<p><strong>ಕೋಲ್ಕತ್ತ</strong>: ಪ್ರಯಾಗ್ರಾಜ್ನ ಮಹಾ ಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟವರ ನಿಖರ ಸಂಖ್ಯೆಯನ್ನು ಉತ್ತರ ಪ್ರದೇಶ ಸರ್ಕಾರ ಬಿಡುಗಡೆ ಮಾಡುತ್ತಿಲ್ಲ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.</p><p>ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮಹಾ ಕುಂಭಮೇಳದಲ್ಲಿ ಎಷ್ಟೋ ಜನರು ಮೃತಪಟ್ಟಿದ್ದಾರೆ. ಆದರೆ, ಉತ್ತರ ಪ್ರದೇಶ ಸರ್ಕಾರ ಸಾವಿನ ನಿಖರ ಸಂಖ್ಯೆಯನ್ನು ಬಿಡುಗಡೆ ಮಾಡುತ್ತಿಲ್ಲ. ಅಲ್ಲದೆ, ಸ್ಥಳದಲ್ಲಿ ಸೂಕ್ತ ವ್ಯವಸ್ಥೆಗಳನ್ನು ಮಾಡಲಾಗಿಲ್ಲ’ ಎಂದು ಹೇಳಿದ್ದಾರೆ.</p><p>ಕಾಲ್ತುಳಿತದಲ್ಲಿ ಮೃತಪಟ್ಟ ಬಂಗಾಳ ನಿವಾಸಿಗಳ ಮೃತದೇಹಗಳನ್ನು ಸೂಕ್ತ ದಾಖಲೆಗಳಿಲ್ಲದೆ ವಾಪಸ್ ಕಳುಹಿಸಲಾಗಿದ್ದು, ಅವರ ಕುಟುಂಬಗಳಿಗೆ ಪರಿಹಾರ ಸಿಗುವುದು ಕಷ್ಟಕರವಾಗಿತ್ತು. ಕುಟುಂಬಗಳಿಗೆ ಮರಣ ಪ್ರಮಾಣ ಪತ್ರಗಳನ್ನು ನೀಡಲು ನಾವು ಮರಣೋತ್ತರ ಪರೀಕ್ಷೆಗಳನ್ನು ನಡೆಸಿದ್ದೇವೆ ಎಂದು ಮಮತಾ ತಿಳಿಸಿದ್ದಾರೆ.</p><p>ಮಹಾ ಕುಂಭಮೇಳದ ‘ವಿಐಪಿ ಸಂಸ್ಕೃತಿ’ಯನ್ನು ಟೀಕಿಸಿದ ಮಮತಾ ಬ್ಯಾನರ್ಜಿ, ‘ಸಾಮಾನ್ಯ ಜನರಿಗೆ ತೊಂದರೆಯಾಗಬಾರದೆಂದು ನಾನು ಪವಿತ್ರ ಸ್ನಾನಕ್ಕಾಗಿ ಮಹಾ ಕುಂಭಮೇಳಕ್ಕೆ ಭೇಟಿ ನೀಡಿಲ್ಲ’ ಎಂದು ಹೇಳಿದ್ದಾರೆ. </p><p>ಮಹಾ ಕುಂಭಮೇಳದಲ್ಲಿ ಕಾಲ್ತುಳಿತ ದುರಂತ ಸಂಭವಿಸಿದ ಬಳಿಕ ಈವರೆಗೆ ಕೇಂದ್ರ ಸರ್ಕಾರವು ಯಾವುದೇ ತನಿಖಾ ಸಮಿತಿಯನ್ನು ಕಳುಹಿಸಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.</p><p>ಜನವರಿ 29ರಂದು ಮಹಾಕುಂಭದ ಸಂಗಮ ಪ್ರದೇಶದಲ್ಲಿ ಲಕ್ಷಾಂತರ ಯಾತ್ರಾರ್ಥಿಗಳು ಪವಿತ್ರ ಸ್ನಾನ ಮಾಡಲು ಆಗಮಿಸಿದ್ದ ಕಾರಣ, ನೂಕುನುಗ್ಗಲಿನಿಂದ ಉಂಟಾದ ಕಾಲ್ತುಳಿತದಲ್ಲಿ ಕನಿಷ್ಠ 30 ಜನರು ಸಾವಿಗೀಡಾಗಿದ್ದರು. 