<p class="title"><strong>ಲಖನೌ:</strong> ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧದ ಪ್ರತಿಭಟನೆಗೆ ಸಂಬಂಧಿಸಿದ ಮೊಕದ್ದಮೆ ದಾಖಲಿಸಲಾಗಿರುವ 57 ಮಂದಿಯ ಹೆಸರು, ವಿವರಗಳನ್ನು ಒಳಗೊಂಡ ಬೃಹತ್ ಫಲಕಗಳನ್ನು ಆಯಕಟ್ಟಿನ ವೃತ್ತಗಳು, ಪ್ರಮುಖ ರಸ್ತೆಗಳಲ್ಲಿ ಉತ್ತರ ಪ್ರದೇಶ ಸರ್ಕಾರ ಪ್ರದರ್ಶಿಸಿದೆ.</p>.<p class="title">ಸಿಎಎ ವಿರೋಧಿ ಪ್ರತಿಭಟನಾಕಾರರ ವಿರುದ್ದ ಪೊಲೀಸ್ ಬಲ ಬಳಕೆಗೆ ಸಂಬಂಧಿಸಿದಂತೆ ಹಲವು ಪ್ರಕರಣಗಳಲ್ಲಿ ಕೋರ್ಟ್ನಿಂದ ಟೀಕೆ ವ್ಯಕ್ತವಾಗಿರುವ ಬೆಳವಣಿಗೆಗಳ ನಂತರವೂ ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ.</p>.<p class="title">ಲಖನೌನ ಸ್ಥಳೀಯ ಆಡಳಿತ ಈ ಫಲಕಗಳನ್ನು ಅಳವಡಿಸಿದೆ. ಈ ಮಧ್ಯೆ, ಹಿಂಸಾಚಾರ ಘಟನೆಗಳಿಗೆ ಸಂಬಂಧಿಸಿದ ಸಾರ್ವಜನಿಕ ಆಸ್ತಿ ನಷ್ಟ ಕುರಿತು ₹ 1.55 ಕೋಟಿ ವಸೂಲಿಗೆ ಸಂಬಂಧಿಸಿ ಈಗಾಗಲೇ ಈ ಎಲ್ಲರಿಗೂ ನೋಟಿಸ್ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p class="title">ಸದ್ಯ, ಸ್ಥಳೀಯ ಆಡಳಿತ ಪ್ರಕಟಿಸಿರುವ ಬೃಹತ್ ಫಲಕಗಳಲ್ಲಿ ಮಾಜಿ ಐಪಿಎಸ್ ಅಧಿಕಾರಿ ಎಸ್.ಆರ್.ದರಪುರಿ ಅವರ ಹೆಸರೂ ಇದೆ. ಸರ್ಕಾರದ ಕ್ರಮಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಅವರು, ‘ಸ್ಥಳೀಯ ಆಡಳಿತ ವಿರುದ್ಧ ನಾನು ಮಾನನಷ್ಟ ಮೊಕದ್ದಮೆ ಹೂಡಲಿದ್ದೇನೆ’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಲಖನೌ:</strong> ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧದ ಪ್ರತಿಭಟನೆಗೆ ಸಂಬಂಧಿಸಿದ ಮೊಕದ್ದಮೆ ದಾಖಲಿಸಲಾಗಿರುವ 57 ಮಂದಿಯ ಹೆಸರು, ವಿವರಗಳನ್ನು ಒಳಗೊಂಡ ಬೃಹತ್ ಫಲಕಗಳನ್ನು ಆಯಕಟ್ಟಿನ ವೃತ್ತಗಳು, ಪ್ರಮುಖ ರಸ್ತೆಗಳಲ್ಲಿ ಉತ್ತರ ಪ್ರದೇಶ ಸರ್ಕಾರ ಪ್ರದರ್ಶಿಸಿದೆ.</p>.<p class="title">ಸಿಎಎ ವಿರೋಧಿ ಪ್ರತಿಭಟನಾಕಾರರ ವಿರುದ್ದ ಪೊಲೀಸ್ ಬಲ ಬಳಕೆಗೆ ಸಂಬಂಧಿಸಿದಂತೆ ಹಲವು ಪ್ರಕರಣಗಳಲ್ಲಿ ಕೋರ್ಟ್ನಿಂದ ಟೀಕೆ ವ್ಯಕ್ತವಾಗಿರುವ ಬೆಳವಣಿಗೆಗಳ ನಂತರವೂ ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ.</p>.<p class="title">ಲಖನೌನ ಸ್ಥಳೀಯ ಆಡಳಿತ ಈ ಫಲಕಗಳನ್ನು ಅಳವಡಿಸಿದೆ. ಈ ಮಧ್ಯೆ, ಹಿಂಸಾಚಾರ ಘಟನೆಗಳಿಗೆ ಸಂಬಂಧಿಸಿದ ಸಾರ್ವಜನಿಕ ಆಸ್ತಿ ನಷ್ಟ ಕುರಿತು ₹ 1.55 ಕೋಟಿ ವಸೂಲಿಗೆ ಸಂಬಂಧಿಸಿ ಈಗಾಗಲೇ ಈ ಎಲ್ಲರಿಗೂ ನೋಟಿಸ್ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p class="title">ಸದ್ಯ, ಸ್ಥಳೀಯ ಆಡಳಿತ ಪ್ರಕಟಿಸಿರುವ ಬೃಹತ್ ಫಲಕಗಳಲ್ಲಿ ಮಾಜಿ ಐಪಿಎಸ್ ಅಧಿಕಾರಿ ಎಸ್.ಆರ್.ದರಪುರಿ ಅವರ ಹೆಸರೂ ಇದೆ. ಸರ್ಕಾರದ ಕ್ರಮಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಅವರು, ‘ಸ್ಥಳೀಯ ಆಡಳಿತ ವಿರುದ್ಧ ನಾನು ಮಾನನಷ್ಟ ಮೊಕದ್ದಮೆ ಹೂಡಲಿದ್ದೇನೆ’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>