ಹಲವು ಪ್ರಕರಣಗಳ ಪ್ರಮುಖ ಆರೋಪಿಯಾಗಿದ್ದ ದುಬೆಯನ್ನು ಬಂಧಿಸಲು ಜುಲೈ 2 ರಂದು ಕಾನ್ಪುರ ಜಿಲ್ಲೆಯ ಬಿಕ್ರು ಗ್ರಾಮಕ್ಕೆ ಹೋಗಿದ್ದ ಪೊಲೀಸರ ತಂಡದ ಮೇಲೆ ಗುಂಡಿನ ದಾಳಿ ನಡೆದು ಎಂಟು ಮಂದಿ ಪೊಲೀಸರು ಹತರಾಗಿದ್ದರು. ಪ್ರಮುಖ ಆರೋಪಿ ದುಬೆ ಬಳಿಕ ತಲೆಮರೆಸಿಕೊಂಡಿದ್ದ. ದುಬೆನನ್ನು ಬಂಧಿಸಲು ಮಾಹಿತಿ ನೀಡಿದವರಿಗೆ ₹5 ಲಕ್ಷ ಬಹುಮಾನ ನೀಡುವುದಾಗಿ ರಾಜ್ಯ ಸರ್ಕಾರ ಘೋಷಿಸಿತ್ತು. ಈತನನ್ನು ಮಧ್ಯಪ್ರದೇಶ ಪೊಲೀಸರು ಉಜ್ಜಯಿನಿಯಲ್ಲಿ ಬಂಧಿಸಿ ಉತ್ತರಪ್ರದೇಶ ಪೊಲೀಸರಿಗೆ ಹಸ್ತಾಂತರಿಸಿದ್ದರು.
ಇದೀಗ ಪೊಲೀಸರು ದುಬೆ ಸಹಚರರನ್ನು ಬಂಧಿಸಿದ್ದು, ತನಿಖೆ ಮುಂದುವರಿಸಿದ್ದಾರೆ.