60 ಜನರು ಗಾಯಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ</strong>: ಪ್ರಯಾಗ್ರಾಜ್ನ ಮಹಾ ಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟವರ ನಿಖರ ಸಂಖ್ಯೆಯನ್ನು ಉತ್ತರ ಪ್ರದೇಶ ಸರ್ಕಾರ ಬಿಡುಗಡೆ ಮಾಡುತ್ತಿಲ್ಲ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.</p><p>ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮಹಾ ಕುಂಭಮೇಳದಲ್ಲಿ ಎಷ್ಟೋ ಜನರು ಮೃತಪಟ್ಟಿದ್ದಾರೆ. ಆದರೆ, ಉತ್ತರ ಪ್ರದೇಶ ಸರ್ಕಾರ ಸಾವಿನ ನಿಖರ ಸಂಖ್ಯೆಯನ್ನು ಬಿಡುಗಡೆ ಮಾಡುತ್ತಿಲ್ಲ. ಅಲ್ಲದೆ, ಸ್ಥಳದಲ್ಲಿ ಸೂಕ್ತ ವ್ಯವಸ್ಥೆಗಳನ್ನು ಮಾಡಲಾಗಿಲ್ಲ’ ಎಂದು ಹೇಳಿದ್ದಾರೆ.</p><p>ಕಾಲ್ತುಳಿತದಲ್ಲಿ ಮೃತಪಟ್ಟ ಬಂಗಾಳ ನಿವಾಸಿಗಳ ಮೃತದೇಹಗಳನ್ನು ಸೂಕ್ತ ದಾಖಲೆಗಳಿಲ್ಲದೆ ವಾಪಸ್ ಕಳುಹಿಸಲಾಗಿದ್ದು, ಅವರ ಕುಟುಂಬಗಳಿಗೆ ಪರಿಹಾರ ಸಿಗುವುದು ಕಷ್ಟಕರವಾಗಿತ್ತು. ಕುಟುಂಬಗಳಿಗೆ ಮರಣ ಪ್ರಮಾಣ ಪತ್ರಗಳನ್ನು ನೀಡಲು ನಾವು ಮರಣೋತ್ತರ ಪರೀಕ್ಷೆಗಳನ್ನು ನಡೆಸಿದ್ದೇವೆ ಎಂದು ಮಮತಾ ತಿಳಿಸಿದ್ದಾರೆ.</p><p>ಮಹಾ ಕುಂಭಮೇಳದ ‘ವಿಐಪಿ ಸಂಸ್ಕೃತಿ’ಯನ್ನು ಟೀಕಿಸಿದ ಮಮತಾ ಬ್ಯಾನರ್ಜಿ, ‘ಸಾಮಾನ್ಯ ಜನರಿಗೆ ತೊಂದರೆಯಾಗಬಾರದೆಂದು ನಾನು ಪವಿತ್ರ ಸ್ನಾನಕ್ಕಾಗಿ ಮಹಾ ಕುಂಭಮೇಳಕ್ಕೆ ಭೇಟಿ ನೀಡಿಲ್ಲ’ ಎಂದು ಹೇಳಿದ್ದಾರೆ. </p><p>ಮಹಾ ಕುಂಭಮೇಳದಲ್ಲಿ ಕಾಲ್ತುಳಿತ ದುರಂತ ಸಂಭವಿಸಿದ ಬಳಿಕ ಈವರೆಗೆ ಕೇಂದ್ರ ಸರ್ಕಾರವು ಯಾವುದೇ ತನಿಖಾ ಸಮಿತಿಯನ್ನು ಕಳುಹಿಸಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.</p><p>ಜನವರಿ 29ರಂದು ಮಹಾಕುಂಭದ ಸಂಗಮ ಪ್ರದೇಶದಲ್ಲಿ ಲಕ್ಷಾಂತರ ಯಾತ್ರಾರ್ಥಿಗಳು ಪವಿತ್ರ ಸ್ನಾನ ಮಾಡಲು ಆಗಮಿಸಿದ್ದ ಕಾರಣ, ನೂಕುನುಗ್ಗಲಿನಿಂದ ಉಂಟಾದ ಕಾಲ್ತುಳಿತದಲ್ಲಿ ಕನಿಷ್ಠ 30 ಜನರು ಸಾವಿಗೀಡಾಗಿದ್ದರು. 60 ಜನರು ಗಾಯಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>