬಾರದು ಅಥವಾ ಪೊಲೀಸ್ ಠಾಣೆಯ ಸೂಚನಾ ಫಲಕಗಳಲ್ಲಿ ಪ್ರದರ್ಶಿಸಬಾರದು ಎಂದು ಮುಖ್ಯ ಕಾರ್ಯದರ್ಶಿ ದೀಪಕ್ ಕುಮಾರ್ ಸೂಚನೆ ನೀಡಿದ್ದಾರೆ.</p>.<p>‘ಅಲಹಾಬಾದ್ ಹೈಕೋರ್ಟ್ ಸೆಪ್ಟೆಂಬರ್ 16ರಂದು ನೀಡಿದ ತೀರ್ಪಿಗೆ ಅನುಗುಣವಾಗಿ ಪೊಲೀಸ್ ಇಲಾಖೆ ಮತ್ತು ಎಲ್ಲ ಜಿಲ್ಲಾಡಳಿತಗಳಿಗೆ ಈ ನಿರ್ದೇಶನ ನೀಡಲಾಗಿದ್ದು, ತಕ್ಷಣವೇ ಜಾರಿಗೆ ಬರುತ್ತದೆ’ ಎಂದು ತಿಳಿಸಿದ್ದಾರೆ.</p>.<p>ಈ ಆದೇಶದ ಪರಿಣಾಮಕಾರಿ ಜಾರಿಯನ್ನು ಖಚಿತಪಡಿಸಿಕೊಳ್ಳಲು ಮತ್ತು ಹೊಸ ನಿಯಮಗಳ ಬಗ್ಗೆ ಜಾಗೃತಿ ಮೂಡಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ತರಬೇತಿ ನೀಡುವಂತೆಯೂ ತಿಳಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>