ಲಖನೌ: ‘ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರವು ಅಪರಾಧಿಗಳನ್ನು ಜಾತಿ, ಧರ್ಮದ ಆಧಾರದಲ್ಲಿ ರಕ್ಷಿಸುತ್ತಿದ್ದು, ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ರಾಜೀನಾಮೆ ನೀಡಬೇಕು’ ಎಂದು ದುಷ್ಕರ್ಮಿಗಳ ಗುಂಡಿನ ದಾಳಿಗೀಡಾಗಿರುವ ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಗುರುವಾರ ಟ್ವೀಟ್ ಮೂಲಕ ಆಗ್ರಹಿಸಿದ್ದಾರೆ.